ಪಶುವೈದ್ಯೆ ಅತ್ಯಾಚಾರಿಗಳ ಮೃತದೇಹಕ್ಕೆ 2ನೇ ಬಾರಿ ಮರಣೋತ್ತರ ಪರೀಕ್ಷೆ
ಹೈದ್ರಾಬಾದ್, ಡಿಸೆಂಬರ್.22: ಹೈದ್ರಾಬಾದ್ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗಳನ್ನು ನಕಲಿ ಎನ್ ಕೌಂಟರ್ ಮೂಲಕ ಹತ್ಯೆಗಯ್ಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ಮೃತದೇಹವನ್ನು ಎರಡನೇ ಬಾರಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ಹೈಕೋರ್ಟ್ ಆದೇಶಿಸಿದೆ.
ತೆಲಂಗಾಣ ಹೈಕೋರ್ಟ್ ಆದೇಶದ ಬೆನ್ನಲ್ಲೇ ನಾಲ್ವರು ಆರೋಪಿಗಳ ಮೃತದೇಹವನ್ನು ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸಲು ಏಮ್ಸ್ ಆಸ್ಪತ್ರೆಯು ತಜ್ಞವೈದ್ಯರ ತಂಡವನ್ನು ರಚಿಸಲಾಗಿದೆ. ಆಲ್ ಇಂಡಿಯಾ ಇನ್ಸ್ ಟಿಟ್ಯೂಟ್ಸ್ ಆಫ್ ಮೆಡಿಕಲ್ ಸೈನ್ಸ್ (AIIMS)ನ ವಿಧಿವಿಜ್ಞಾನ ವಿಭಾಗದ ಮೂವರು ವೈದ್ಯರು ಈ ತಂಡದಲ್ಲಿದ್ದಾರೆ.
ಡಾ.ಸುಧೀರ್ ಗುಪ್ತಾ ನೇತೃತ್ವದ ತಂಡವು ನಾಲ್ವರು ಆರೋಪಿಗಳ ಮೃತದೇಹವನ್ನು ಎರಡನೇ ಬಾರಿ ಮರಣೋತ್ತರ ಪರೀಕ್ಷೆಗೊಳಪಡಿಸಲಿದ್ದಾರೆ. ಇನ್ನು, ಈ ತಂಡದಲ್ಲಿ ವಿಧಿವಿಜ್ಞಾನ ವಿಭಾಗದ ಡಾ.ಆದರ್ಶ್ ಕುಮಾರ್, ಡಾ.ಅಭಿಷೇಕ್ ಯಾದವ್ ಹಾಗೂ ಡಾ.ವರುಣ್ ಚಂದ್ರ ಸೇರಿದ್ದಾರೆ.

ಎರಡನೇ ಬಾರಿ ಮರಣೋತ್ತರ ಪರೀಕ್ಷೆಗೆ ತಯಾರಿ
ಎನ್ ಕೌಂಟರ್ ನಲ್ಲಿ ಪ್ರಾಣ ಬಿಟ್ಟಿರುವ ನಾಲ್ವರು ಆರೋಪಿಗಳ ಮೃತದೇಹವನ್ನು ಡಿಸೆಂಬರ್.23ರ ಸೋಮವಾರ ಮರಣೋತ್ತರ ಪರೀಕ್ಷೆಗೊಳಪಡಿಸಲು ವೈದ್ಯರ ತಂಡವು ತಯಾರಿ ನಡೆಸಿದೆ. ಹೈದ್ರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬಾನುವಾರವೇ ಹೈದ್ರಾಬಾದ್ ಗೆ ವೈದ್ಯರ ತಂಡ ಪ್ರಯಾಣ
ಸೋಮವಾರ ನಾಲ್ವರು ಆರೋಪಿಗಳ ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಲಿರುವ ವೈದ್ಯ ತಂಡ ಇನ್ನೇನು ಸಂಜೆ ವೇಳೆಗೆ ತೆಲಂಗಾಣಕ್ಕೆ ತೆರಳಲಿದೆ. ಡಿಸೆಂಬರ್.23ರಂದು ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್.23ರೊಳಗೆ ವರದಿಗೆ ಹೈಕೋರ್ಟ್ ಸೂಚನೆ
ಹೈದ್ರಾಬಾದ್ ಪೊಲೀಸರು ನಕಲಿ ಎನ್ ಕೌಂಟರ್ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿಸೆಂಬರ್.6ರಂದೇ ಮೊದಲ ಬಾರಿಗೆ ನಾಲ್ವರು ಆರೋಪಿಗಳ ಮೃತದೇಹವನ್ನು ಮೆಹಬೂಬ್ ನಗರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು. ಇತ್ತೀಚಿಗೆ ಮತ್ತೆ ವಿಚಾರಣೆ ನಡೆಸಿದ ಹೈಕೋರ್ಟ್, ಡಿಸೆಂಬರ್.23ರ ಸಂಜೆ 5 ಗಂಟೆಯೊಳಗೆ ಮರಣೋತ್ತರ ಪರೀಕ್ಷೆ ನಡೆಸಿ, ವರದಿಯನ್ನು ಹೈಕೋರ್ಟ್ ರಿಜಿಸ್ಟರ್ ಜನರಲ್ ಗೆ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ.

ಎನ್ ಕೌಂಟರ್ ನಲ್ಲಿ ನಾಲ್ವರು ಆರೋಪಿಗಳು ಸಾವು
ಕಳೆದ ಡಿಸೆಂಬರ್.05ರ ಗುರುವಾರ ವಿಚಾರಣೆ ನಡೆಸಲೆಂದು ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶ್ವನಾಥ್ ಸಜ್ಜನರ್ ನೇತೃತ್ವದ ಅಧಿಕಾರಿಗಳ ತಂಡ ವಿಚಾರಣೆ ಬಳಿಕ ಆರೋಪಿ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಚನ್ನಕೇಶವುಲುವನ್ನು ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗಿತ್ತು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದರು. ಬೆಳಗ್ಗೆ 3.30ರ ವೇಳೆಗೆ ಹೈದರಾಬಾದ್ ಹೊರವಲಯದ ಚಟಾನ್ ಪಲ್ಲಿ ಬ್ರಿಡ್ಜ್ ಬಳಿ ಪೊಲೀಸರು ನಡೆಸಿದ ಎನ್ ಕೌಂಟರ್ನಲ್ಲಿ ನಾಲ್ವರು ಆರೋಪಿಗಳು ಬಲಿಯಾಗಿದ್ದರು.
ಇಲ್ಲಿ ತೆಲಂಗಾಣ ಪೊಲೀಸರು ನಡೆಸಿದ್ದು ನಕಲಿ ಎನ್ ಕೌಂಟರ್ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತೆಲಂಗಾಣ ಹೈಕೋರ್ಟ್ ನಾಲ್ವರು ಆರೋಪಿಗಳ ಮೃತದೇಹವನ್ನು ಎರಡನೇ ಬಾರಿ ಮರಣೋತ್ತರ ಪರೀಕ್ಷೆಗೊಳಪಡಿಸಿ ನಂತರದಲ್ಲಿ ಅವುಗಳನ್ನು ಸಂಬಂಧಿಕರಿಗೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications