ಶಿಕ್ಷಕಿಯನ್ನು ಚುಡಾಯಿಸಿದ ಸಚಿವರ ಮಗ ಪೊಲೀಸರ ವಶಕ್ಕೆ
ಹೈದರಾಬಾದ್, ಮಾ. 06: ಆಂಧ್ರ ಪ್ರದೇಶದ ಸಮಾಜ ಕಲ್ಯಾಣ ಇಲಾಖೆ ಸಚಿವ ರವೆಲ ಕಿಶೋರ್ ಬಾಬು ಅವರ ಮಗ ಸುಶೀಲ್ ಕುಮಾರ್ ಮತ್ತು ಆತನ ಕಾರು ಚಾಲಕ ರಮೇಶ್ ಎಂಬುವವರನ್ನು ಭಾನುವಾರ ಬೆಳಗ್ಗೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಶಾಲಾ ಶಿಕ್ಷಕಿಯೊಬ್ಬರನ್ನು ಚುಡಾಯಿಸಿದ ಆರೋಪದ ಮೇಲೆ ಇವರಿಬ್ಬರ ಮೇಲೆ ಬಂಜಾರ್ ಹಿಲ್ಸ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. [ಪತ್ನಿ ಪೀಡನೆ, ಜನಪ್ರಿಯ ನಟ ಬಂಧನ, ಬಿಡುಗಡೆ]

ಭಾನುವಾರ ಬೆಳಗ್ಗೆ ಆರೋಪಿಗಳಿಬ್ಬರು ಠಾಣೆಗೆ ಖುದ್ದು ಬಂದು ಶರಣಾಗತರಾಗಿದ್ದಾರೆ. ಇಬ್ಬರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಸಚಿವರ ಮಗ ಸುಶೀಲ್ ಅವರು ಬಂಜಾರ ಹಿಲ್ಸ್ ಬಳಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರನ್ನು ಚುಡಾಯಿಸಿದ್ದಾರೆ. ಸುಮಾರು 1 ಕಿ.ಮೀ ದೂರದ ತನಕ ಆಕೆಯನ್ನು ಹಿಂಬಾಲಿಸಿ ರೇಗಿಸಿದ್ದಾರೆ. ಕೊನೆಗೆ ಆಕೆಯನ್ನು ಕಾರಿನೊಳಗೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಎಚ್ಚೆತ್ತುಕೊಂಡ ಶಿಕ್ಷಕಿ ಆಲ್ಲಿಂದ ಪರಾರಿಯಾಗಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿ ಘಟನೆಯ ಬಗ್ಗೆ ವಿವರ ಕಲೆಹಾಕಿದ ಬಳಿಕ ಸುಶೀಲ್ ಹಾಗೂ ರಮೇಶ್ ಅಲಿಯಾಸ್ ಅಪ್ಪ ರಾವ್ ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಲಾಗಿತ್ತು. ಭಾನುವಾರ ಠಾಣೆಗೆ ಬಂದ 24 ವರ್ಷ ವಯಸ್ಸಿನ ಸುಶೀಲ್, ಪೊಲೀಸರ ಮುಂದೆ ಶರಣಾಗತರಾಗಿದ್ದಾರೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications