ಮಾರುತಿರಾವ್ ಆತ್ಮಹತ್ಯೆ; ಇನ್ನೂ ಉತ್ತರ ಸಿಗದ ಪ್ರಶ್ನೆಗಳು
ಹೈದರಾಬಾದ್, ಮಾರ್ಚ್ 13 : ಪ್ರಣಯ್ ಪೆರುಮಲ್ಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾರುತಿರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರಿಗೆ ಇನ್ನು ಹಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.
ಪ್ರಣಯ್ ಪೆರುಮಲ್ಲಾ ಮರ್ಯಾದಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾರುತಿರಾವ್ ಶವ ಮಾರ್ಚ್ 8ರಂದು ಪತ್ತೆಯಾಗಿತ್ತು. ಹೈದರಾಬಾದ್ನ ಖೈರತಾಬಾದ್ ಆರ್ಯವೈಶ್ಯ ಭವನದ 306ನೇ ರೂಂನಲ್ಲಿ ಶವ ಸಿಕ್ಕರೂ ವಿಷದ ಬಾಟಲ್ ಸಿಕ್ಕಿಲ್ಲ.
ಮಾರುತಿರಾವ್ ಆತ್ಮಹತ್ಯೆಗೂ ಒಂದು ವಾರ ಮೊದಲು ಅವರ ಫಾರ್ಮ್ ಹೌಸ್ನಲ್ಲಿ ಸುಮಾರು 35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಆ ವ್ಯಕ್ತಿ ಯಾರು? ಎಂಬ ಗುರುತು ಸಿಕ್ಕಿರಲಿಲ್ಲ.
ಸಹೋದರನ ಜೊತೆ ಮಾರುತಿರಾವ್ ಆಸ್ತಿ ವಿಚಾರದಲ್ಲಿ ವಿವಾದ ಮಾಡಿಕೊಂಡಿದ್ದರು ಎಂಬ ವಿಚಾರದ ಕುರಿತು ಪೊಲೀಸರು ತನಿಖೆ ನಡೆಸಬೇಕಿದೆ. ಚಿಕ್ಕಪ್ಪ ತಂದೆಯ ಮೇಲೆ ಹಲ್ಲೆ ಮಾಡಿದ್ದರು ಎಂದು ಅಮೃತಾ ಹೇಳಿಕೆ ನೀಡಿದ್ದು, ಪೊಲೀಸರು ತನಿಖೆಯ ಆಯಾಮವನ್ನೇ ಬದಲಿಸಿದೆ.

ಎಫ್ಎಸ್ಎಲ್ ವರದಿಗೆ ಕಾಯುತ್ತಿದ್ದಾರೆ
ಮಾರುತಿರಾವ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಶವ ಸಿಕ್ಕಿದ ಹೈದರಾಬಾದ್ನ ಖೈರತಾಬಾದ್ ಆರ್ಯವೈಶ್ಯ ಭವನದ 306ನೇ ರೂಂನಲ್ಲಿ ವಿಷದ ಬಾಟಲ್ ಸಿಕ್ಕಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಭಂದಿ ಸಾವಿಗೆ ವಿಷದ ಅಂಶ ಕಾರಣ ಎಂದು ಹೇಳಿದ್ದಾರೆ. ಕೊಠಡಿಯಲ್ಲಿ ಸಿಕ್ಕ ಡೆತ್ ನೋಟ್ ಸಹ ಎಫ್ಎಸ್ಎಲ್ಗೆ ಕಳಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ದೂರು ವಾಪಸ್ ಪಡೆಯಲು ಮನವಿ
ಪ್ರಣಯ್ ಪೆರುಮಲ್ಲಾ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾರುತಿರಾವ್ ಏಪ್ರಿಲ್ 2019ರಲ್ಲಿ ಜಾಮೀನು ಪಡೆದು ಹೊರ ಬಂದಿದ್ದರು. ಬಳಿಕ ಅವರು ಅಮೃತಾ ದೂರು ವಾಪಸ್ ಪಡೆಯುವಂತೆ ಮಾಡಲು ಪ್ರಯತ್ನ ನಡೆಸಿದ್ದರು. ಆದರೆ, ಪ್ರಣಯ್ ಸಾವಿಗೆ ನ್ಯಾಯಬೇಕು ಎಂದು ಪಟ್ಟು ಹಿಡಿದಿದ್ದ ಅಮೃತಾ ದೂರು ವಾಪಸ್ ಪಡೆಯಲು ಒಪ್ಪಿರಲಿಲ್ಲ. ಶಿಕ್ಷೆಯಾಗುವ ಭಯದಲ್ಲಿ ಆತ್ಮಹತ್ಯೆಗೆ ಶರಣಾದರೆ? ಎಂದು ತನಿಖೆ ನಡೆಸಲಾಗುತ್ತಿದೆ.

ಆಸ್ತಿ ವಿವಾದ ಕಾರಣ?
ಮಾರುತಿರಾವ್ ಆಂಧ್ರಪ್ರದೇಶದ ನಲ್ಗೋಂಡ ಜಿಲ್ಲೆಯ ವಿರ್ಯಾಲಗೂಡು ನಿವಾಸಿ. ಹೈದರಾಬಾದ್ ಮತ್ತು ವಿರ್ಯಾಲಗೂಡು ಸೇರಿ ಅವರು ಸುಮಾರು 200 ಕೋಟಿ ಆಸ್ತಿಯನ್ನು ಹೊಂದಿದ್ದರು. ಅವರ ಸಹೋದರ ಸರವಣ ಆಸ್ತಿಯನ್ನು ತಮ್ಮ ಪುತ್ರನ ಹೆಸರಿಗೆ ಬರೆದುಕೊಡಬೇಕು ಎಂದು ಪಟ್ಟು ಹಿಡಿದಿದ್ದರು. ಪ್ರಣಯ್ ಪೆರುಮಲ್ಲಾ ಪ್ರಕರಣದಲ್ಲಿ ಸರವಣ ಸಹ ಆರೋಪಿಯಾಗಿದ್ದಾರೆ. ಅಮೃತಾ ಚಿಕ್ಕಪ್ಪ ಆಸ್ತಿಗಾಗಿ ಪೀಡಿಸುತ್ತಿದ್ದರು. ಅವರು ತಂದೆಯ ಮೇಲೆ ಹಲ್ಲೆ ಮಾಡಿದ್ದರು ಎಂದು ಹೇಳಿಕೆ ಕೊಟ್ಟಿದ್ದು, ಪೊಲೀಸರ ತನಿಖೆಯ ಆಯಾಮನವನ್ನು ಬದಲಿಸಿದೆ.

ಕೊನೆ ದಿನದ ದಿನಚರಿಗಳು
ಮಾರ್ಚ್ 7ರ ಶನಿವಾರ ಹೈದರಾಬಾದ್ನಲ್ಲಿ ಕೆಲಸವಿದೆ ಎಂದು ಪತ್ನಿ ಗಿರಿಜಾ ಬಳಿ ಹೇಳಿ ಡ್ರೈವರ್ ರಾಜೇಶ್ ಜೊತೆ ವಿರ್ಯಾಲಗೂಡಿನಿಂದ ಮಾರುತಿರಾವ್ ಹೊರಟಿದ್ದರು. ಆದರೆ, ಏನು ಕೆಲಸವಿದೆ, ಯಾರನ್ನು ಭೇಟಿ ಮಾಡಬೇಕು ಎಂದು ಪತ್ನಿಗೆ ಸರಿಯಾಗಿ ಮಾಹಿತಿ ನೀಡಿರಲಿಲ್ಲ. ಮಾರುತಿರಾವ್ ಕೊನೆ ದಿನದ ದಿನಚರಿ, ಫೋನ್ ಕರೆಗಳ ಮಾಹಿತಿಯನ್ನು ಪೊಲೀಸರು ಅವಲೋಕಿಸುತ್ತಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications