ಗಣಿಗಾರಿಕೆಯಿಂದ ಭಾರತದ ಜಿಡಿಪಿಗೆ ಶೇ.2.5ರಷ್ಟು ಕೊಡುಗೆ: ಪ್ರಹ್ಲಾದ್ ಜೋಶಿ
ಹೈದರಾಬಾದ್, ಸೆಪ್ಟಂಬರ್ 09: ಭಾರತದಲ್ಲಿ 2030ರ ವೇಳೆಗೆ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ)ಕ್ಕೆ ಗಣಿ ಮತ್ತು ಖನಿಜಗಳ ಪಾಲು ಶೇ.2.5ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳು ಸಹಕರಿಸುವಂತೆ ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಕರೆ ನೀಡಿದರು.
ಶುಕ್ರವಾರ ಹೈದರಾಬಾದ್ನಲ್ಲಿ ನಡೆಯುತ್ತಿರುವ 'ರಾಷ್ಟ್ರೀಯ ಗಣಿಗಾರಿಕೆ ಸಚಿವರ ಸಮಾವೇಶ'ವನ್ನು ಉದ್ಘಾಟಿಸಿ ಮಾತನಾಡಿದ ಪ್ರಹ್ಲಾದ್ ಜೋಶಿ, ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದಂತೆ ಆಯಾ ರಾಜ್ಯಗಳ ಗಣಿ ಇಲಾಖೆಯ ಸರ್ಕಾರಿ ಕಂಪನಿಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಜೊತೆ ಚರ್ಚಿಸಿ ಸಮಾವೇಶ ಆಯೋಜಿಸಿವೆ. ಇಂತಹ ಮಹತ್ವದ ಸಮಾವೇಶದಲ್ಲಿ ಎಲ್ಲ ರಾಜ್ಯಗಳ ಭಾಗವಹಿಸುವಿಕೆಯು ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಭಾರತದಂತಹ ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಶ್ರದ್ಧೆಯಿಂದ ಕೆಲಸ ಮಾಡಬೇಕು. ಅದರಿಂದ ಮಾತ್ರವೇ 2047ರ ಒಳಗಾಗಿ ಭಾರತ ಅಭಿವೃದ್ಧಿ ಹೊಂದಿದ ಭಾರತವನ್ನಾಗಿಸುವಲ್ಲಿ ಯಶಸ್ವಿಯಾಗುತ್ತೇವೆ ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು ಸಾಧಿಸುತ್ತಿದೆ. ಕಲ್ಲಿದ್ದಲು ಉತ್ಪಾದನೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ದೇಶವು ಶೇ 8% ರಷ್ಟು ಪ್ರಗತಿ ಸಾಧಿಸಿದೆ. ಆಗಸ್ಟ್ 2022 ರವರೆಗೆ 58 ಮೆಟ್ರಿಕ್ ಟನ್ ನಷ್ಟು ಉತ್ಪಾದನೆಯಾಗಿದೆ ಎಂದು ಸಮ್ಮೇಳನದಲ್ಲಿ ಕೇಂದ್ರ ಸಚಿವರು ವಿವರಿಸಿದರು.
ಗಣಿಗಳಿಂದ ಕೇಂದ್ರ 25,170 ಕೋಟಿ ಆದಾಯ ಸಂಗ್ರಹ
ಭಾರತದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನ ನಡೆಸುತ್ತಿದೆ. ವಿವಿಧ ನೀತಿ ನಿಯಮಗಳನ್ನು ರೂಪಿಸುತ್ತಿದೆ. ಖನಿಜ ಕ್ಷೇತ್ರದಲ್ಲಾದ ಸುಧಾರಣೆಗಳು ಹಾಗೂ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಯ ಪಾತ್ರವು ಮುಖ್ಯವಾಗಿದೆ. ಕಳೆದ ವರ್ಷ ಹರಾಜು ಪ್ರಕ್ರಿಯೆಯಿಂದ ವಿವಿಧ ರಾಜ್ಯಗಳಲ್ಲಿನ ಗಣಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಒಟ್ಟು ಸುಮಾರು 25,170 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಅವರು ತಿಳಿಸಿದರು.

ಕಲ್ಲಿದ್ದಲು ಉತ್ಪಾದನೆಯಲ್ಲಿನ ಪ್ರಗತಿ, ಸಮಾವೇಶದಲ್ಲಿ ವಿವಿಧ ರಾಜ್ಯಗಳ ಭಾಗವಹಿಸುವಿಕೆ, ಕೇಂದ್ರ ಸರ್ಕಾರದ ಕ್ರಮಗಳು ಸೇರಿದಂತೆ ಈ ಎಲ್ಲ ಅಂಶಗಳನ್ನು ಗಮನಿಸಿದರೆ ಮುಂದಿನ ಎಂಟು (2030) ವರ್ಷಗಳಲ್ಲಿ ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನಕ್ಕೆ (ಜಿಡಿಪಿಗೆ) ಗಣಿಗಾರಿಕೆಯಿಂದಲೇ ಶೇ.2.5ರಷ್ಟು ಆದಾಯ ಸಂಗ್ರಹವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಪ್ರಹ್ಲಾದ್ ಜೋಶಿ ಪುನರುಚ್ಚರಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications