Get Updates
Get notified of breaking news, exclusive insights, and must-see stories!

ತೆಲಂಗಾಣದಲ್ಲಿ ಚಿಗುರುತ್ತಲೇ ಇದೆ ಸಂಯುಕ್ತರಂಗದ ಕನಸು!

ಹೈದರಾಬಾದ್, ಜನವರಿ 16: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಹೊರಗಿಟ್ಟು ಸಂಯುಕ್ತ ಕೂಟ ರಚಿಸುವ ತನ್ನ ಕನಸಿಗೆ ತೆಲಂಗಾಣ ರಾಷ್ಟ್ರ ಪಕ್ಷ ಮತ್ತೆ ನೀರೆರೆಯಲು ಆರಂಭಿಸಿದೆ.

ಅದಕ್ಕೆ ಸಾಕ್ಷಿ ಎಂಬಂತೆ ಟಿಆರ್ ಎಸ್ ಮುಖಂಡ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ಕೆ ಟಿ ರಾಮರಾವ್ ಅವರು ವೈಎಸ್ ಆರ್ ಕಾಂಗ್ರೆಸ್ ಮುಖಂಡ ಜಗನ್ಮೋಹನ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾರೆ. ಅವರೊಂದಿಗೆ ಸಂಯುಕ್ತರಂಗದ ಬಗ್ಗೆ ಮಾತುಕತೆ ನಡೆಸಿದ್ದಾರೆ.

KCRs son meets Jaganmohan Reddy, talks on federal front

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿ.ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರ ಜಗನ್ಮೋಹನ ರೆಡ್ಡಿ ಅವರು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಹೊರಗಿಟ್ಟು ಸಂಯುಕ್ತಕೂಟ ರಚಿಸುವ ಬಗ್ಗೆ ಈಗಾಗಲೇ ಕೆ ಚಂದ್ರಶೇಖರ ರೆಡ್ಡಿ ಅವರು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್ಪಿ ನಾಯಕಿ ಮಾಯಾವತಿ , ಎಸ್ಪಿ, ಅಖಿಲೇಶ್ ಯಾದವ್ ಮತ್ತು ಡಿಎಂಕೆ ನಾಯಕ ಎಂಕೆ ಸ್ಟಾಲಿನ್, ಜೆಡಿಎಸ್ ಮುಖಂಡ ಎಚ್ ಡಿ ದೇವೇಗೌಡ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಕೆ ಚಂದ್ರಶೇಖರ್ ರಾವ್ ಅವರೇ ಖುದ್ದಾಗಿ ಭೇಟಿಯಾಗಿದ್ದಾರೆ. ಮಹಾಘಟಬಂಧನದ ಗುಲ್ಲೇಳುತ್ತಿರುವ ಹೊತ್ತಲ್ಲಿ, ಸಂಯುಕ್ತ ರಂಗದ ಸುದ್ದಿ ಎಲ್ಲೆಡೆ ಹಬ್ಬುತ್ತಿರುವುದು ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+