ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ವರದಿಯಲ್ಲಿ ಏನಿದೆ?
ಹೈದರಾಬಾದ್, ಡಿ. 27: ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಗಾಬರಿಗೊಂಡಿದ್ದ ಅಭಿಮಾನಿಗಳಿಗೆ ಅಪೊಲೊ ಆಸ್ಪತ್ರೆಯಿಂದ ಶುಭ ಸುದ್ದಿ ಬಂದಿದೆ. ರಜನಿಕಾಂತ್ ಅವರಿಗೆ ಉಂಟಾಗಿದ್ದ ಅಧಿಕ ರಕ್ತದೊತ್ತಡ ಪರಿಸ್ಥಿತಿ ಈಗ ತಿಳಿಗೊಂಡಿದೆ. ಅಭಿಮಾನಿಗಳು, ಕುಟುಂಬಸ್ಥರು ಆತಂಕ ಪಡಬೇಕಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ಭಾನುವಾರದ ಹೆಲ್ತ್ ಬುಲೇಟಿನ್ ನಿಂದ ತಿಳಿದು ಬಂದಿದೆ.
ನಟ ರಜನಿಕಾಂತ್ ಅವರಿಗೆ ರಕ್ತದೊತ್ತಡದಲ್ಲಿ ಏರಿಳಿತವಾದ ಕಾರಣ ಶುಕ್ರವಾರದಂದು ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರ ಆರೋಗ್ಯದಲ್ಲಿ ಉತ್ತಮ ಸುಧಾರಣೆಯಾಗುತ್ತಿದೆ, ವೈದ್ಯೋಪಚಾರಕ್ಕೆ ಸ್ಪಂದಿಸುತ್ತಿದ್ದಾರೆ. ಆರೋಗ್ಯ ಸ್ಥಿತಿಯನ್ನು ವಿವರಿಸಿ ಆಸ್ಪತ್ರೆಯು ಭಾನುವಾರ ಬೆಳಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ.
ಶನಿವಾರ ರಾತ್ರಿ ಅವರ ಆರೋಗ್ಯದಲ್ಲಿ ಅಷ್ಟೇನೂ ತೊಂದರೆಗಳಾಗಿಲ್ಲ. ಅವರ ರಕ್ತದೊತ್ತಡ ಸಮಸ್ಥಿತಿಗೆ ಮರಳುತ್ತಿದೆ. ನಿನ್ನೆಗಿಂತಲೂ ಉತ್ತಮ ನಿಯಂತ್ರಣದ ಸ್ಥಿತಿಯಲ್ಲಿದೆ. ಅವರ ಆರೋಗ್ಯದ ಮೇಲೆ ಇಂದು ಮಧ್ಯಾಹ್ನ ವೈದ್ಯರು ಮತ್ತಷ್ಟು ತಪಾಸಣೆ ನಡೆಸುತ್ತಾರೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಬಗ್ಗೆ ಪ್ರಕಟಿಸಲಾಗುತ್ತದೆ ಎಂದು ಅಧಿಕೃತ ಮಾಹಿತಿ ನೀಡಲಾಗಿದೆ.

ರಕ್ತದೊತ್ತಡದಲ್ಲಿನ ಬದಲಾವಣೆಗಳ ಹಿನ್ನೆಲೆಯಲ್ಲಿ ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಲಾಗಿದೆ. ಹೀಗಾಗಿ ಅವರ ಭೇಟಿಗೆ ಯಾರಿಗೂ ಅವಕಾಶ ನೀಡುತ್ತಿಲ್ಲ. ಕೊವಿಡ್ 19 ಪರೀಕ್ಷೆಗಳನ್ನು ನಡೆಸಲಾಗಿದ್ದು, ನೆಗಟಿವ್ ಬಂದಿದೆ ಹೀಗಾಗಿ, ಬೇರೆ ಯಾವುದೇ ಸಮಸ್ಯೆಗಳಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದರು.
'ಅಣ್ಣಾತೆ' ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್ನಲ್ಲಿರುವ ರಜನಿಕಾಂತ್ ಅವರಲ್ಲಿ ರಕ್ತದೊತ್ತಡದ ಏರಿಳಿತ ಮತ್ತು ಬಳಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರದಂದು ಜ್ಯುಬಿಲಿಹಿಲ್ಸ್ ನಲ್ಲಿರಿವ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications