ಚಹಾವಾಲಾನಿಂದ ಪ್ರಧಾನಿ, ನಿಮ್ಮ ಪರಿವರ್ತನೆ ಅಮೋಘ: ಇವಾಂಕಾ
ಹೈದರಾಬಾದ್, ನವೆಂಬರ್ 28: ನಗರದಲ್ಲಿ ಇಂದು ಜಾಗತಿಕ ಉದ್ಯಮಶೀಲತಾ ಶೃಂಗಸಭೆ (ಜಿಇಎಸ್) ಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಇವಾಂಕಾ ಟ್ರಂಪ್ ಉದ್ಘಾಟಿಸಿದರು.
ರೋಬೋಟ್ ಗೆ ತಮ್ಮ ಬೆರಳಚ್ಚು ನೀಡುವ ಮೂಲಕ ಮೋದಿ ಮತ್ತು ಇವಾಂಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗ್ಯಾಲರಿ : ಸುಂದರಿ ಇವಾಂಕಾಗೆ ಸಿಂಗಾರಗೊಂಡ ಮುತ್ತಿನ ನಗರಿ
ನಂತರ ಉದ್ಯಮಶೀಲತಾ ಶೃಂಗಸಭೆಗೆ ಆಗಮಿಸಿದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಲಹೆಗಾರ್ತಿ ಇವಾಂಕಾ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದರು.
"ಇವತ್ತು ನೀವು ಮಾಡಿರುವ ಸಾಧನೆ ಅಮೋಘವಾದುದು. ಬಾಲ್ಯದಲ್ಲಿ ಚಹಾ ಮಾರುತ್ತಿದ್ದ ನೀವು ಚುನಾವಣೆಗೆ ನಿಂತು ಪ್ರಧಾನಿಯಾಗುವ ಮೂಲಕ ಪರಿವರ್ತನೆ ಸಾಧ್ಯವಿದೆ ಎಂಬುದನ್ನು ತೋರಿಸಿಕೊಟ್ಟಿದ್ದೀರಿ," ಎಂದು ಇವಾಂಕಾ ಪ್ರಶಂಸೆ ವ್ಯಕ್ತಪಡಿಸಿದರು.

ಮುತ್ತನ ನಗರಿಯ ಭೇಟಿಯ ಮತ್ತು
ತಂತ್ರಜ್ಞಾನವನ್ನು ಒಳಗೊಂಡಿರುವ ಪುರಾತನ ನಗರ ಹೈದರಾಬಾದ್ ಭೇಟಿಗೆ ಅದ್ಭುತ ನಗರ ಎಂದು ಇದೇ ವೇಳೆ ಇವಾಂಕಾ ಬಣ್ಣಿಸಿದರು.
ಜಾಗತಿಕ ಉದ್ಯಮಶೀಲತಾ ಶೃಂಗಸಭೆ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ 1500ಕ್ಕೂ ಹೆಚ್ಚು ಮಹಿಳಾ ಉದ್ಯಮಿಗಳು ಭಾಗಿಯಾಗುತ್ತಿರುವುದು ನನಗೆ ಹೆಮ್ಮೆಯನ್ನುಂಟು ಮಾಡಿದೆ ಎಂದು ಇವಾಂಕಾ ಹೇಳಿದರು.

ಭಾರತೀಯರಿಗೆ ಶುಭ ಕೋರಿದ ಇವಾಂಕಾ
ಇದೇ ವೇಳೆ ಇವಾಂಕಾ ಟ್ರಂಪ್ 70ನೇ ಸ್ವಾತಂತ್ರೋತ್ಸವ ಆಚರಿಸುತ್ತಿರುವ ಭಾರತೀಯರಿಗೆ ಶುಭಾಶಯ ಕೋರಿದರು. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಉದ್ಯಮಿಗಳ ಮನ ರಂಜಿಸಿತು.

'ಮೊದಲು ಮಹಿಳೆ, ಎಲ್ಲರಿಗೂ ಸಮೃದ್ಧಿ'
ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "'ಮೊದಲು ಮಹಿಳೆ, ಎಲ್ಲರಿಗೂ ಸಮೃದ್ಧಿ' ಥೀಮ್ ಮೂಲಕ ಈ ಆವೃತ್ತಿಯ ಜಿಎಸ್ಇ ವಿಭಿನ್ನವಾಗಿದೆ. ಭಾರತೀಯ ಪುರಾಣದಲ್ಲಿ, ಮಹಿಳೆಯರು ಶಕ್ತಿ ದೇವತೆಯ ಅವತಾರವಾಗಿದ್ದಾರೆ. ಮಹಿಳಾ ಸಬಲೀಕರಣವು ಅಭಿವೃದ್ಧಿಗೆ ಮುಖ್ಯವಾದುದು ಎಂದು ನಾವು ನಂಬಿದ್ದೇವೆ," ಎಂದು ಹೇಳಿದರು.

ಭಾರತದಲ್ಲಿ ಉದ್ಯಮ ನಡೆಸುವುದು ಸುಲಭ
ದಕ್ಷಿಣ ಏಷ್ಯಾದಲ್ಲಿ ಇದೇ ಮೊದಲ ಬಾರಿಗೆ ಜಿಇಸಿ ನಡೆಯುತ್ತಿದೆ ಎಂಬುದನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, "ನಮ್ಮಲ್ಲಿರುವ ವಿಶ್ವದ ಅತ್ಯಂತ ಹಳೆಯ ಹಡಗುಕಟ್ಟೆಗಳು, ಬಂದರುಗಳು ಪ್ರಾಚೀನ ವ್ಯಾಪಾರ ಸಂಪರ್ಕಗಳ ಸಾಕ್ಷ್ಯಾಧಾರಗಳಾಗಿವೆ," ಎಂದು ಹೇಳಿದರು.
ದೇಶದಲ್ಲಿರುವ ವ್ಯವಹಾರದ ವಾತಾವರಣವನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ನಾವು ತೆಗೆದುಕೊಂಡಿದ್ದೇವೆ. ಈ ಉಪಕ್ರಮದ ಪರಿಣಾಮದಿಂದ ಭಾರತದಲ್ಲಿ ಉದ್ಯಮ ನಡೆಸುವುದು ಸುಲಭ (ಈಸ್ ಆಫ್ ಡೂಯಿಂಗ್) ವಾಗಿದೆ ಎಂದು ಅಭಿಪ್ರಾಯಪಟ್ಟರು.
|
ನಾವೀನ್ಯತೆಗಳ ಅಕ್ಷಯ ಪಾತ್ರೆ ಭಾರತ
"ಭಾರತವು ನಾವೀನ್ಯತೆ ಮತ್ತು ಉದ್ಯಮಶೀಲತೆಯ ಅಕ್ಷಯ ಪಾತ್ರೆಯಾಗಿತ್ತು. ಪುರಾತನ ಭಾರತೀಯರು ಚರಕ ಸಂಹಿತ, ಆಯುರ್ವೇದವನ್ನು ಜಗತ್ತಿಗೆ ಪರಿಚಯಿಸಿದರು. ಯೋಗ ಭಾರತದ ಮತ್ತೊಂದು ಪ್ರಾಚೀನ ಅನ್ವೇಷಣೆ. ಪ್ರತಿ ವರ್ಷ ಜೂನ್ 21 ರಂದು ಯೋಗ ದಿನವನ್ನು ಆಚರಿಸಲು ಜಗತ್ತು ಒಂದಾಗುತ್ತದೆ," ಎಂದು ಪ್ರಧಾನಿ ಹೇಳಿದರು.
ನಾವು ಜಗತ್ತಿನ ಅತಿ ದೊಡ್ಡ ಡಿಜಿಟಲ್ ಡೇಟಾಬೇಸ್ ಆದ ಆಧಾರ್ ರಚಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಮೋದಿ ತಿಳಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications