ತೆಲಂಗಾಣದ ನಲ್ಗೊಂಡದ ಹೊಲದಲ್ಲಿ ತರಬೇತಿ ವಿಮಾನ ಪತನ, ಪೈಲಟ್ ಸಾವು
ಹೈದ್ರಾಬಾದ್, ಫೆಬ್ರವರಿ 26: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಹೊಲದಲ್ಲಿ ತರಬೇತಿ ವಿಮಾನವೊಂದು ಪತನವಾಗಿರುವ ಘಟನೆ ಶನಿವಾರ ವರದಿಯಾಗಿದೆ. ವಿಮಾನ ಪತನದ ಸಂದರ್ಭದಲ್ಲಿ ಪೈಲಟ್ ಮತ್ತು ಟ್ರೈನಿ(ತರಬೇತಿ ಪಡೆಯುವ) ಪೈಲಟ್ ವಿಮಾನದಲ್ಲಿದ್ದರು ಎಂದು ತಿಳಿದು ಬಂದಿದೆ.
ವಿಮಾನದಲ್ಲಿದ್ದ ಒಬ್ಬ ಪೈಲಟ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದು, ವಿಮಾನದಲ್ಲಿದ್ದ ಇತರರ ಕುರಿತು ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ವಿಮಾನ ಮತ್ತು ವಿಮಾನದಲ್ಲಿದ್ದ ಜನರ ಹೆಚ್ಚಿನ ವಿವರಗಳಿಗಾಗಿ ಅವರು ತರಬೇತಿ ಅಕಾಡೆಮಿಯನ್ನು ಸಂಪರ್ಕಿಸುತ್ತಿದ್ದಾರೆ. ನಲ್ಗೊಂಡ ಜಿಲ್ಲಾ ಪೊಲೀಸ್ ತಂಡಗಳು ಆರೋಗ್ಯ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪೆದ್ದವೂರ ಮಂಡಲದ ತುಂಗತುರ್ಥಿ ಗ್ರಾಮದ ಗದ್ದೆಯಲ್ಲಿ ರೈತರು ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ಘಟನೆ ನಡೆದಿದ್ದು, ಸ್ಥಳಕ್ಕೆ ರೈತರು ಧಾವಿಸಿದ್ದರು. ರೈತರೇ ತಕ್ಷಣ ಬೆಂಕಿ ನಂದಿಸಲು ಮತ್ತು ವಿಮಾನದಲ್ಲಿದ್ದ ಪೈಲಟ್ಗಳನ್ನು ರಕ್ಷಿಸಲು ಪ್ರಯತ್ನಿಸಿದರು.

ಗದ್ದೆಯಲ್ಲಿ ಪತನಗೊಂಡ ವಿಮಾನ:
ನಾಗರಾಜು ಸಾಗರ್ ಕಡೆಯಿಂದ ಹಾರಿ ಬರುತ್ತಿದ್ದ ವಿಮಾನ, ಗದ್ದೆಯಲ್ಲಿ ಪತನಗೊಂಡು ಸ್ಫೋಟಗೊಂಡಿತು. "ನಾವು ಸ್ಥಳಕ್ಕೆ ಧಾವಿಸಿದಾಗ, ಅವುಗಳಲ್ಲಿ ಮೃತದೇಹಗಳನ್ನು ನೋಡಿದ್ದೇವೆ," ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.
Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications