ಹೈದರಾಬಾದ್ : ಕಿರಣ್ ರೆಡ್ಡಿಯಿಂದ ಹೊಸ ಪಕ್ಷ ಉದಯ
ಹೈದರಾಬಾದ್, ಮಾ.10: ಅಖಂಡ ಆಂಧ್ರ ಪ್ರದೇಶ ವಿಭಜನೆ ವಿರೋಧಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಿರಣ್ ಕುಮಾರ್ ರೆಡ್ಡಿ ಅವರು ನಿರೀಕ್ಷೆಯಂತೆ ಹೊಸ ಪಕ್ಷ ಕಟ್ಟಿದ್ದಾರೆ. ಸೋಮವಾರ ಪಕ್ಷದ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಹೈದರಾಬಾದಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಿರಣ್ ಕುಮಾರ್ ರೆಡ್ಡಿ ಅವರು ತಮ್ಮ ಹೊಸ ಪಕ್ಷದ ಹೆಸರು 'ಜೈ ಸಮೈಕ್ಯಾಂಧ್ರಾ' ಪಕ್ಷ ಎಂದು ಅಧಿಕೃತವಾಗಿ ಘೋಷಿಸಿದರು. ರೈತರು, ಮಹಿಳೆಯರು ಮತ್ತು ವಿದ್ಯಾರ್ಥಿಗಳ ಹಿತ 'ಜೈ ಸಮೈಕ್ಯಾಂಧ್ರಾ' ಪಕ್ಷದ ಧ್ಯೇಯವಾಗಿದೆ ಎಂದು ಕಿರಣ್ ಕುಮಾರ್ ರೆಡ್ಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ 'ಪೆಪ್ಪರ್ ಸ್ಪ್ರೇ' ಖ್ಯಾತಿಯ ಲಗಡಪತಿ ರಾಜಗೋಪಾಲ್ ಹಾಗೂ ಸಂಸದ ಸಬ್ಬಂ ಹರಿ ಅವರು ಹಾಜರಿದ್ದರು.
ಆಂಧ್ರ ವಿಭಜನೆಯಾಗಲು ತೆಲುಗುದೇಶಂ ಪಾರ್ಟಿಯ ಚಂದ್ರಬಾಬು ನಾಯ್ಡು ಮೂಲ ಕಾರಣ ಎಂದು ಕಿರಣ್ ಕುಮಾರ್ ರೆಡ್ಡಿ ಆರೋಪಿಸಿದರು. ತೆಲಂಗಾಣ ರಾಜ್ಯ ರಚನೆಯ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಆರಂಭದಿಂದಲೂ ಸಂಘರ್ಷ ಮಾಡುತ್ತಲೇ ಬಂದ ರೆಡ್ಡಿ ಇತ್ತೀಚೆಗೆ ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಕಿರಣ್ ರೆಡ್ಡಿ ಅವರ ತಂದೆ ದಿವಂಗತ ಅಮರನಾಥರೆಡ್ಡಿ ಅವರು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರಿಗೆ ರಾಜಕೀಯ ಗುರುವಾಗಬೇಕು. ಈಗ ಹೊಸ ಪಕ್ಷ ಸ್ಥಾಪಿಸುವ ಮೂಲಕ ಟಿಡಿಪಿ ವಿರುದ್ಧ ಪಕ್ಷದ ಸಮರ ಸಾರಲು ಮುಂದಾಗಿರುವ ಸುಳಿವನ್ನು ಮೊದಲ ಸುದ್ದಿಗೋಷ್ಠಿಯಲ್ಲೇ ಕಿರಣ್ ನೀಡಿದ್ದಾರೆ.[ಚಿರಂಜೀವಿ 'ಸಿಎಂ' ಆಗೋದು ಪರಿಹಾರ?]
ತೆಲಂಗಾಣ ವಿಧೇಯಕಕ್ಕೆ ಯುಪಿಎ ಅಂಗೀಕಾರ ಮುದ್ರೆ ಬೀಳುತ್ತಿದ್ದಂತೆ ಆಂಧ್ರಪ್ರದೇಶ ವಿಭಜನೆ ಖಂಡಿಸಿ ಕಿರಣ್ ಕುಮಾರ್ ಅವರು ರಾಜೀನಾಮೆ ನೀಡಿದ್ದರು. 'ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯಿಂದ ರಾಜ್ಯ ವಿಭಜನೆಯಷ್ಟೇ ಅಲ್ಲ ಜನರ ಐಕ್ಯತೆಯನ್ನು ಒಡೆದು ಹೋಗಿದೆ. ಕೇಂದ್ರದ ಒಡೆದು ಆಳುವ ನೀತಿಯನ್ನು ಖಂಡಿಸುತ್ತೇನೆ. ತೆಲಂಗಾಣ ಮಸೂದೆಯನ್ನು ಕಳ್ಳತನದಿಂದ ಮಂಡಿಸಿ ಅಂಗೀಕಾರ ಪಡೆಯಲಾಗಿದೆ ಎಂದು ರಾಜೀನಾಮೆ ನೀಡಿದ ಸಂದರ್ಭದಲ್ಲಿ ಹೇಳಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications