ಸೈಕೋ ವ್ಯಕ್ತಿಯಿಂದ ತಾಯಿ, ಪತ್ನಿ, ಪುತ್ರಿ ಕಗ್ಗೊಲೆ
ಹೈದ್ರಾಬಾದ್, ಮೇ 15: ಮಾನಸಿಕ ಖಿನ್ನತೆಗೊಳಗಾಗಿ ಸೈಕೋನಂತೆ ಆಡುತ್ತಿದ್ದ ವ್ಯಕ್ತಿಯೊಬ್ಬ ಶುಕ್ರವಾರ ಮುಂಜಾನೆ ಕತ್ತಿಯಿಂದ ತನ್ನ ಕುಟುಂಬ ಸದಸ್ಯರನ್ನು ಕೊಚ್ಚಿ ಕೊಂದು, ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ಹೊರವಲಯದ ಪಹಾಡಿ ಶರೀಫಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಸರಣಿ ಹತ್ಯೆ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಹೈದ್ರಾಬಾದ್ ಬಾಲಾಪುರದಲ್ಲಿ ರಾಮರೆಡ್ಡಿ ಎಂಬಾತ ತಾಯಿ, ಪತ್ನಿ, ಪುತ್ರಿಯನ್ನು ಕೊಂದು ಹಾಕಿದ್ದಾರೆ. ಮೃತರನ್ನು ತಾಯಿ ಸುಭದ್ರಾ (65), ಪತ್ನಿ ರಾಧಿಕಾ (40) ಮತ್ತು ಪುತ್ರಿ ಅಕ್ಷಯಾ (14) ಎಂದು ಗುರುತಿಸಲಾಗಿದೆ. ರಾಮರೆಡ್ಡಿಯ ಹಿರಿಯ ಮಗಳು ಅಪ್ಪನ ಆರ್ಭಟ ಕಂಡು ಬೆಚ್ಚಿ ಬಿದ್ದು ಬಾತ್ ರೂಮಿನಲ್ಲಿ ಬಚ್ಚಿಟ್ಟುಕೊಂಡು ಜೀವ ಉಳಿಸಿಕೊಂಡಿದ್ದಾಳೆ.
ಕಳೆದ ಒಂದು ತಿಂಗಳಿನಿಂದ ಮನೆಗೆ ಸರಿಯಾಗಿ ಬರುತ್ತಿರಲಿಲ್ಲ.ಇವರ ಮನೆಯ ಮೊದಲ ಮಹಡಿಯಲ್ಲಿ ರಾಮರೆಡ್ಡಿ ಸಹೋದರ ವಾಸವಾಗಿದ್ದಾರೆ. ಇತ್ತೀಚೆಗೆ ಆಸ್ತಿ ವಿಚಾರವಾಗಿ ಸಹೋದರರು ಮತ್ತು ತಾಯಿ ಜತೆ ಜಗಳ ನಡೆಯುತ್ತಿದ್ದರಿಂದ ರಾಮರೆಡ್ಡಿ ಖಿನ್ನತೆಗೆ ಒಳಗಾಗಿದ್ದ. ನಿನ್ನೆ ರಾತ್ರಿ ಸಹ ತಾಯಿ-ಪತ್ನಿ ಜತೆ ರಾಮರೆಡ್ಡಿ ಜಗಳವಾಡಿದ್ದ. ನಂತರ ಎಲ್ಲರೂ ಊಟ ಮಾಡಿ ಮಲಗಿದ್ದರು.

ಶುಕ್ರವಾರ ಮುಂಜಾನೆ ರಾಮರೆಡ್ಡಿ ಅವರ ತಂದೆ ಮುಂಜಾನೆ ವಿಹಾರಕ್ಕಾಗಿ ಹೊರಕ್ಕೆ ಹೋದ ಸಮಯ ನೋಡಿಕೊಂಡು ಮನೆಯವರೆಲ್ಲರ ಮೇಲೆ ಕತ್ತಿ ಬೀಸಿ ಕರುಣೆ ಇಲ್ಲದೆ ಕತ್ತು ಕೊಯ್ದು, ಭೀಕರವಾಗಿ ಕೊಲೆ ಮಾಡಿದ್ದಾನೆ. ನಂತರ ಮನೆಯ ಬಳಿಯಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈತ ಬಾವಿಗೆ ಹಾರಿದ್ದನ್ನು ಗಮನಿಸಿದ ನೆರೆಹೊರೆಯವರು ಗಮನಿಸಿ ಆತನನ್ನು ರಕ್ಷಿಸಿದ್ದಾರೆ.
ಪಹಾಡಿ ಶರೀಫಾ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ರಾಮರೆಡ್ಡಿಯನ್ನು ಬಂಧಿಸಿ, ಮೂರೂ ಶವಗಳನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಘಟನೆ ನಡೆಯಬೇಕಿತ್ತು. ನಡೆದಿದೆ ಅಷ್ಟೇ ಎಂದು ಹೇಳಿರುವ ರಾಮರೆಡ್ಡಿ ಇನ್ನೂ ಕೊಲೆಗೆ ನಿಖರ ಕಾರಣ ಕೊಟ್ಟಿಲ್ಲ. ತನಿಖೆ ಮುಂದುವರೆದಿದೆ. (ಒನ್ ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications