ಮಿಶನ್ ಶಕ್ತಿ ಬಗ್ಗೆ ಯುಪಿಎಗೆ ಇಚ್ಛಾಶಕ್ತಿ ಕೊರತೆ: ಇಸ್ರೋ ಮಾಜಿ ಅಧ್ಯಕ್ಷ ಆರೋಪ
ಹೈದರಾಬಾದ್, ಮಾರ್ಚ್ 28: ಸಜೀವ ಉಪಗ್ರಹಗಳನ್ನು ಹೊಡೆದುರುಳಿಸುವ ಮಿಶನ್ ಶಕ್ತಿ ಯೋಜನೆ ದಶಕಗಳ ಹಿಂದೆಯೇ ಪ್ರಯೋಗವಾಗಬೇಕಿತ್ತು. ಆಗಲೂ ಭಾರತದ ವಿಜ್ಞಾನ ಲೋಕ ಅದಕ್ಕೆ ಸಮರ್ಥವಾಗಿತ್ತು. ಆದರೆ, ಆ ಕಾಲಘಟ್ಟದಲ್ಲಿ ಅದನ್ನು ಪರೀಕ್ಷಿಸಲು ರಾಜಕೀಯ ಇಚ್ಛಾಶಕ್ತಿಯೇ ಇರಲಿಲ್ಲ ಎಂದು ಇಸ್ರೋದ ಮಾಜಿ ಅಧ್ಯಕ್ಷ ಜಿ. ಮಾಧವನ್ ನಾಯರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಭಾರತವು ಉಪಗ್ರಹ ನಿಗ್ರಹ ತಂತ್ರಜ್ಞಾನ ಸಾಮರ್ಥ್ಯವನ್ನು ಯಶಸ್ವಿಯಾಗಿ ಪ್ರಯೋಗಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುಟುಕು ಭಾಷಣದಲ್ಲಿ ಬುಧವಾರ ಬಹಿರಂಗಪಡಿಸಿದ್ದರು. ಈ ಸಾಧನೆಗೆ ಡಿಆರ್ಡಿಒ ವಿಜ್ಞಾನಿಗಳ ಶ್ರಮವನ್ನು ಶ್ಲಾಘಿಸಿದ್ದರು. ಆದರೆ, ಇದು ರಾಜಕೀಯ ತಿರುವು ಪಡೆದುಕೊಂಡಿತ್ತು.
ಈ ಯೋಜನೆಗೆ ಆಗಿನ ಯುಪಿಎ ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಜಾರಿಗೆ ಬಂದಿದ್ದು. ಹಾಗಾಗಿ ಇದು ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕಾದ ಶ್ರೇಯಸ್ಸು ಎಂದು ಕಾಂಗ್ರೆಸ್ ಪ್ರತಿಪಾದಿಸಿತ್ತು. ಡಿಆರ್ಡಿಒ ಸ್ಥಾಪನೆಯಾಗಿದ್ದು ನೆಹರೂ ಅವರ ಕಾಲದಲ್ಲಿ. ಹೀಗಾಗಿ ನೆಹರೂ ಅವರಿಗೂ ಈ ಸಾಧನೆಯ ಪಾಲುದಾರರು ಎಂದು ಕಾಂಗ್ರೆಸ್ಸಿಗರು ಹೇಳಿದ್ದರು.
ಆದರೆ, ಬುಧವಾರ ಸಂಜೆ ಡಿಆರ್ಡಿಒ ಮಾಜಿ ಅಧ್ಯಕ್ಷ ಡಾ.ವಿ.ಕೆ. ಸಾರಸ್ವತ್ ಆಗಿನ ಯುಪಿಎ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. 2012-13ರ ಅವಧಿಯಲ್ಲಿ ಆಗಿನ ಯುಪಿಎ ಸರ್ಕಾರದ ಬಳಿ ಈ ಯೋಜನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದೆವು. ಆದರೆ, ಅವರಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿರಲಿಲ್ಲ. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಇದಕ್ಕೆ ಅನುಮೋದನೆ ದೊರಕಿತು ಎಂದು ಅವರು ಹೇಳಿಕೆ ನೀಡಿದ್ದರು.

2007ರಲ್ಲಿಯೇ ಸಾಮರ್ಥ್ಯವಿತ್ತು
ಚೀನಾವು 2007ರಲ್ಲಿ ತನ್ನ ಹಳೆಯ ಹವಾಮಾನ ಉಪಗ್ರಹವನ್ನು ಹೊಡೆದುರುಳಿಸಿತ್ತು. ಇದೇ ರೀತಿ ಹಳೆಯ, ನಿರುಪಯುಕ್ತ ಉಪಗ್ರಹವನ್ನು ನಿಷ್ಕ್ರಿಯಗೊಳಿಸಿ ನಾಶಪಡಿಸುವ ಯೋಜನೆಯನ್ನು ಕೈಗೊಳ್ಳುವ ತಂತ್ರಜ್ಞಾನ ಭಾರತದ ಬಳಿಯೂ ಆಗ ಇತ್ತು ಎಂದು ಮಾಧವನ್ ನಾಯರ್ ಹೇಳಿದ್ದಾರೆ.

ಈಗ ಮೋದಿಯಿಂದ ಆಯಿತು
ಈಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆ ಬಗ್ಗೆ ಆಸಕ್ತಿ ತಳೆದು ಅನುಮೋದನೆ ನೀಡಿದರು. ನಾವು ಇದನ್ನು ಮಾಡುತ್ತೇವೆ ಎಂದು ಹೇಳುವ ರಾಜಕೀಯ ಮನೋಬಲ ಮತ್ತು ಧೈರ್ಯ ಅವರಲ್ಲಿ ಇದೆ. ಇದನ್ನು ಈಗ ನಾವು ಈ ದೇಶಕ್ಕೆ ಪ್ರದರ್ಶನ ಮಾಡಿದ್ದೇವೆ ಎಂದು ನಾಯರ್ ತಿಳಿಸಿದ್ದಾರೆ.

ರಾಜಕೀಯ ನಿರ್ಧಾರದ ಗೈರು
ಹಾಗಾದರೆ ಭಾರತಕ್ಕೆ 2007ರಲ್ಲಿಯೇ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆಯನ್ನು ಪ್ರದರ್ಶಿಸುವ ಸಾಮರ್ತ್ಯವಿತ್ತೇ ಎಂಬ ಪ್ರಶ್ನೆಗೆ ನಾಯರ್, ಖಂಡಿತವಾಗಿಯೂ ಇತ್ತು ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ, ಅದನ್ನು ಕೈಗೆತ್ತಿಕೊಳ್ಳಲು ರಾಜಕೀಯ ನಿರ್ಧಾರ ತೆಗೆದುಕೊಳ್ಳುವ ಇಚ್ಛಾಶಕ್ತಿ ಇಲ್ಲದ ಕಾರಣ ಸಾಧ್ಯವಾಗಿರಲಿಲ್ಲ ಎಂದು ಯುಪಿಎ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ
'ನಾವು ಆಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ರಾಷ್ಟ್ರೀಯ ಭದ್ರತಾ ಸಮಿತಿ ಮುಂದೆ ಪ್ರಾತ್ಯಕ್ಷಿಕೆ ನೀಡಿದ್ದೆವು. ಆಗ ಆ ಚರ್ಚೆಗಳು ನಡೆಯುವಾಗ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಕೊಟ್ಟಿದ್ದೆವು. ಆದರೆ, ದುರದೃಷ್ಟವಶಾತ್ ಯುಪಿಎ ಸರ್ಕಾರದಿಂದ ನಮಗೆ ಸಕಾರಾತ್ಮಕ ಸ್ಪಂದನೆ ದೊರಕಲಿಲ್ಲ. ಹೀಗಾಗಿ ನಾವು ಮುಂದೆ ಹೋಗಲಿಲ್ಲ' ಎಂದು ಡಾ.ವಿ.ಕೆ. ಸಾರಸ್ವತ್ ಬುಧವಾರ ಹೇಳಿಕೆ ನೀಡಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications