ಮಾನಸಿಕ ಒತ್ತಡ ತಾಳಲಾರದೆ ವಾರ್ತಾವಾಚಕಿ ಆತ್ಮಹತ್ಯೆ
ಹೈದರಾಬಾದ್, ಏಪ್ರಿಲ್ 02: ತೆಲುಗು ಸುದ್ದಿ ವಾಹಿನಿ ವಿ6ನ ವಾರ್ತಾವಾಚಕಿ ರಾಧಿಕಾ ರೆಡ್ಡಿ ಅವರು ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಮಾನಸಿಕ ಖಿನ್ನತೆ ಬಳಲುತ್ತಿದ್ದ ರಾಧಿಕಾ ಅವರು ಅಪಾರ್ಟ್ಮೆಂಟ್ನ ಐದನೇ ಅಂತಸ್ತಿನ ಮಹಡಿಯಿಂದ ಕೆಳಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೈದರಾಬಾದಿನ ಮೂಸಪೇಟೆಯ ಶ್ರೀವಿಲ್ಲಾ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ 36 ವರ್ಷದ ರಾಧಿಕಾ ರೆಡ್ಡಿ ಅವರು ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ನೋಟ್ ನಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ.
ಭಾನುವಾರ ರಾತ್ರಿ ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಮನೆಗೆ ಬಂದ ಕೆಲ ಹೊತ್ತಿನಲ್ಲೇ ಟೆರೇಸ್ಗೆ ತೆರಳಿ ಅಲ್ಲಿಂದ ಕೆಳಗೆ ಹಾರಿದ್ದಾರೆ. ರಾಧಿಕಾ ಅವರ ತಲೆ, ಕಾಲು ಮುಂತಾದೆಡೆ ಗಂಭೀರ ಗಾಯವಾಗಿತ್ತು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕೂಕಟ್ ಪಲ್ಲಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಮಜೀದ್ ಅವರು ತಿಳಿಸಿದ್ದಾರೆ.

ರಾಧಿಕಾ ಬ್ಯಾಗ್ನಲ್ಲಿ ಸಿಕ್ಕಿರುವ ಡೆತ್ನೋಟ್ನಲ್ಲಿ 'ನನ್ನ ಮೆದುಳೇ ನನ್ನ ಶತ್ರು. ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ' ಎಂದು ಬರೆಯಲಾಗಿದೆ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
ಕಳೆದ 6 ತಿಂಗಳ ಹಿಂದೆ ಗಂಡನಿಗೆ ವಿಚ್ಛೇಧನ ಪಡೆದಿದ್ದ ರಾಧಿಕಾ ಅವರು ಪೋಷಕರೊಂದಿಗೆ ವಾಸವಾಗಿದ್ದರು. ಅವರಿಗೆ 14 ವರ್ಷದ ಮಗನಿದ್ದು, ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂದು ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications