ಸತ್ಯಮೇವ ಜಯತೇ ಚಿತ್ರದ ವಿರುದ್ಧ ದೂರು ನೀಡಿದ ಮುಸ್ಲಿಮರು
ಹೈದರಾಬಾದ್, ಜುಲೈ 31: ಜಾನ್ ಅಬ್ರಹಾಂ, ಮನೋಜ್ ಬಾಜಪೇಯಿ ಅಭಿನಯದ ಹಿಂದಿ ಚಿತ್ರ 'ಸತ್ಯಮೇವ ಜಯತೇ' ದ ದೃಶ್ಯವೊಂದರ ಬಗ್ಗೆ ಮುಸ್ಲಿಮರ ಒಂದು ಪಂಗಡದಿಂದ ಆಕ್ಷೇಪ ವ್ಯಕ್ತವಾಗಿದೆ.
ಶಿಯಾ ಸಮುದಾಯದ ಮುಸ್ಲಿಮರಿಂದ ಆಕ್ಷೇಪ ವ್ಯಕ್ತವಾಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ನೀಡಿ, ಚಿತ್ರ ತಂಡ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಸತ್ಯಮೇವ ಜಯತೇ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ. ಆದರೆ, ಚಿತ್ರದ ಟ್ರೈಲರ್ ನೋಡಿದ್ದೇವೆ. ಇದರಿಂದ ಬರುವ 'ಮಾತಂ' (ಸಂತಾಪ ಸೂಚಿಸುವ ದೃಶ್ಯ) ಕ್ಲಿಪ್ಪಿಂಗ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಶಿಯಾ ಸಮುದಾಯದ ಮುಖ್ಯಸ್ಥ ನಿಸಾರ್ ಹೈದರ್ ಅವರು ದೂರು ನೀಡಿದ್ದಾರೆ ಎಂದು ದಕ್ಷಿಣ ವಲಯದ ಡಿಸಿಪಿ ವಿ ಸತ್ಯನಾರಾಯಣ ಹೇಳಿದ್ದಾರೆ.
ಚಿತ್ರದ ದೃಶ್ಯವೊಂದರನ್ನು ಕತ್ತರಿಸಿ ಹಾಕುವಂತೆ ಶಿಯಾ ಸಮುದಾಯದವರು ಕೋರಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಕ್ರಮ ಜರುಗಿಸುವಂತೆ ದಬೀರ್ ಪುರ್ ಪೊಲೀಸರಿಗೆ ಸೂಚಿಸಲಾಗಿದ್ದು, ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಸತ್ಯನಾರಾಯಣ ಹೇಳಿದರು.
Hyderabad: A case was registered yesterday against upcoming Bollywood movie 'Satyameva Jayate' by Shiya community members on charges of hurting religious sentiments in connection with a 'maatam' (mourning) clipping shown in the movie. pic.twitter.com/zu9pTGOSX4
— ANI (@ANI) July 31, 2018
ಮಿಲಾಸ್ ಜವೇರಿ ನಿರ್ದೇಶನದ ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಲಿದ್ದು, ಚಿತ್ರ ತಂಡದ ವಿರುದ್ಧ ಐಪಿಸಿ ಸೆಕ್ಷನ್ 295, 295 ಎ ಹಾಗೂ 153-ಎ ಅನ್ವಯ ದೂರು ದಾಖಲಿಸಿಕೊಳ್ಳಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications