ಜಿಎಸ್ ಟಿ ವಿರುದ್ಧದ ಹೋರಾಟಕ್ಕೆ ಸಜ್ಜಾದ ತೆಲಂಗಾಣ ಮುಖ್ಯಮಂತ್ರಿ
ತೆಲಂಗಾಣ ಸಿಎಂ ವತಿಯಿಂದ ಜಿಎಸ್ ಟಿ ಕೆಲವು ಅಂಶಗಳಿಗೆ ಆಕ್ಷೇಪ. ಶೀಘ್ರದಲ್ಲೇ ಹೈದರಾಬಾದ್ ನಲ್ಲಿ ನಡೆಯಲಿರುವ ಜಿಎಸ್ ಟಿ ಸಭೆಯ ವೇಳೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ.
ಹೈದರಾಬಾದ್, ಆಗಸ್ಟ್ 18: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವ್ಯವಸ್ಥೆಯ ವಿರುದ್ಧ ದನಿ ಎತ್ತಲು ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ನಿರ್ಧರಿಸಿದ್ದು, ಇದಕ್ಕೆ ಉಳಿದ ರಾಜ್ಯಗಳ ಮುಖ್ಯಮಂತ್ರಿಗಳ ಬೆಂಬಲವನ್ನು ಪಡೆಯಲು ಸಿದ್ಧರಾಗಿದ್ದಾರೆ.
ಅಂದಹಾಗೆ, ಚಂದ್ರಶೇಖರ್ ರಾವ್ ಅವರಿಗೆ ಇಡೀ ಜಿಎಸ್ ಟಿ ಮೇಲೆ ಅಸಮಾಧಾನವೇನಿಲ್ಲ. ಬದಲಿಗೆ, ಕೃಷಿ, ರಸ್ತೆ ಸಾರಿಗೆ, ಫ್ಲೈ ಓವರ್ ಗಳ ಸೇವೆ, ಕುಡಿಯುವ ನೀರಿನ ಮೇಲೆ ಜಿಎಸ್ ಟಿ ಹೇರಿರುವುದು ಬೇಸರ ತರಿಸಿದೆ. ಹಾಗಾಗಿ, ಇದರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ದನಿಯೆತ್ತಲು ತಜ್ಞರ ಸಲಹೆ ಪಡೆದು ಸಜ್ಜಾಗುತ್ತಿದ್ದಾರೆಂದು ಹೇಳಲಾಗಿದೆ.

ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಜಿಎಸ್ ಟಿ ಮಂಡಳಿಯ ಪ್ರತಿಯೊಂದು ಸಭೆಯೂ ಬೇರೆ ಬೇರೆ ನಗರಗಳಲ್ಲಿ ನಡೆಯುತ್ತದೆ. ಹಾಗಾಗಿ, ಮಂಡಳಿಯ ಮುಂದಿನ ಸಭೆಯು ಸೆಪ್ಟಂಬರ್ 9ರಂದು ಹೈದರಾಬಾದ್ ನಲ್ಲಿ ನಡೆಯಲಿದೆ. ಈ ಸಂದರ್ಭವನ್ನು ಉಪಯೋಗಿಸಿಕೊಂಡು, ಜಿಎಸ್ ಟಿ ಬಗೆಗಿರುವ ತಮ್ಮ ಆಕ್ಷೇಪಣೆಗಳನ್ನು ಮಂಡಳಿಗೆ ಸಲ್ಲಿಸಲು ತೆಲಂಗಾಣ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.
ಹೈದರಾಬಾದ್ ನಲ್ಲಿ ನಡೆಯಲಿರುವ ಜಿಎಸ್ ಟಿ ಸಭೆಯ ನಂತರ, ಸಭೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಪದಾಧಿಕಾರಿಗಳಿಗೂ ರಾತ್ರಿ ಭೋಜನ ಕೂಟ ಏರ್ಪಡಿಸಿ, ಅಲ್ಲಿ ಈ ವಿಚಾರದ ಬಗ್ಗೆ ಮಾತನಾಡಲು ಅವರು ನಿರ್ಧರಿಸಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications