ಅಸಾದುದ್ದೀನ್ ಓವೈಸಿ ವಿರುದ್ಧ ಮಾಜಿ ನಾಯಕ ಅಜರುದ್ದೀನ್ ಸ್ಪರ್ಧೆ?
ಹೈದರಾಬಾದ್, ಮಾರ್ಚ್ 01: ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿದ್ದು, ಅಚ್ಚರಿಯ ಹೆಸರುಗಳು ಈ ಬಾರಿ ಕೇಳಿ ಬರುತ್ತಿವೆ.
ತೆಲಂಗಾಣ ಕಾಂಗ್ರೆಸ್ ಸಮಿತಿಯು ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಿದ್ದು, ಹೈದರಾಬಾದ್ ಕ್ಷೇತ್ರದಲ್ಲಿ ಮಾಜಿ ಕ್ರಿಕೆಟರ್ ಮೊಹಮ್ಮದ್ ಅಜರುದ್ದೀನ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ಕಾಂಗ್ರೆಸ್ ತಯಾರಿಸಿರುವ ಅಂತಿಮ ಪಟ್ಟಿ ಸದ್ಯ ಎಐಸಿಸಿ ಸ್ಕ್ರೀನಿಂಗ್ ಸಮಿತಿ ಮುಂದಿದೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಎರಡರಿಂದ ಐದು ಆಕಾಂಕ್ಷಿಗಳ ಹೆಸರನ್ನು ಸೂಚಿಸಲಾಗಿದೆ.

ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಮಾಜಿ ಕ್ರಿಕೆಟರ್ ಹಾಗೂ ತೆಲಂಗಾಣ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಸೇರಿ ಇತರ ಇಬ್ಬರ ಹೆಸರನ್ನು ಸೂಚಿಸಲಾಗಿದ್ದು, ಅಜರುದ್ದೀನ್ ಅವರು ಈ ಬಾರಿ ಸ್ಪರ್ಧಿಸುವುದು ಖಚಿತವಾಗಿದೆ.
ತೆಲಂಗಾಣ ಆಡಳಿತಾರೂಢ ಪಕ್ಷ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಹಾಗೂ ಎಐಎಂಐಎಂ ಮೈತ್ರಿ ಹೊಂದಿದ್ದು, ಹೈದರಾಬಾದ್ ಕ್ಷೇತ್ರದಲ್ಲಿ ಓವೈಸಿಗೆ ಭಾರಿ ಬೆಂಬಲವಿದೆ. ಆದರೂ, ಅಜರುದ್ದೀನ್ ಮತ್ತು ಅಸಾದುದ್ದೀನ್ ನಡುವೆ ನೇರ ಪೈಪೋಟಿ ನಿರೀಕ್ಷೆಯಿದೆ.
2009ರಲ್ಲಿ ಉತ್ತರ ಪ್ರದೇಶದ ಮರಾಠಾಬಾದ್ನಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅಜರುದ್ದೀನ್ ಗೆಲುವು ಸಾಧಿಸಿದ್ದರು. ಆದರೆ, 2014 ರಲ್ಲಿ ರಾಜಸ್ಥಾನದ ಮಾಧೋಪುರ್ ನಿಂದ ಸ್ಪರ್ಧಿಸಿ ಸೋಲು ಕಂಡರು.ಸದ್ಯ ಅಜರುದ್ದೀನ್ ಅವರು ತೆಲಂಗಾಣ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 2018 ನವೆಂಬರ್ ನಲ್ಲಿ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications