600 ಹುಡುಗಿಯರ ಅರೆಬೆತ್ತಲೆ ಫೋಟೊ ಸಂಗ್ರಹಿಸಿ ಬ್ಲಾಕ್ ಮೇಲ್; ಕೊನೆಗೂ ಸಿಕ್ಕಿಬಿದ್ದ ಟೆಕ್ಕಿ
ಹೈದರಾಬಾದ್, ಆಗಸ್ಟ್ 24: ಕೆಲಸ ಕೊಡಿಸುತ್ತೇನೆಂದು ನೆಪ ಹೇಳಿ ಹುಡುಗಿಯರ ಅರೆಬೆತ್ತಲೆ ಚಿತ್ರಗಳನ್ನು ಸಂಗ್ರಹಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಟೆಕ್ಕಿಯೊಬ್ಬ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಸೈಬೆರಾಬಾದ್ ಪೊಲೀಸರು, ಸ್ಥಳೀಯ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಚೆನ್ನೈನಲ್ಲಿ ಪ್ರದೀಪ್ (33) ಎಂಬಾತನನ್ನು ಬಂಧಿಸಿದ್ದಾರೆ. ಈತ ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಸುಮಾರು 600 ಯುವತಿಯರಿಗೆ ಕೆಲಸ ಕೊಡಿಸುತ್ತೇನೆ ಎಂದು ಮೋಸ ಮಾಡಿರುವುದಾಗಿ ತಿಳಿದುಬಂದಿದೆ.
ಚೆನ್ನೈನ ಐಟಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಪ್ರದೀಪ್, ತಾನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಮಾನವ ಸಂಪನ್ಮೂಲ ಅಧಿಕಾರಿ ಎಂದು ಹೇಳಿಕೊಂಡು, ಸುಂದರ ಹುಡುಗಿಯರನ್ನು ನೇಮಕ ಮಾಡಿಕೊಳ್ಳುವಂತೆ ಕಂಪನಿ ಸೂಚಿಸಿದೆ ಎಂದು ಕರೆ ಮಾಡಿ ಯುವತಿಯರ ಸಂದರ್ಶನ ಮಾಡುತ್ತಿದ್ದ. ಆ ಹುಡುಗಿಯರು ಈತನ ಮಾತನ್ನು ನಂಬುತ್ತಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ, ನಮ್ಮ ಕಂಪನಿ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತದೆ. ಹೀಗಾಗಿ ನಿಮ್ಮ ವಿವಿಧ ಭಂಗಿಗಳ, ದೇಹದ ಸಂಪೂರ್ಣ ವಿಡಿಯೋ ಕಳುಹಿಸಿ ಎಂದು ಕೇಳುತ್ತಿದ್ದ. ಬಳಿಕ ವಾಟ್ಸಪ್ ವಿಡಿಯೋ ಕಾಲ್ ಮಾಡಿ ಬಟ್ಟೆ ತೆಗೆಯುವಂತೆ ಹೇಳುತ್ತಿದ್ದ. ಹುಡುಗಿಯರು ಬಟ್ಟೆ ತೆಗೆಯುವುದನ್ನು ಸಾಫ್ಟ್ ವೇರ್ ಮೂಲಕ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ.

ನಂತರ ಆ ಫೋಟೊಗಳನ್ನು ಇಟ್ಟುಕೊಂಡು ಹುಡುಗಿಯರಿಗೆ ಕಾಲ್ ಮಾಡಿ ಬ್ಲಾಕ್ ಮೇಲೆ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಮದುವೆಯಾಗಿದ್ದ ಪ್ರದೀಪ್, ಹೆಂಡತಿ ಕೆಲಸಕ್ಕೆ ಹೋಗುತ್ತಿದ್ದಂತೆ, ಕ್ಲಾಸಿಫೈಡ್ ಪೋರ್ಟಲ್ ಒಂದರಲ್ಲಿ ಪ್ರಕಟಗೊಳ್ಳುತ್ತಿದ್ದ ಯುವತಿಯರ ಫೋನ್ ನಂಬರ್ ಗಳನ್ನು ಪಡೆದು ಅವರಿಗೆ ಕರೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಮೊಬೈಲನ್ನು ಹೆಚ್ಚಿನ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಮಹಾರಾಷ್ಟ್ರ, ದೆಹಲಿ ಸೇರಿದಂತೆ 16 ರಾಜ್ಯಗಳ 600ಕ್ಕೂ ಹೆಚ್ಚು ಯುವತಿಯರಿಗೆ ಮೋಸ ಮಾಡಿದ್ದ ವಿಚಾರವನ್ನು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ವಂಚನೆಗೆ ಒಳಗಾದ ಯುವತಿಯರಿಂದ ಲಕ್ಷಗಟ್ಟಲೆ ಹಣ ತೆಗೆದುಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications