Get Updates
Get notified of breaking news, exclusive insights, and must-see stories!

ಹಿಜಾಬ್ ವಿವಾದ: ತೆಲಂಗಾಣ ಸಿಎಂ ಪುತ್ರಿ ಕವಿತಾ ಬರೆದ ಕವಿತೆ

ಹೈದರಾಬಾದ್, ಫೆ.10: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಮಾಜಿ ಸಂಸದೆ ಕವಿತಾ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ತಮ್ಮ ಕೈಬರಹದಲ್ಲಿ ಕವಿತೆ ರಚಿಸಿದ್ದಾರೆ. "ಹಮ್ ಸಬ್ ಹಿಂದೂಸ್ತಾನಿ" ಎಂಬ ಹೆಸರಿನಲ್ಲಿ ಬರೆದಿರುವ ಕವಿತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ ಸದಸ್ಯೆ ಹಾಗೂ ಮಾಜಿ ಸಂಸದೆ ತಮ್ಮ ಕವಿತೆಯಲ್ಲಿ ವಿಭಜಕ ಶಕ್ತಿಗಳ ಕೃತ್ಯಗಳ ನಡುವೆಯೂ ನಾವೆಲ್ಲರೂ ಒಂದೇ ಮತ್ತು ನಾವು ಭಾರತೀಯರು ಹೇಗೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.

ಕವಿತಾ ಮತ್ತಷ್ಟು ಟ್ವೀಟ್ ಮಾಡಿ, "ಆಲಿಂಗನ ಮತ್ತು ಧರಿಸುವುದರಲ್ಲಿ ಯಾವುದು ಆರಾಮದಾಯಕ ಎಂಬುದನ್ನು ಮಹಿಳೆಯರೇ ನಿರ್ಧರಿಸಲಿ." ಎಂದಿದ್ದಾರೆ.

Karnataka Hijab Row: KCR Daughter Kavita Writes Poem Titled ‘Hum Sab Hindustani’ as Protest

ವೈರಲ್ ವಿಡಿಯೋದಲ್ಲಿರುವ ಮಂಡ್ಯದ ಹುಡುಗಿಯನ್ನು ಅಭಿನಂದಿಸಿರುವ ಕವಿತಾ, "ಸಿಂಧೂರವನ್ನು ಧರಿಸುವುದು ಮತ್ತು ಅನ್ವಯಿಸುವುದು ನನ್ನ ಪ್ರಜ್ಞಾಪೂರ್ವಕ ಆಯ್ಕೆಯಾಗಿದೆ. ಹಿಜಾಬ್ ಧರಿಸುವುದು ಮುಸ್ಕಾನ್ ಅವರ ಆಯ್ಕೆಯಾಗಿದೆ,'' ಎಂದಿದ್ದಾರೆ.

ಜೀವನಶೈಲಿಯ ಆಯ್ಕೆ ಮತ್ತು ಬಟ್ಟೆಯ ಆಯ್ಕೆಯು ವೈಯಕ್ತಿಕ ನಿರ್ಧಾರ ಎಂದು ಅವರು ಹೇಳಿದರು. ಸಮಾಜದ ಒಂದು ನಿರ್ದಿಷ್ಟ ವರ್ಗವು ಮಹಿಳೆಯರು ಮತ್ತು ಧರ್ಮಗಳು ಹೇಗೆ ವರ್ತಿಸಬೇಕೆಂದು ನಿರೀಕ್ಷಿಸುತ್ತದೆ ಎಂಬ ಕಲ್ಪನೆಯೊಂದಿಗೆ ಭಾರತವನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ಅವರು ಹೇಳಿದರು.

ಕರ್ನಾಟಕದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರನ್ನೊಳಗೊಂಡ ಪೂರ್ಣ ಪೀಠ ಇಂದು ಕೈಗೆತ್ತಿಕೊಂಡಿದ್ದು, ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಮಂಗಳವಾರ ವಿಚಾರಣೆ ಆರಂಭಿಸಿದ್ದ ನ್ಯಾಯಾಲಯ ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರು ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಕೇಳಿತ್ತು.

ಇಂದು ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಕರ್ನಾಟಕ ಮೂಲದ ಸಂಜಯ್‌ ಹೆಗಡೆ ಮತ್ತು ದೇವದತ್‌ ಕಾಮತ್‌, ಕಾಲೇಜು ಅಭಿವೃದ್ಧಿ ಸಮಿತಿಯನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಜ್ಜನ್‌ ಪೂವಯ್ಯ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ಕೇರಳ ಮೂಲದ ಅರ್ಜಿದಾರರ ಪರವಾಗಿದ್ದ ವಕೀಲ ಕಾಳೀಶ್ವರಂ ರಾಜ್‌ ಅವರು ವಿಚಾರಣೆಯಲ್ಲಿ ಭಾಗಿಯಾಗಿದ್ದರು.

"ಶಿಕ್ಷಣ ಸಂಸ್ಥೆಗಳು ಪುನಾರಂಭವಾಗಬೇಕು. ಪ್ರಕರಣ ನಿರ್ಧಾರವಾಗುವವರೆಗೆ ವಿದ್ಯಾರ್ಥಿಗಳು ಮತ್ತು ಸಂಬಂಧಪಟ್ಟವರು ಯಾವುದೇ ತೆರನಾದ ಧಾರ್ಮಿಕ ಉಡುಪು ಅಥವಾ ಶಿರ ವಸ್ತ್ರ ಹಾಕಬಾರದು. ಈ ವಿಚಾರದಲ್ಲಿ ಎಲ್ಲರನ್ನೂ ನಾವು ನಿರ್ಬಂಧಿಸುತ್ತೇವೆ. ಶಾಂತಿ ಮತ್ತು ನೆಮ್ಮದಿ ಮುಖ್ಯ. ಅನುಕೂಲಕರವಲ್ಲದ ಧಾರ್ಮಿಕ ವಸ್ತುಗಳನ್ನು ಧರಿಸಲು ಒತ್ತಾಯಿಸಬಾರದು" ಎಂದು ಪೀಠವು ಮೌಖಿಕವಾಗಿ ಹೇಳಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+