ಚಿತ್ರಗಳಲ್ಲಿ: ತಿಮ್ಮಪ್ಪನ ಹಳೆ ಹರಕೆ ತೀರಿಸಿಕೊಂಡ ಸಿದ್ದರಾಮಯ್ಯ
ಹೈದರಾಬಾದ್,ಜ.27: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಪತಿಗೆ ತೆರಳಿ ತಮ್ಮ ಹಳೆ ಹರಕೆ ತೀರಿಸಿಕೊಂಡಿದ್ದಾರೆ. ವಿವಾಹ ವಾರ್ಷಿಕೋತ್ಸವದ ನೆಪದಲ್ಲಿ ಏಳುಬೆಟ್ಟದ ಒಡೆಯನನ್ನು ಕಂಡ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದೆ ಎಂದಿದ್ದಾರೆ.
ಸೋಮವಾರ ಸಂಜೆಯೇ ತಿರುಪತಿಗೆ ತೆರಳಿದ್ದ ಅವರು, ಮಂಗಳವಾರ ಮುಂಜಾನೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ ಅವರನ್ನು ತಿರುಮಲ ತಿರುಪತಿ ದೇವಸ್ಥಾನಂನ ಕಾರ್ಯಕಾರಿ ಅಧಿಕಾರಿ ಕೆಎಸ್ ಶ್ರೀನಿವಾಸ ರಾಜು ಹಾಗೂ ಇನ್ನಿತರ ಅಧಿಕಾರಿಗಳು ಬರಮಾಡಿಕೊಂಡರು.
ರಂಗಾನಾಯಕುಲ ಮಂಟಪದಲ್ಲಿ ವೇದ ಘೋಷಗಳೊಂದಿಗೆ ಸಿದ್ದರಾಮಯ್ಯ ಅವರಿಗೆ ವೇದ ಪಂಡಿತರು ಆಶೀರ್ವಚನ ನೀಡಿದರು. ಶ್ರೀವಾರಿ ವಸ್ತ್ರವನ್ನು ನೀಡಿ ಗೌರವಿಸಲಾಯಿತು. [ತಿಮ್ಮಪ್ಪನ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ]
ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವ ಮಹದೇವ ಪ್ರಸಾದ್ಸಹ ಸಿಎಂ ಜೊತೆಗಿದ್ದರು. ಸಿಎಂ ಸ್ಥಾನಕ್ಕೇರಿದ ಬಳಿಕ ಮೊದಲ ಬಾರಿಗೆ ತಿರುಮಲಕ್ಕೆ ಭೇಟಿ ನೀಡಿದ್ದಾರೆ. [ಸಂಕಷ್ಟ ನಿವಾರಣೆಗಾಗಿ ತಿಮ್ಮಪ್ಪನಿಗೆ ಡಿವಿಎಸ್ ಮೊರೆ]
ಅದರೆ, ತಿರುಮಲಕ್ಕೆ ಭೇಟಿ ನೀಡುವ ಬಗ್ಗೆ ಎಂದೋ ನಿಶ್ಚಯಿಸಲಾಗಿತ್ತು. ಮನೆಯವರ ಹರಕೆ, ವಿವಾಹ ವಾರ್ಷಿಕೋತ್ಸವದ ದಿನ ತಿಮ್ಮಪ್ಪನನ್ನು ಕಾಣಬೇಕು ಎಂದರು ಹೀಗಾಗಿ ಬಿಡುವು ಮಾಡಿಕೊಂಡು ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ತಿರುಪತಿ ಭೇಟಿ ಚಿತ್ರಗಳು ಇಲ್ಲಿವೆ....

ದೇಗುಲ ಪ್ರದಕ್ಷಿಣೆ, ವಿಶೇಷ ಪೂಜೆ ಸಲ್ಲಿಕೆ
ನಾಡಿನ ಏಳಿಗೆಗಾಗಿ ಸಿದ್ದರಾಮಯ್ಯ ಅವರು ತಿರುಮಲ ತಿರುಪತಿ ದೇಗುಲಕ್ಕೆ ಮುಂಜಾನೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರ ಜೊತೆಗೆ ಸಚಿವರು ಹಾಗೂ ಅಧಿಕಾರಿಗಳು ಕಂಡು ಬಂದರು.

ತಿಮ್ಮಪ್ಪನ ದರ್ಶನದ ನಂತರ ಗ್ರೂಪ್ ಫೋಟೋ
ತಿಮ್ಮಪ್ಪನ ದರ್ಶನದ ನಂತರ ಗ್ರೂಪ್ ಫೋಟೋಗೆ ಸಿಎಂ ಸಿದ್ದರಾಮಯ್ಯ ಅವರು ಪೋಸ್ ನೀಡಿದ್ದು ಹೀಗೆ. ಸಿದ್ದರಾಮಯ್ಯ ಅವರ ಜೊತೆಗೆ ಸಚಿವ ಮಹದೇವ ಪ್ರಸಾದ್ ಹಾಗೂ ಟಿಟಿಡಿ ಹಿರಿಯ ಅಧಿಕಾರಿಗಳಿದ್ದರು.

ಟಿಟಿಡಿ ವತಿಯಿಂದ ಸಿಎಂ ಸಿದ್ದುಗೆ ಸ್ಮರಣಿಕೆ
ಟಿಟಿಡಿ ವತಿಯಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಮರಣಿಕೆ, ಆಶೀರ್ವಾದ ರೂಪದಲ್ಲಿ ಅವರ ಪತ್ನಿಗೆ ಕುಂಕುಮ, ಅರಿಶಿನ, ಶ್ರೀವಾರಿ ಪ್ರಸಾದ, ಕ್ಯಾಲೆಂಡರ್, ವಸ್ತ್ರ, ವೇದ ಮಂತ್ರಗಳಿರುವ ಪುಸ್ತಕವನ್ನು ನೀಡಲಾಯಿತು.

ಕನ್ನಡಿಗ ಪ್ರವಾಸಿಗರ ಬಗ್ಗೆ ಸಿಎಂ ಸಿದ್ದು
ತಿರುಮಲ ತಿರುಪತಿಗೆ ಆಗಮಿಸುವ ಕನ್ನಡಿಗ ಪ್ರವಾಸಿಗರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟಿಟಿಡಿ ಅಧಿಕಾರಿಗಳ ಬಳಿ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡರು. ಬಸ್ ಸೌಕರ್ಯ, ವಸತಿ ವ್ಯವಸ್ಥೆಯ ವಿವರ ಪಡೆದುಕೊಂಡರು.

ಟಿಟಿಡಿ ಅಧಿಕಾರಿಗಳ ಉಪಸ್ಥಿತಿ, ಕಾಳಜಿ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದು ಹೋಗುವ ತನಕ ಟಿಟಿಡಿ ಹಿರಿಯ ಅಧಿಕಾರಿಗಳು ಅವರ ಜೊತೆಯಲ್ಲಿದ್ದರು. ದಾಮೋದರನ್, ಉಪ ಕಾರ್ಯಕಾರಿ ಅಧಿಕಾರಿ ರಾಮರಾವ್, ಸೆಲ್ವಂ ಮುಂತಾದವರು ಸಿದ್ದರಾಮಯ್ಯ ಅವರ ಯೋಗಕ್ಷೇಮ ನೋಡಿಕೊಂಡರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications