ಮುತ್ತಿನ ನಗರಿಗೆ ಬಂದ ಇವಾಂಕಾಗೆ ಅದ್ದೂರಿ ಸ್ವಾಗತ
ಹೈದರಾಬಾದ್, ನವೆಂಬರ್ 28: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ, ಸಲಹೆಗಾರ್ತಿ ಇವಾಂಕಾ ಟ್ರಂಪ್ ಅವರು ಮಂಗಳವಾರ ಮುಂಜಾನೆ ಮುತ್ತಿನ ನಗರಿಗೆ ಆಗಮಿಸಿದ್ದಾರೆ.
ಗ್ಯಾಲರಿ : ಮುತ್ತಿನನಗರಿಯಲ್ಲಿ ಟ್ರಂಪ್ ಪುತ್ರಿ ಇವಾಂಕಾ
ಇಲ್ಲಿನ ಷಂಶಾಬಾದಿನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇವಾಂಕಾ ಟ್ರಂಪ್ ಹಾಗೂ ಸಂಗಡಿಗರಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಹೈದರಾಬಾದಿನಲ್ಲಿ ಇಂದು ಜಾಗತಿಕ ಉದ್ಯಮಶೀಲ ಶೃಂಗಸಭೆಯಲ್ಲಿ ಇವಾಂಕಾ ಪಾಲ್ಗೊಳ್ಳಲಿದ್ದಾರೆ. ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಹಾಗೂ ಇವಾಂಕಾ ಟ್ರಂಪ್ ಭಾಷಣ ಮಾಡಲಿದ್ದಾರೆ.
127ಕ್ಕೂ ಅಧಿಕ ದೇಶಗಳಿಂದ 1200 ಯುವ ಉದ್ಯಮಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಸುಗಮವಾಗಿ ನೆರವೇರಲು ಅಗತ್ಯವಾದ ಎಲ್ಲ ಕ್ರಮಗಳನ್ನು ತೆಲಂಗಾಣ ಸರ್ಕಾರ ಕೈಗೊಂಡಿದೆ.
ಪ್ರಧಾನಿ ಮೋದಿ ಅವರು ಫಲಕ್ನಾಮ ಪ್ಯಾಲೇಸ್ ನಲ್ಲಿ ಅತಿದೊಡ್ಡ ಔತಣಕೂಟ ಏರ್ಪಡಿಸಿದ್ದಾರೆ. ಈ ನಡುವೆ ಮೋದಿ ಅವರು ಇಂದು ಮಧ್ಯಾಹ್ನ ಹೈದರಾಬಾದ್ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಇವಾಂಕಾ ಅವರು ಪತಿ ಜತೆಗೆ ಚಾರ್ಮಿನಾರ್ ಗೆ ಭೇಟಿ ನೀಡಲಿದ್ದಾರೆ.

ಅಮೆರಿಕದ ಪ್ರತಿನಿಧಿಯಾಗಿ ಇವಾಂಕಾ
ಭಾರತದಲ್ಲಿರುವ ಅಮೆರಿಕದ ರಾಯಭಾರಿ ಕೆನ್ಜಸ್ಟರ್, ತೆಲಂಗಾಣ ರಾಜ್ಯ ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಜಯೇಶ್ ರಂಜನ್, ಅಮೆರಿಕದಲ್ಲಿರುವ ಭಾರತದ ರಾಯಭಾರಿ ನವತೇಜ್ಸಿಂಗ್ ಸರನ್, ಹೈದರಾಬಾದ್ ನಲ್ಲಿರುವ ಅಮೆರಿಕದ ಕನ್ಸ್ಲೆಟ್ ಜನರಲ್ ಕ್ಯಾಥರಿನಾ ಹಡ್ಡಾ ಹಾಗೂ ತೆಲಂಗಾಣ ಸರ್ಕಾರದ ಪ್ರತಿನಿಧಿಗಳು ಸೇರಿದಂತೆ ಇವಾಂಕಾ ಟ್ರಂಪ್ ಅವರಿಗೆ ಸ್ವಾಗತ ಕೋರಲಾಗಿದೆ.

ಟ್ರೈಡೆಂಟ್ ಹೋಟೆಲ್ಗೆ ತೆರಳಿದ ಇವಾಂಕಾ
ಷಂಶಾಬಾದಿನ ರಾಜೀವ್ ಗಾಂಧಿ ವಿಮಾನ ನಿಲ್ದಾಣದಿಂದ ವಿಶೇಷ ಭದ್ರತೆಯಲ್ಲಿ ಇವಾಂಕಾ ಟ್ರಂಪ್ ಮಾದಾಪುರ್ನಲ್ಲಿರುವ ಟ್ರೈಡೆಂಟ್ ಹೋಟೆಲಿಗೆ ತೆರಳಿದರು. ಮಂಗಳವಾರ ಮಧ್ಯಾಹ್ನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಜೊತೆಗೆ ಇವಾಂಕಾ ಟ್ರಂಪ್ ಸಮಾಲೋಚನೆ ನಡೆಸಲಿದ್ದಾರೆ. ಜಿಇಎಸ್ 2017ರಲ್ಲಿ ಪ್ರಧಾನಿ ಮೋದಿ, ತೆಲಂಗಾಣ ಸಿಎಂ ಚಂದ್ರಶೇಖರರಾವ್ ಹಾಗೂ ಇವಾಂಕ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ.

ಫಲಕ್ನಾಮ ಪ್ಯಾಲೇಸ್ನಲ್ಲಿ ಔತಣಕೂಟ
ಐತಿಹಾಸಿಕ ಫಲಕ್ನಾಮ ಪ್ಯಾಲೇಸ್ನಲ್ಲಿ ನಡೆಯುವ ಜಾಗತಿಕ ಉದ್ಯಮಶೀಲ ಶೃಂಗಸಭೆ ನಂತರ ಮೋದಿ ಅವರು ನೀಡುವ ಭರ್ಜರಿ ಔತಣಕೂಟದಲ್ಲಿ ಇವಾಂಕ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 29 ರಾತ್ರಿ ಇವಾಂಕಾ ಟ್ರಂಪ್ ದಂಪತಿ ಹೈದರಾಬಾದ್ನಿಂದ ದುಬೈಗೆ ಪ್ರಯಾಣಿಸಲಿದ್ದಾರೆ.

ಚಾರ್ಮಿನಾರ್ ಹಾಗೂ ಗೋಲ್ಕಂಡಾ ಕೋಟೆಗೆ ಭೇಟಿ
ಇವಾಂಕಾ ಹಾಗೂ ಅವರ ಪರಿವಾರ ಹೈದರಾಬಾದಿನಲ್ಲಿ ಚಾರ್ಮಿನಾರ್ ಹಾಗೂ ಗೋಲ್ಕಂಡಾ ಕೋಟೆಗೆ ಭೇಟಿ ನೀಡಲಿದ್ದಾರೆ. ಇವಾಂಕಾ ಅವರು ತೆರಳುವ ಹಾದಿ, ಉಳಿಯುವ ಹೋಟೆಲ್ ಗಳಿಗೆ ಭಾರಿ ಭದ್ರತೆ ಒದಗಿಸಲಾಗಿದೆ. ನವೆಂಬರ್ 29ರ ರಾತ್ರಿ 9.20ಕ್ಕೆ ಎಮಿರೇಟ್ಸ್ ವಿಮಾನ ಇಕೆ 529 ಮೂಲಕ ದುಬೈಗೆ ಹಾರಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications