ಧೈರ್ಯವಿದ್ದರೆ ನನ್ನ ವಿರುದ್ಧ ನಿಂತು ಗೆಲ್ಲಿ: ಅಮಿತ್ ಶಾಗೆ ಓವೈಸಿ ಸವಾಲು
ಧೈರ್ಯವಿದ್ದರೆ 2019ರ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಚುನಾವಣೆಗೆ ನಿಂತು ಗೆಲ್ಲಿ ನೋಡೋಣ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ಎಐಎಂ ಐಎಂ ಅಧ್ಯಕ್ಷ, ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ ಬಹಿರಂಗವಾಗಿಯೇ ಸವಾಲೆಸಿದಿದ್ದಾರೆ.
ಹೈದರಾಬಾದ್, ಮೇ 26: ಧೈರ್ಯವಿದ್ದರೆ 2019ರ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಚುನಾವಣೆಗೆ ನಿಂತು ಗೆಲ್ಲಿ ನೋಡೋಣ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ಎಐಎಂ ಐಎಂ ಅಧ್ಯಕ್ಷ, ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ ಬಹಿರಂಗವಾಗಿಯೇ ಸವಾಲೆಸಿದಿದ್ದಾರೆ.
ಹೈದರಾಬಾದ್ ಪ್ರವಾಸದ ಸಮಯದಲ್ಲಿ, ಇಲ್ಲಿನ ಐದು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆಲ್ಲುವ ಬಗ್ಗೆ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, 'ನಿಮ್ಮ ಪಕ್ಷ ಹೈದರಾಬಾದಿನಲ್ಲಿ ಚುನಾವಣೆಗೆ ನಿಲ್ಲುವ ಬಗ್ಗೆ ನನ್ನ ತಕರಾರಿಲ್ಲ, ಆದರೆ ಬೇರೆ ಯಾರನ್ನೋ ಯಾಕೆ ಚುನಾವಣೆಗೆ ನಿಲ್ಲಿಸುತ್ತೀರಾ? ಧೈರ್ಯವಿದ್ದರೆ ನೀವೇ ಚುನಾವಣೆಗೆ ನಿಂತು ಗೆಲ್ಲಿ' ಎಂದು ಅವರು ಶಾ ಅವರನ್ನು ಲೇವಡಿ ಮಾಡಿದ್ದಾರೆ.[ಉಪ್ರದಲ್ಲಿ ಬಿಜೆಪಿಗೆ ಗೋವು ಮಮ್ಮಿ, ಈಶಾನ್ಯ ರಾಜ್ಯದಲ್ಲಿ ಯಮ್ಮಿ: ಒವೈಸಿ]

ಹೈದರಾಬಾದ್ ಗೆಲ್ಲೋದಂದ್ರೆ ಕೇಕ್ ತಿಂದಷ್ಟು ಸುಲಭವಲ್ಲ, ನಾವಿಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ, ಸಿಕಂದರಾಬಾದಿನ ಒಂದು ಲೋಕಸಭಾ ಕ್ಷೇತ್ರ, ಜೊತೆಗೆ ಗೋಶಮಹಲ್, ಅಂಬರಪೇಟೆ, ಮುಶೀರ್ ಬಾದ್, ಕೈರ್ತಾಬಾದ್, ಉಪ್ಪಾಳ ವಿಧಾನ ಸಭಾ ಕ್ಷೇತ್ರಗಳನ್ನೂ ಸೋಲಲಿರುವ ಬಿಜೆಪಿಗೆ ಜನರು ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.[ಭಾರತ್ ಮಾತಾ ಕೀ ಜೈ ಅನ್ನೋಲ್ಲಾ ಎಂದಿದ್ದ ಓವೈಸಿ ಬಾಯಿಯಿಂದ ಜೈಹಿಂದ್]
ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿದ್ದ ಅಮಿತ್ ಶಾ ಕುರಿತು ವ್ಯಂಗ್ಯ ಮಾಡಿದ ಅವರು, ಇದ್ದಕ್ಕಿದ್ದಂತೆ ಅಮಿತ್ ಶಾ ಗೆ ತೆಲಂಗಾಣದ ಮೇಲೆ ಪ್ರೀತಿ ಉಕ್ಕುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ತೆಲಂಗಾಣಕ್ಕೆ ಕೇಂದ್ರ ಸರ್ಕಾರ ನೀಡಿದ ಒಂದು ಕೋಟಿ ರೂ ಅನುದಾನದ ಬಗ್ಗೆ ಮಾತನಾಡಿದ ಅವರು, ಅದನ್ನೇನು ಅಮಿತ್ ಶಾ ತಮ್ಮ ಜೇಬಿನಿಂದ ಕೊಟ್ಟಿದ್ದಾರೆಯೇ? ನಾವೇನು ಭಿಕ್ಷುಕರಲ್ಲ, ಕೇಂದ್ರದಿಂದ ಅನುದಾನ ಪಡೆಯುವುದು ನಮ್ಮ ಸಾಂವಿಧಾನಿಕ ಹಕ್ಕು ಎಂದಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications