ಚಿತ್ರಗಳು : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು
ಹೈದರಾಬಾದ್, ಜ.29 : ಕರ್ನಾಟಕದ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಗುರುವಾರ ಏಳು ಬೆಟ್ಟದ ಒಡೆಯನನ್ನು ದರ್ಶನಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರು ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
ಗುಜರಾತ್ ಮೂಲದ ವಜುಭಾಯಿ ವಾಲಾ ಅವರು ಕರ್ನಾಟಕದ 18ನೇ ರಾಜ್ಯಪಾಲರಾಗಿ ಸೆ.1ರಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಬಳಿಕ ಮೊದಲ ಬಾರಿಗೆ ಕುಟುಂಬದವರೊಡನೆ ವಜುಭಾಯಿ ವಾಲಾ ಗುರುವಾರ ತಿರುಪತಿಗೆ ಭೇಟಿ ನೀಡಿದ್ದರು.[ಚಿತ್ರಗಳಲ್ಲಿ: ತಿಮ್ಮಪ್ಪನ ಹಳೆ ಹರಕೆ ತೀರಿಸಿಕೊಂಡ ಸಿದ್ದರಾಮಯ್ಯ]
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಲಾಯಿತು. ವೆಂಕಟೇಶ್ವರ ಸ್ವಾಮಿಯ ಫೋಟೋ, ಪ್ರಸಾದ, ಕ್ಯಾಲೆಂಡರ್ಅನ್ನು ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು. ತಿರುಪತಿ ಭೇಟಿಯ ಚಿತ್ರಗಳು ಇಲ್ಲಿವೆ. [ಸಂಕಷ್ಟ ನಿವಾರಣೆಗಾಗಿ ತಿಮ್ಮಪ್ಪನಿಗೆ ಡಿವಿಎಸ್ ಮೊರೆ]

ತಿರುಪತಿಗೆ ಭೇಟಿ ನೀಡಿದ ರಾಜ್ಯಪಾಲರು
ಕರ್ನಾಟಕದ ರಾಜ್ಯಪಾಲರಾದ ವಜುಭಾಯಿ ವಾಲಾ ಕುಟುಂಬದವರೊಂದಿಗೆ ಗುರುವಾರ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಸಿಎಂ ನಂತರ ರಾಜ್ಯಪಾಲರ ಭೇಟಿ
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಗುರುವಾರ ರಾಜ್ಯಪಾಲ ವಜುಭಾಯಿ ವಾಲಾ ಭೇಟಿ ನೀಡಿ ಏಳು ಬೆಟ್ಟದ ಒಡೆಯನ ದರ್ಶನ ಪಡೆದರು.

ಅರ್ಚಕರಿಂದ ರಾಜ್ಯಪಾಲರಿಗೆ ಸ್ವಾಗತ
ಕುಟುಂಬದೊಂದಿಗೆ ತಿರುಪತಿಗೆ ಭೇಟಿ ನೀಡಿದ್ದ ರಾಜ್ಯಪಾಲರನ್ನು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚರು ಸ್ವಾಗತಿಸಿದರು.

ರಾಜ್ಯಪಾಲರಾದ ಬಳಿಕ ಮೊದ ಭೇಟಿ
ಗುಜರಾತ್ ಮೂಲದ ವಜುಭಾಯಿ ವಾಲಾ ಅವರು ಕರ್ನಾಟಕದ 18ನೇ ರಾಜ್ಯಪಾಲರಾಗಿ ಸೆ.1ರಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಬಳಿಕ ಮೊದಲ ಬಾರಿಗೆ ವಜುಭಾಯಿ ವಾಲಾ ಅವರು ತಿರುಪತಿಗೆ ಭೇಟಿ ನೀಡಿದ್ದರು.

ಶ್ರೀವಾರಿ ವಸ್ತ್ರವನ್ನು ನೀಡಿ ಗೌರವ
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚರು ರಾಜ್ಯಪಾಲರಿಗೆ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ಗೌರವಿಸಿದರು.

ಅರ್ಚಕರಿಂದ ಪ್ರಸಾದ ವಿತರಣೆ
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ವೆಂಕಟೇಶ್ವರ ಸ್ವಾಮಿಯ ಫೋಟೋ, ಕ್ಯಾಲೆಂಡರ್ ಮತ್ತು ಪ್ರಸಾದವನ್ನು ರಾಜ್ಯಪಾಲರಿಗೆ ನೀಡಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications