ಇದೇನಿದು ಹೊಸ ಟ್ವಿಸ್ಟ್! ಉಪಪ್ರಧಾನಿ ಪಟ್ಟಕ್ಕೆ ಗಾಳಹಾಕುತ್ತಿದ್ದಾರಾ ಕೆಸಿಆರ್!
ಹೈದರಾಬಾದ್, ಮೇ 15: ಚುನಾವಣೆ ಫಲಿತಾಂಶದ ಹೊತ್ತಿಗೆ ರಾಷ್ಟ್ರ ರಾಜಕಾರಣದಲ್ಲಿ ಏನೆಲ್ಲ ಬದಲಾವಣೆಯಾಗುತ್ತದೋ ದೇವರೇ ಬಲ್ಲ! ಇಷ್ಟು ದಿನ ಪ್ರಧಾನಿ ಹುದ್ದೆಯ ಕನಸು ಕಾಣುತ್ತಿದ್ದ ಟಿಆರ್ ಎಸ್ ಮುಖಂಡ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇದೀಗ ಉಪಪ್ರಧಾನಿಯ ಕನಸು ಕಾಣುತ್ತಿದ್ದಾರಾ?!
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಪ್ರಧಾನಿ ಹುದ್ದೆಯ ಅವರ ಕನಸಿಗೆ ಎಂಕೆ ಸ್ಟಾಲಿನ್ ಅವರೇ ಎಳ್ಳುನೀರು ಬಿಟ್ಟ ಮೇಲೆ ಕೆಸಿಆರ್ ಟ್ರ್ಯಾಕ್ ಬದಲಾಯಿಸಿದ್ದಾರೆ. ಕಾಂಗ್ರೆಸ್ -ಬಿಜೆಪಿಯನ್ನು ಹೊರಗಿಟ್ಟು ತೃತೀಯ ರಂಗ ರಚಿಸುವ ಆಸೆಗೆ ಅವರಿನ್ನೂ ತಿಲಾಂಜಲಿ ಹಾಡಿಲ್ಲ.
"ಒಮ್ಮೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಖಂಡಿತ ಬಹುಮತ ಗಳಿಸುವುದಿಲ್ಲ. ಆಗ ಉಳಿದ ಪಕ್ಷಗಳೆಲ್ಲ ಒಂದಾಗುತ್ತವೆ. ಆಗಲೂ ತೃತೀಯ ರಂಗಕ್ಕೆ ಬಹುಮತ ಬಾರದೆ ಇದ್ದರೆ ಕಾಂಗ್ರೆಸ್ ಬೆಂಬಲ ನೀಡಬಹುದು. ಕಾಂಗ್ರೆಸ್ ತಾನಾಗಿಯೇ ಹೀಗೆ ಬೆಂಬಲ ನೀಡಿದರೆ ಅದು 'ಸರ್ಕಾರದಲ್ಲಿ ಮುಖ್ಯ ಪಾತ್ರ' ವಹಿಸುವುದಕ್ಕೆ ಸಾಧ್ಯವಿಲ್ಲ ಎಂಬುದು ಕೆಸಿಆರ್ ಲೆಕ್ಕಾಚಾರ ಎನ್ನಲಾಗುತ್ತಿದೆ.

ಪ್ರಧಾನಿಯಾಗುವ ಅವಕಾಶ ಕ್ಷೀಣಿಸುತ್ತಿರುವುದರಿಂದ, ಕಡೇ ಪಕ್ಷ ಉಪಪ್ರಧಾನಿ ಹುದ್ದೆಗಾದರೂ ಗಾಳ ಹಾಕುವ ಪ್ರಯತ್ನವನ್ನು ಕೆಸಿಆರ್ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಟಿಆರ್ ಎಸ್ ಈ ಸುದ್ದಿಯನ್ನು ಅಲ್ಲಗಳೆದಿದ್ದು, ಕೆ ಚಂದ್ರಶೇಖರ್ ರಾವ್ ಅವರ ಉದ್ದೇಶ ಯಾವುದೇ ಹುದ್ದೆಯನ್ನು ಪಡೆಯುವುದಲ್ಲ, ಈ ದೇಶದಲ್ಲಿ ಮತ್ತು ಸರ್ಕಾರದಲ್ಲಿ ಬದಲಾವಣೆ ತರುವುದು ಎಂದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications