ರಾಷ್ಟ್ರೀಯ ಪಕ್ಷ ಆರಂಭ ಕುರಿತು ಎಚ್‌ಡಿಕೆ, ಕೆಸಿಆರ್‌ ಚರ್ಚೆ

ಹೈದರಾಬಾದ್‌, ಸೆಪ್ಟೆಂಬರ್‌ 11: 2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಹೊಸ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಇಂದು ಹೈದರಾಬಾದ್‌ನಲ್ಲಿ ಜಾತ್ಯತೀತ ಜನತಾದಳ (ಜೆಡಿಎಸ್) ನಾಯಕ ಎಚ್‌. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸುವ ಯೋಜನೆಗಳ ಕುರಿತು ಚರ್ಚಿಸಲಿದ್ದಾರೆ.

ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಮುಖ್ಯಸ್ಥ ಕೆಸಿಆರ್ ಈ ಹಿಂದೆ ಬೆಂಗಳೂರಿಗೆ ತೆರಳಿ ಕುಮಾರಸ್ವಾಮಿ ಮತ್ತು ಅವರ ತಂದೆ ಹಾಗೂ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರನ್ನು ಭೇಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆಗಾಗಿ ಎಚ್‌. ಡಿ. ಕುಮಾರಸ್ವಾಮಿ ಶನಿವಾರ ಹೈದರಾಬಾದ್‌ಗೆ ತೆರಳಿದ್ದಾರೆ.

ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಭೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ನಡುವೆ ಸಭೆ ನಡೆದಿದೆ. ಇದು ರಾಷ್ಟ್ರೀಯ ಪಕ್ಷಕ್ಕಾಗಿ ಕೆಸಿಆರ್ ಅವರ ಇತ್ತೀಚಿನ ಬೆಳವಣಿಗೆಯಾಗಿದೆ. ಅಕ್ಟೋಬರ್ 5 ರಂದು ಆಚರಿಸಲಾಗುವ ದಸರಾ ಆಸುಪಾಸಿನಲ್ಲಿ ಹೊಸ ಪಕ್ಷವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

ಕಳೆದ ತಿಂಗಳ ಕೊನೆಯಲ್ಲಿ, ಕೆಸಿಆರ್ ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ರನ್ನು ಪಾಟ್ನಾದಲ್ಲಿ ಭೇಟಿ ಮಾಡಿ ಒಗ್ಗಟ್ಟಿನಿಂದ ವಿರೋಧ ಪಕ್ಷಗಳನ್ನು ಒಟ್ಟಿಗೆ ಸೇರಿಸುವ ಕುರಿತು ಮಾತುಕತೆ ನಡೆಸಿದ್ದರು.

ಬಿಜೆಪಿ ವಿರುದ್ಧ ಕಣಕ್ಕಿಳಿದಿರುವ ನಿತೀಶ್‌ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌, ನಾವು ದೇಶದ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದರು.

 ಬಿಜೆಪಿಯನ್ನು ಮಣಿಸುವ ತಂತ್ರ

ಬಿಜೆಪಿಯನ್ನು ಮಣಿಸುವ ತಂತ್ರ

ಕಳೆದ ತಿಂಗಳು ಬಿಜೆಪಿಯಿಂದ ಬೇರ್ಪಟ್ಟು, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್‌ನೊಂದಿಗೆ ಬಿಹಾರದಲ್ಲಿ ಹೊಸ ಸರ್ಕಾರವನ್ನು ರಚಿಸಿದ ಮುಖ್ಯಮಂತ್ರಿ ನಿತೀಶ್‌ ಕುಮಾರ್, ಕಳೆದ ವಾರ ದೆಹಲಿಗೆ ಭೇಟಿ ನೀಡಿದ್ದರು ಮತ್ತು ಬಿಜೆಪಿಯನ್ನು ಮಣಿಸುವ ತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ್ದರು.

 ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳುವ ಸಾಧ್ಯತೆ

ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳುವ ಸಾಧ್ಯತೆ

ಕೆಸಿಆರ್ ಅವರು ಇತ್ತೀಚಿನ ಟಿಆರ್‌ಎಸ್ ಸರ್ವಸದಸ್ಯರ ಅಧಿವೇಶನದಲ್ಲಿ ಮತ್ತು ವಿವಿಧ ಸಾರ್ವಜನಿಕ ಸಭೆಗಳಲ್ಲಿ ರಾಷ್ಟ್ರೀಯ ಪಕ್ಷದ ಕಲ್ಪನೆಯನ್ನು ಪ್ರಸ್ತಾಪಿಸಿದ್ದಾರೆ. ಹೊಸ ಪಕ್ಷದ ಧ್ವಜವು ಟಿಆರ್‌ಎಸ್‌ನ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅದರ ಮೇಲೆ ಭಾರತದ ಧ್ವಜವನ್ನು ಬಳಸಲಾಗಿದೆ. ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭಾರತದಾದ್ಯಂತ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಅವರು ಈಗಾಗಲೇ ಭರವಸೆ ನೀಡಿದ್ದಾರೆ. ಅಲ್ಲದೆ 26 ರಾಜ್ಯಗಳ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.

 ತೆಲಂಗಾಣದ ಬೆಳವಣಿಗೆಯ ಅಂಕಿಅಂಶ

ತೆಲಂಗಾಣದ ಬೆಳವಣಿಗೆಯ ಅಂಕಿಅಂಶ

ಕೃಷಿ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ತೆಲಂಗಾಣ ಮಾದರಿ, ಉಚಿತ ವಿದ್ಯುತ್ ಮತ್ತು ವೃದ್ಧರಿಗೆ ಪಿಂಚಣಿಯಂತಹ ಕಲ್ಯಾಣ ಯೋಜನೆಗಳ ಬಗ್ಗೆ ಕೆಸಿಆರ್ ಮಾತನಾಡುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಶಾಲೆಗಳು ಮತ್ತು "ಮೊಹಲ್ಲಾ ಚಿಕಿತ್ಸಾಲಯಗಳ" ಬಗ್ಗೆ ಸಾರ್ವಜನಿಕರಿಗೆ ಇತರ ಉಪಯೋಗಗಳ ಬಗ್ಗೆ ಮಾತನಾಡುತ್ತಿರುವಂತೆ ಅವರು 2014 ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ತೆಲಂಗಾಣದ ಬೆಳವಣಿಗೆಯ ಅಂಕಿಅಂಶಗಳನ್ನು ಉಲ್ಲೇಖಿಸುತ್ತಿದ್ದಾರೆ.

 ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆ

ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆ

ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲು ಪ್ರಾದೇಶಿಕ ಪಕ್ಷಗಳು ಒಗ್ಗೂಡುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದರು. ಹೀಗಾಗಿ ಹೈದರಾಬಾದ್‌ ಭೇಟಿ ಹಾಗೂ ಇತ್ತೀಚಿಗೆ ದೇಶದ ಉದ್ದಗಲಕ್ಕೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಎಲ್ಲರ ಗಮನ ಸೆಳೆಯುತ್ತಿದೆ. ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆಗಳು ನಡೆದಿವೆ. ನಿತೀಶ್ ಕುಮಾರ್‌ ಅವರು ಕೆಲ ಮಹತ್ವದ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಪ್ರಾಥಮಿಕ ಹಂತದ ಚರ್ಚೆಗಳಾಗಿವೆ ಎಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+