ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿಗಾಗಿ ಕಾಲಹರಣ: ನಾಯ್ಡು-ಕೆಸಿಆರ್ ಗೆ ಬಿಜೆಪಿ ತಪರಾಕಿ

|
Google Oneindia Kannada News

ಹೈದರಾಬಾದ್, ಜನವರಿ 17: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇಬ್ಬರೂ 'ಮೈತ್ರಿಕೂಟ' ವೆನ್ನುತ್ತ ಕಾಲಹರಣ ಮಾಡುತ್ತಿದ್ದರೆ, ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸು ಕಾರ್ಯತಂತ್ರ ರೂಪಿಸಿದೆ ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಡಾ.ಕೆ.ಲಕ್ಷ್ಮಣ್ ಅಣಕಿಸಿದ್ದಾರೆ.

'ಮೋದಿ ಮತ್ತೊಮ್ಮೆ' ಎಂಬ ಘೋಷ ವಾಕ್ಯದೊಂದಿಗೆ ನಾವು ಚುನಾವಣೆ ಎದುರಿಸುತ್ತಿದ್ದೇವೆ. ಕೆಸಿಆರ್ ಅಥವಾ ಚಂದ್ರಬಾಬು ನಾಯ್ಡು ಅವರು ರಚಿಸುವ ಮೈತ್ರಿಕೂಟ ಖಂಡಿತ ವಿಫಲವಾಗಲಿದೆ ಎಂದು ಅವರು ಹೇಳಿದರು.

ತೆಲಂಗಾಣ ಸೆಂಟಿಮೆಂಟ್ : ನಾಯ್ಡು ಜುಟ್ಟು ನರೇಂದ್ರ ಮೋದಿ ಕೈಯಲ್ಲಿ! ತೆಲಂಗಾಣ ಸೆಂಟಿಮೆಂಟ್ : ನಾಯ್ಡು ಜುಟ್ಟು ನರೇಂದ್ರ ಮೋದಿ ಕೈಯಲ್ಲಿ!

ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರಗಿಟ್ಟು ಸಂಯುಕ್ತ ಕೂಟ ರಚಿಸಲು ಕೆಸಿಆರ್ ಮುಂದಾಗಿದ್ದರೆ, ಕಾಂಗ್ರೆಸ್ ಮುಂದಾಳತ್ವದಲ್ಲೇ ವಿಪಕ್ಷಗಳನ್ನೆಲ್ಲ ಒಗ್ಗೂಡಿಸಿ ಮಹಾಘಟಬಂಧನ ರಚಿಸಲು ನಾಯ್ಡು ಮುಂದಾಗಿದ್ದಾರೆ.

ಆದರೆ ಕಾಂಗ್ರೆಸ್ ಮಹಾಘಟಬಂಧನದ ಭಾಗವಾದರೆ ತಾನು ಇದರಿಂದ ಹೊರಗುಳಿಯುತ್ತೇನೆಂದಿದ್ದ ಬಿ ಎಸ್ಪಿ ನಾಯಕಿ ಮಾಯಾವತಿ ಅವರನ್ನು ಕೆಸಿಆರ್ ಈಗಾಗಲೇ ಭೇಟಿಯಾಗಿ ಸಂಯುಕ್ತ ರಂಗದಲ್ಲಿ ಭಾಗಿಯಾಗುವ ಆಫರ್ ನೀಡಿದ್ದಾರೆ. ಅತ್ತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಆಫರ್ ನೀಡಲಾಗಿದೆ.

KCR and Naidu are wasting time for front: mocks BJP

ಲೋಕಸಭೆ ಚುನಾವಣೆಗೂ ಮುನ್ನವೇ ಟಿಡಿಪಿ-ಕಾಂಗ್ರೆಸ್ ನಡುವೆ ಬಿರುಕು ಲೋಕಸಭೆ ಚುನಾವಣೆಗೂ ಮುನ್ನವೇ ಟಿಡಿಪಿ-ಕಾಂಗ್ರೆಸ್ ನಡುವೆ ಬಿರುಕು

"ಆದರೆ ತೆಲಂಗಾಣದ ಜನರು ಮೋದಿ ಅವರನ್ನೇ ಮತ್ತೆ ಪ್ರಧಾನಿಯಾಗಿ ನೋಡಲು ಬಯಸಿದ್ದಾರೆ" ಎಂದು ಲಕ್ಷ್ಮಣ್ ಹೇಳಿದ್ದು, ಮತ್ತೊಮ್ಮೆ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

English summary
TS BJP president Dr K. Laxman said that Chief Ministers K. Chandrasekhar Rao and N. Chandrababu Naidu were wasting their time in forming fronts as the BJP will win 2019 polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X