ಜಿಎಸ್ ಟಿ ವಿರುದ್ಧದ ಹೋರಾಟಕ್ಕೆ ಸಜ್ಜಾದ ತೆಲಂಗಾಣ ಮುಖ್ಯಮಂತ್ರಿ
ತೆಲಂಗಾಣ ಸಿಎಂ ವತಿಯಿಂದ ಜಿಎಸ್ ಟಿ ಕೆಲವು ಅಂಶಗಳಿಗೆ ಆಕ್ಷೇಪ. ಶೀಘ್ರದಲ್ಲೇ ಹೈದರಾಬಾದ್ ನಲ್ಲಿ ನಡೆಯಲಿರುವ ಜಿಎಸ್ ಟಿ ಸಭೆಯ ವೇಳೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ.
ಹೈದರಾಬಾದ್, ಆಗಸ್ಟ್ 18: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವ್ಯವಸ್ಥೆಯ ವಿರುದ್ಧ ದನಿ ಎತ್ತಲು ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ನಿರ್ಧರಿಸಿದ್ದು, ಇದಕ್ಕೆ ಉಳಿದ ರಾಜ್ಯಗಳ ಮುಖ್ಯಮಂತ್ರಿಗಳ ಬೆಂಬಲವನ್ನು ಪಡೆಯಲು ಸಿದ್ಧರಾಗಿದ್ದಾರೆ.
ಅಂದಹಾಗೆ, ಚಂದ್ರಶೇಖರ್ ರಾವ್ ಅವರಿಗೆ ಇಡೀ ಜಿಎಸ್ ಟಿ ಮೇಲೆ ಅಸಮಾಧಾನವೇನಿಲ್ಲ. ಬದಲಿಗೆ, ಕೃಷಿ, ರಸ್ತೆ ಸಾರಿಗೆ, ಫ್ಲೈ ಓವರ್ ಗಳ ಸೇವೆ, ಕುಡಿಯುವ ನೀರಿನ ಮೇಲೆ ಜಿಎಸ್ ಟಿ ಹೇರಿರುವುದು ಬೇಸರ ತರಿಸಿದೆ. ಹಾಗಾಗಿ, ಇದರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ದನಿಯೆತ್ತಲು ತಜ್ಞರ ಸಲಹೆ ಪಡೆದು ಸಜ್ಜಾಗುತ್ತಿದ್ದಾರೆಂದು ಹೇಳಲಾಗಿದೆ.

ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಜಿಎಸ್ ಟಿ ಮಂಡಳಿಯ ಪ್ರತಿಯೊಂದು ಸಭೆಯೂ ಬೇರೆ ಬೇರೆ ನಗರಗಳಲ್ಲಿ ನಡೆಯುತ್ತದೆ. ಹಾಗಾಗಿ, ಮಂಡಳಿಯ ಮುಂದಿನ ಸಭೆಯು ಸೆಪ್ಟಂಬರ್ 9ರಂದು ಹೈದರಾಬಾದ್ ನಲ್ಲಿ ನಡೆಯಲಿದೆ. ಈ ಸಂದರ್ಭವನ್ನು ಉಪಯೋಗಿಸಿಕೊಂಡು, ಜಿಎಸ್ ಟಿ ಬಗೆಗಿರುವ ತಮ್ಮ ಆಕ್ಷೇಪಣೆಗಳನ್ನು ಮಂಡಳಿಗೆ ಸಲ್ಲಿಸಲು ತೆಲಂಗಾಣ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.
ಹೈದರಾಬಾದ್ ನಲ್ಲಿ ನಡೆಯಲಿರುವ ಜಿಎಸ್ ಟಿ ಸಭೆಯ ನಂತರ, ಸಭೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಪದಾಧಿಕಾರಿಗಳಿಗೂ ರಾತ್ರಿ ಭೋಜನ ಕೂಟ ಏರ್ಪಡಿಸಿ, ಅಲ್ಲಿ ಈ ವಿಚಾರದ ಬಗ್ಗೆ ಮಾತನಾಡಲು ಅವರು ನಿರ್ಧರಿಸಿದ್ದಾರೆ.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್












Click it and Unblock the Notifications