ಜಗನ್ ಗೆ ಸೇರಿದ ಎರಡೂವರೆ ಸಾವಿರ ಕೋಟಿ ರು ಜಪ್ತಿ
ನವದೆಹಲಿ, ಜೂನ್ 30: ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರಿಗೆ ಸೇರಿದ ಇನ್ನಷ್ಟು ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ.ಆಂಧ್ರಪ್ರದೇಶದ ಮಾಜಿ ಸಿಎಂ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಹಾಗೂ ಅವರ ಪುತ್ರ ಜಗನ್ ಗೆ ಸೇರಿದ ಆಸ್ತಿಗಳನ್ನು ಎರಡನೇ ಬಾರಿಗೆ ಜಪ್ತಿ ಮಾಡಲಾಗಿದ್ದು, ಒಟ್ಟಾರೆ ಮೊತ್ತ ಎರಡೂವರೆ ಸಾವಿರ ಕೋಟಿ ರು ದಾಟುತ್ತದೆ.
ಜಾರಿ ನಿರ್ದೇಶಾನಲಯ ಈ ಮುಂಚೆ ನಡೆಸಿದ ದಾಳಿ ಹಾಗೂ ಜಪ್ತಿ ಮಾಡಿದ ಆಸ್ತಿ ಮೊತ್ತ 1,775 ಕೋಟಿ ರು ನಷ್ಟಿತ್ತು. ಬುಧವಾರ (ಜೂನ್ 29) ರಂದು ನಡೆಸಿದ ದಾಳಿಯಲ್ಲಿ 749 ಕೋಟಿ ರು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಒಟ್ಟಾರೆ 2,524 ಕೋಟಿ ರು ಗೂ ಅಧಿಕ ಮೊತ್ತ ಈಗ ಜಾರಿ ನಿರ್ದೇಶನಾಲಯದ ಪಾಲಾಗಿದೆ.[ಜಗನ್ ಆಸ್ತಿ ಕೇವಲ 343 ಕೋಟಿ, ವಾಹನವೇ ಇಲ್ಲ]

ಆಸ್ತಿ ಜಪ್ತಿ ಪ್ರಕ್ರಿಯೆ ಇಲ್ಲಿಗೆ ನಿಲ್ಲಿಸುವುದಿಲ್ಲ, ತನಿಖೆ ಮುಂದುವರೆದಿದ್ದು, ಇನ್ನಷ್ಟು ದಾಳಿ ನಡೆಸಲಾಗುವುದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.[ಜಗನ್ ರೆಡ್ಡಿ ವಿರುದ್ಧ 11ನೇ ಚಾರ್ಜ್ ಶೀಟ್ ಸಲ್ಲಿಕೆ]
ಮನಿ ಲಾಂಡ್ರಿಂಗ್ ಕಾಯ್ದೆ(ಪಿಎಎಲ್ಎ) ಅಡಿಯಲ್ಲಿ ಮತ್ತೊಮ್ಮೆ ಜಗನ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಬಿಐ ಈಗಾಗಲೇ ಈ ಕುರಿತಂತೆ ಚಾರ್ಜ್ ಶೀಟ್ ಸಲ್ಲಿಸಿದೆ. ಬೇನಾಮಿ ಕಂಪನಿಗಳನ್ನು ಸ್ಥಾಪಿಸಲು ಲಂಚ ಪಡೆದ ಆರೋಪ ಜಗನ್ ಮೇಲಿದೆ. ರಾಜಶೇಖರ್ ರೆಡ್ಡಿ ಅವರು ಸಿಎಂ ಆಗಿದ್ದ ಕಾಲದಲ್ಲಿ ಎಲ್ಲಾ ಅವ್ಯವಹಾರ ನಡೆದಿದೆ.[ಜಗನ್ ಗೆ ಶಾಕ್: ನೂರಾರು ಕೋಟಿ ಆಸ್ತಿ ಮತ್ತೆ ಜಪ್ತಿ]

ಇಲ್ಲಿ ತನಕ ಜಪ್ತಿ ಮಾಡಲಾದ ಆಸ್ತಿ: ಜಗನ್ ಒಡೆತನದ ಭಾರತಿ ಸಿಮೆಂಟ್ ಕಾರ್ಪೊರೇಷನ್ ಪ್ರೈ ಲಿಮಿಟೆಡ್ ಕಂಪನಿಗೆ 2007ರ ತನಕ ಯಾವುದೇ ಬಂಡವಾಳ ಹರಿದು ಬಂದಿರಲಿಲ್ಲ. ಆದರೆ, ನಂತರ ಉದ್ಯಮಿ ನಿಮ್ಮಗಡ್ಡ ಪ್ರಸಾದ್ ಹಾಗೂ ವ್ಯಾನ್ ಪಿಕ್ ಸಮೂಹದ ಮೂಲಕ ಅಪಾರ ಹಣ ತೊಡಗಿಸಲಾಯಿತು.[ಜಗನ್ ರೆಡ್ಡಿ ಬಿಡುಗಡೆ, ಉದ್ಯಮಿಗಳಿಗೆ ನಿರಾಳ]
ಭಾರತಿ ಸಿಮೆಂಟ್ಸ್, ಸಂಡೂರ್ ಪವರ್ ಪ್ರಾಜೆಕ್ಟ್, ಗುಂಟೂರಿನಲ್ಲಿ 903 ಎಕರೆ ಭೂಮಿ, ಜಗನ್ ಅವರ ಜುಬಿಲಿ ಹಿಲ್ಸ್ ನಲ್ಲಿರುವ ಲೋಟಸ್ ಪಾಂಡ್ ಬಂಗಲೆ, ಬಂಜಾರ ಹಿಲ್ಸ್ ನಲ್ಲಿರುವ ಸಾಕ್ಷಿ ಟವರ್ಸ್, ಹಕೀಂ ಪೇಟ್ ನಲ್ಲಿರುವ ನಿವೇಶನ ಅಲ್ಲದೆ ಹಲವು ಕಂಪನಿಗಳ ಷೇರುಗಳು, ದಾಖಲೆಗಳನ್ನು ಜಾರಿ ನಿರ್ದೇಶನಾಲಾಯ ತನ್ನ ವಶಕ್ಕೆ ಪಡೆದುಕೊಂಡಿದೆ. (ಒನ್ಇಂಡಿಯಾ ಸುದ್ದಿ)
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications