ಪ್ರಿಯಾ ಪ್ರಕಾಶ್ ಕಣ್ ಮಿಟುಕು ಹಾವಭಾವ ವಿರುದ್ಧ ದೂರು
ಹೈದರಾಬಾದ್, ಫೆಬ್ರವರಿ 14: 'ರಾಷ್ಟ್ರೀಯ ಕ್ರಷ್' ಎನಿಸಿಕೊಂಡಿರುವ ಮಲ್ಲು ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಹಾಗೂ ಚಿತ್ರ ತಂಡದ ವಿರುದ್ಧ ಇಲ್ಲಿನ ಫಲಕ್ನಾಮಾ ಪೊಲೀಸರಿಗೆ ದೂರು ನೀಡಲಾಗಿದೆ.
ಪ್ರಿಯಾ ಅವರ ಕಣ್ ಮಿಟುಕು, ಹಾವಭಾವ, ಗೀತ ಸಾಹಿತ್ಯ ಹಾಗೂ ದೃಶ್ಯಗಳು ಪ್ರವಾದಿಗಳಿಗೆ ಅಪಮಾನ ಮಾಡಿದ್ದಂತಿದೆ ಎಂದು ಮುಸ್ಲಿಮ್ ಯುವಕರ ಗುಂಪೊಂದು ದೂರು ನೀಡಿದೆ.
ಗ್ಯಾಲರಿ: ಕಣ್ ಮಿಟುಕು ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್
ಪ್ರಿಯಾ ಪ್ರಕಾಶ್ ಅವರ ವಿರುದ್ಧ ಮಾತ್ರ ದೂರು ನೀಡಿಲ್ಲ. ಈ ಚಿತ್ರದಲ್ಲಿ ಆ ಹಾಡಿನಲ್ಲಿ ಯಾರೇ ಅಭಿನಯಿಸಿದ್ದರೂ ನಮ್ಮ ಆಕ್ಷೇಪ ಇರುತ್ತಿತ್ತು. 'ಮಾಣಿಕ್ಯ ಮಲಯಾಯ ಪೂವಿ..' ಹಾಡಿನ ಸಾಹಿತ್ಯಕ್ಕೂ ಪ್ರವಾದಿ ಮೊಹಮ್ಮದರ ಜೀವನಕ್ಕೂ ಸಾಮ್ಯತೆ ಇದೆ, ಜತೆಗೆ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಶಬ್ದಗಳಿವೆ ದೂರಿನಲ್ಲಿ ಹೇಳಲಾಗಿದೆ.

ಚಿತ್ರ ತಂಡದ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ನಟಿ ಪ್ರಿಯಾ ವಿರುದ್ಧ ನೀಡಿರುವ ದೂರಲ್ಲ. ಹಾಡಿನಲ್ಲಿ ಬಳಸಿರುವ ಶಬ್ದಕ್ಕೆ ಮಾತ್ರ ವಿರೋಧ ವ್ಯಕ್ತವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಪ್ರಿಯಾ ಅಭಿನಯದ 'ಒರು ಅಡಾರ್ ಲವ್' ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗಿದೆ.
ಈ ಹಾಡಿನಲ್ಲಿ ಪ್ರಿಯಾ ಅವರು ನೀಡಿರುವ ಹಾವಭಾವದಿಂದ ಮುಸ್ಲಿಮರ ಭಾವನೆಗೆ ಹೇಗೆ ಧಕ್ಕೆ ಉಂಟಾಗಿದೆ ಎಂಬುದನ್ನು ತಿಳಿಸಲು ಅದ್ನಾನ್ ಖಮರ್ ಎಂಬ ಯುವಕ ಫೇಸ್ ಬುಕ್ ಲೈವ್ ಬಂದು ವಿವರಿಸಿದ್ದಾರೆ.
ಮಹಿಳೆಯು ಮುತ್ತಿನ ಹೂವಿನಂತೆ- ಮಹಾರಾಣಿ ಖತೀಜಾ ಬೀಬಿ ಪವಿತ್ರ ನಗರಿ ಮೆಕ್ಕಾದಲ್ಲಿ ನೆಲೆಸಿದಂತೆ ಎಂಬ ವಾಕ್ಯಕ್ಕೆ ಆಕ್ಷೇಪ ವ್ಯಕ್ತವಾಗಿದೆ ಮುಜಾಕರ್ ಅಲಿ ಹೇಳಿದ್ದು, ಸಾಹಿತ್ಯಕ್ಕೆ ತಕ್ಕಂತೆ ಚಿತ್ರೀಕರಣ ಮಾಡಿಲ್ಲ. ಚಿತ್ರದ ನಿರ್ದೇಶಕ ಅಬ್ದುಲ್ ಸೇರಿದಂತೆ ಚಿತ್ರದಲ್ಲಿ ಅನೇಕರು ಇಸ್ಲಾಂ ಧರ್ಮದವರಿದ್ದರೂ ಈ ರೀತಿ ಪ್ರಮಾದವಾಗಿದೆ ಎಂದು ವ್ಯಥೆ ಪಟ್ಟರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications