ಮೋದಿ ಭೇಟಿ ವೇಳೆ ಎರಡನೇ ಬಾರಿ ಗೈರಾಗಲಿರುವ ಕೆಸಿಆರ್
ಹೈದರಾಬಾದ್, ಮೇ 26: ತೆಲಂಗಾಣಕ್ಕೆ ಎರಡನೇ ಭಾರಿ ಪ್ರಧಾನಿ ನರೇಂದ್ರ ಭೇಟಿ ನೀಡಲಿದ್ದು, ಸತತ ಎರಡನೇ ಬಾರಿಯೂ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪ್ರಧಾನಿ ಮೋದಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ.
ಹೈದರಾಬಾದ್ ನಗರದಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್ಬಿ) 20ನೇ ವರ್ಷವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೈದರಾಬಾದ್ಗೆ ಆಗಮಿಸುವಾಗ ಶಿಷ್ಟಾಚಾರದಂತೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸ್ವಾಗತಿಸಬೇಕಿರುವುದು ವಾಡಿಕೆ.
ಕೆ. ಚಂದ್ರಶೇಖರಾವ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದಾರೆ.

ನಾಲ್ಕು ತಿಂಗಳಲ್ಲಿ ಎರಡನೇ ಬಾರಿಗೆ ಕೆಸಿಆರ್ ನರೇಂದ್ರ ಮೋದಿ ಭೇಟಿ ಮಾಡಲು ಹಿಂದೇಟು ಹಾಕಿದ್ದಾರೆ. ಪ್ರಧಾನ ಮಂತ್ರಿಯನ್ನು ಸ್ವಾಗತಿಸಲು ಸಚಿವ ಅಲಸಾನಿ ಶ್ರೀನಿವಾಸ್ ಯಾದವ್ರನ್ನು ಕೆಸಿಆರ್ ನಿಯೋಜಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿಲ್ಲ.
ಈ ಹಿಂದೆ ಚಿನ್ನಜೀಯರ್ ಸ್ವಾಮಿ ಆಯೋಜಿಸಿದ್ದ ಸಮಾರಂಭದಲ್ಲಿ ಮುಚಿಂತಲ್ನಲ್ಲಿ ಸಮಾನತೆಯ ಪ್ರತಿಮೆಯನ್ನು ಅನಾವರಣಗೊಳಿಸಲು ಫೆಬ್ರವರಿ ಮೊದಲ ವಾರದಲ್ಲಿ ಪ್ರಧಾನಿ ಹೈದರಾಬಾದ್ಗೆ ಬಂದಾಗ ಶ್ರೀನಿವಾಸ್ ಯಾದವ್ ಪ್ರಧಾನಿ ಸ್ವಾಗತಿಸಲು ಹಾಗೂ ಶಿಷ್ಟಾಚಾರ ನೋಡಿಕೊಳ್ಳಲು ನಿಯೋಜಿಸಲಾಗಿತ್ತು. ಆಗ ಆರೋಗ್ಯ ಸಮಸ್ಯೆ ಮುಂದಿಟ್ಟುಕೊಂಡು ಚಂದ್ರಶೇಖರರಾವ್ ಮೋದಿ ಭೇಟಿ ಮಾಡಿರಲಿಲ್ಲ.

ಗುರುವಾರ ಕೆ. ಚಂದ್ರಶೇಖರರಾವ್ ಟಿಆರ್ಎಸ್ ಹಿರಿಯ ನಾಯಕರು ಮತ್ತು ಸಚಿವರೊಂದಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಷ್ಟ್ರೀಯ ರಾಜಕೀಯ, ದೇಶಕ್ಕೆ ಪರ್ಯಾಯ ಅಜೆಂಡಾ ಮತ್ತು ಮುಂಬರುವ ರಾಷ್ಟ್ರಪತಿ ಚುನಾವಣೆ ಕುರಿತು ಜೆಡಿಎಸ್ ನಾಯಕರೊಂದಿಗೆ ಚರ್ಚಿಸಲು ಆಗಮಿಸಿದ್ದಾರೆ.
ಕಳೆದ ವಾರ ಚಂದ್ರಶೇಖರರಾವ್ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಭೇಟಿಯಾಗಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯತೆಯ ಬಗ್ಗೆ ಚರ್ಚಿಸಿದ್ದರು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆ ದೆಹಲಿ ಮತ್ತು ಚಂಡೀಗಢದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಬೆಂಗಳೂರಿನಿಂದ ಕೆ. ಚಂದ್ರಶೇಖರ್ರಾವ್ ನೇರವಾಗಿ ಮಹಾರಾಷ್ಟ್ರದ ರಾಳೇಗಣ ಸಿದ್ಧಿ ಮತ್ತು ಶಿರಡಿಗೆ ತೆರಳಲಿದ್ದಾರೆ. ಮೇ 29ರಂದು ಮಹಾರಾಷ್ಟ್ರ ಪ್ರವಾಸದಿಂದ ಹಿಂದಿರುಗಿದ ನಂತರ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳ ಪ್ರವಾಸ ಮಾಡುವ ಸಾಧ್ಯತೆಯಿದೆ.
-
ಕೇರಳ ವಿಧಾನಸಭೆ ಚುನಾವಣೆ: ಸಿಎಂ ಪಿಣರಾಯಿ ವಿಜಯನ್ ನಾಮಪತ್ರ ಸಲ್ಲಿಕೆ, ಒಟ್ಟು ಆಸ್ತಿ ಮೌಲ್ಯ 1,00,00,000 ರೂಪಾಯಿಗೂ ಅಧಿಕ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral











Click it and Unblock the Notifications