ಹೈದರಾಬಾದ್: ಅಪ್ರಾಪ್ತೆಯ ಮೇಲೆ ಅಪ್ರಾಪ್ತರಿಂದ ಅತ್ಯಾಚಾರ: ಶಾಸಕರ ಪುತ್ರ ಭಾಗಿ
ಹೈದರಾಬಾದ್ ಜೂನ್ 3: ಹೈದರಾಬಾದ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮರ್ಸಿಡಿಸ್ ಕಾರಿನಲ್ಲಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಘಟನೆಯಲ್ಲಿ ಶಾಸಕರೊಬ್ಬರ ಪುತ್ರನ ಕೈವಾಡವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಪ್ರಕರಣದ ಐವರು ಆರೋಪಿಗಳು ಅಪ್ರಾಪ್ತರು ಎಂದು ತಿಳಿಸಿದ್ದಾರೆ. ಜೂನ್ 1, ಬುಧವಾರದಂದು ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸತ್ಯಾಸತ್ಯತೆಗಳನ್ನು ಪರಿಶೀಲಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಶನಿವಾರ ನಡೆದಿದೆ. ಆರಂಭದಲ್ಲಿ ಘಟನೆಯಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಯಿತು.
ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್!
ಐಪಿಸಿಯ ಸೆಕ್ಷನ್ 376 ಅಡಿ ಕೇಸ್
17 ವರ್ಷದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಪೊಲೀಸರು ಇದೀಗ ಪ್ರಕರಣವನ್ನು ಬದಲಾಯಿಸಿ ಐಪಿಸಿಯ ಸೆಕ್ಷನ್ 376 (ಗ್ಯಾಂಗ್ ರೇಪ್) ಅನ್ನು ಸೇರಿಸಿದ್ದಾರೆ. ಶಾಸಕರ ಪುತ್ರ ಮತ್ತು ಅಲ್ಪಸಂಖ್ಯಾತ ಮಂಡಳಿಯ ಅಧ್ಯಕ್ಷರು ಪಾರ್ಟಿಯಲ್ಲಿ ಹಾಜರಿದ್ದ ವೇಳೆ ಹುಡುಗಿಯ ಜೊತೆಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಲಿಪಶು ಒಬ್ಬ ಅಪ್ರಾಪ್ತ ಆರೋಪಿಯನ್ನು ಮಾತ್ರ ಗುರುತಿಸಲು ಮತ್ತು ಹೆಸರಿಸಲು ಸಾಧ್ಯವಾಗಿದೆ ಎನ್ನಲಾಗುತ್ತಿದೆ.
ಅಸ್ಸಾಂನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್; 24 ಗಂಟೆಯಲ್ಲಿ ಎನ್ಕೌಂಟರ್ಗೆ ಇಬ್ಬರು ಆರೋಪಿಗಳು ಬಲಿ
ಶಾಸಕರ ಪುತ್ರನಿಂದ ಅನುಚಿತ ವರ್ತನೆ, ಅತ್ಯಾಚಾರ
ಮರ್ಸಿಡಿಸ್ ಕಾರಿನಲ್ಲಿ ಆರೋಪಿಯನ್ನು ಸೇರಿಸಿಕೊಳ್ಳಾಗಿದೆ ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ. ಸಂತ್ರಸ್ತೆಯ ತಂದೆ ದಾಖಲಿಸಿರುವ ಎಫ್ಐಆರ್ನ ಪ್ರಕಾರ, ಆರೋಪಿಯು ತನ್ನ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಮತ್ತು ಆಕೆಯ ಕುತ್ತಿಗೆಗೆ ಗಾಯಗಳನ್ನು ಕೂಡ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ತಕ್ಷಣದ ಬಂಧನಕ್ಕೆ ತೆಲಂಗಾಣ ಬಿಜೆಪಿ ಆಗ್ರಹ
ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. "ಈ ಅಪರಾಧದ ಐವರು ಅಪರಾಧಿಗಳಲ್ಲಿ ಒಬ್ಬ ವ್ಯಕ್ತಿ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಂಐಎಂ) ಶಾಸಕರ ಮಗ ಮತ್ತು ಇನ್ನೊಬ್ಬರು ಅಲ್ಪಸಂಖ್ಯಾತ ಅಧ್ಯಕ್ಷರ ಮಗ ಎಂದು ಆರೋಪಿಸಲಾಗಿದೆ" ಎಂದು ತೆಲಂಗಾಣ ಬಿಜೆಪಿ ಹೇಳಿದೆ.
ಸಂತ್ರಸ್ತೆಯ ಪೋಷಕರು ಕ್ರಿಮಿನಲ್ ದೂರು ನೀಡಿದರೂ ಹೈದರಾಬಾದ್ ಪೊಲೀಸರು ಇನ್ನೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ನಿಧಾನಗತಿಯ ಕ್ರಮ ಕೈಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಹೈದರಾಬಾದ್ ಪೊಲೀಸರ ವಿರುದ್ಧ ಬಿಜೆಪಿ ಆರೋಪ
"ಈ ಪ್ರಕರಣದಲ್ಲಿ ಬಂಧಿಸಲು ಪೊಲೀಸರು ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಅಥವಾ ಸಿಎಂ ಕೆಸಿಆರ್ ಅವರ ಅನುಮತಿಗಾಗಿ ಕಾಯುತ್ತಿದ್ದಾರೆಯೇ ಎಂದು ನಾವು ಆಶ್ಚರ್ಯ ಪಡುತ್ತಿದ್ದೇವೆ! ಹಗಲು ಹೊತ್ತಿನಲ್ಲಿ ಹ್ಯಾಕಿಂಗ್ಗಳು, ಅಂತರ್ಧರ್ಮೀಯ ಕೊಲೆಗಳು ಮತ್ತು ಅತ್ಯಾಚಾರಗಳಂತಹ ಭಯಾನಕ ಅಪರಾಧಗಳ ಸರಣಿಗಳು ತೆಲಂಗಾಣದಲ್ಲಿ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನಿನ ಭಯ ತಳಮಟ್ಟದಲ್ಲಿ ಕಂಡುಬರುತ್ತಿದೆ ಎಂದು ತೆಲಂಗಾಣ ಬಿಜೆಪಿಯ ಮುಖ್ಯ ವಕ್ತಾರ ಕೃಷ್ಣ ಸಾಗರ್ ರಾವ್ ಹೇಳಿದ್ದಾರೆ. ಪ್ರಕರಣದ ಎಲ್ಲ ಐವರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
Recommended Video