ಹೈದರಾಬಾದ್: ಪತ್ನಿಯನ್ನು ಕೊಂದು ದುಬೈಗೆ ಹಾರಿದ್ದ ಪತಿ ಬಂಧನ
ಹೈದರಾಬಾದ್, ಜುಲೈ 05: ಪತ್ನಿಯನ್ನು ಕೊಂದು ದುಬೈಗೆ ಪರಾರಿಯಾಗಿದ್ದ ವ್ಯಕ್ತಿಯೊಬ್ಬನನ್ನು ರಾಯಭಾರ ಕಚೇರಿಯ ನೆರವಿನಿಂದ ಪೊಲೀಸರು ಬಂಧಿಸಿದ ಘಟನೆ ಹೈದರಾಬಾದಿನಲ್ಲಿ ನಡೆದಿದೆ.
ಮೇ ತಿಂಗಳಿನಲ್ಲಿ ಅಕ್ಬರ್ ಅಲಿ ಖಾನ್ ಎಂಬಾತ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಪತ್ನಿಯ ಮೇಲೆ ಸಂಶಯ ಹೊಂದಿದ್ದ ಈತ ತನ್ನ ತಾಯಿಯ ನೆರವಿನಿಂದ ಪತ್ನಿಯನ್ನೇ ಕೊಲೆ ಮಾಡಿದ್ದ. ನಂತರ ಆಕೆಯ ಮೃತದೇಹವನ್ನು ಚೀಲವೊಂದರಲ್ಲಿ ಪಾರ್ಸೆಲ್ ನಂತೆ ತುಂಬಿ ರಸ್ತೆಯ ಬದಿಯಲ್ಲಿ ಬಿಸಾಡಿದ್ದ.
ಘಟನೆಯ ನಂತರ ಪೊಲೀಸರ ಭಯಕ್ಕೆ ದುಬೈಗೆ ಪರಾರಿಯಾಗಿದ್ದ. ಆತ ದುಬೈಗೆ ಹಾರಿದ್ದರಿಂದಲೇ ಪೊಲೀಸರಿಗೆ ಆತನ ಮೇಲೆ ಮತ್ತಷ್ಟು ಅನುಮಾನ ಹುಟ್ಟಿತ್ತು. ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆತನನ್ನು ಭಾರತಕ್ಕೆ ವಾಪಸ್ ಕರೆಸಿ, ಹೈದರಾಬಾದಿನಲ್ಲಿ ಬಂಧಿಸಲಾಗಿದೆ.

ಸಾಕ್ಷ್ಯ ನಾಶಕ್ಕೆ ನೆರವು ನೀಡಿ, ಆರೋಪಿಗೆ ವಿಮಾನ ಟಿಕೆಟ್ ಖರೀದಿಸಿಕೊಟ್ಟು ಪರಾರಿಯಾಗುವುದಕ್ಕೆ ಸಹಾಯ ಮಾಡಿದ ಆರೋಪಿಯ ತಾಯಿ ಸೇರಿದಂತೆ ಮೂವರು ಕುಟುಂಬಸ್ಥರನ್ನು ಸಹ ಪೊಲೀಸರು ಬಂಧಿಸಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ











Click it and Unblock the Notifications