ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸ್ತೆ ಅಪಘಾತ: ಎನ್‌ಟಿಆರ್ ಮಗ ನಂದಮೂರಿ ಹರಿಕೃಷ್ಣ ಸಾವು

|
Google Oneindia Kannada News

Recommended Video

ಬಾರದ ಲೋಕಕ್ಕೆ ತೆರಳಿದ ಖ್ಯಾತ ನಟ..! | Oneindia Kannada

ಹೈದರಾಬಾದ್, ಆಗಸ್ಟ್ 29: ತೆಲುಗು ಚಿತ್ರರಂಗದ ಖ್ಯಾತ ನಟ ಎನ್‌.ಟಿ ರಾಮರಾವ್ ಅವರ ಮಗ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಾಮೈದ ನಂದಮೂರಿ ಹರಿಕೃಷ್ಣ (61) ಬುಧವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು 4.30ರ ಸಮಯದಲ್ಲಿ ಅವರು ಮನೆಯಿಂದ ಹೊರಟಿದ್ದರು. ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ನಿಧನಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ನಿಧನ

ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಹರಿಕೃಷ್ಣ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Nandamuri Harikrishna died in an accident near Nalgonda

ಸ್ವಯಂ ಕಾರುಚಾಲನೆ ಮಾಡುತ್ತಿದ್ದ ಹರಿಕೃಷ್ಣ, ಅತಿ ವೇಗದಿಂದ ಚಲಾಯಿಸುತ್ತಿದ್ದರು. ಆಗ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಅವರ ಜತೆಗಿದ್ದ ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ನಂದಮೂರಿ ಹರಿಕೃಷ್ಣ ದುರ್ಮರಣಕ್ಕೆ ಕಂಬನಿ ಮಿಡಿದ ಗಣ್ಯರು ನಂದಮೂರಿ ಹರಿಕೃಷ್ಣ ದುರ್ಮರಣಕ್ಕೆ ಕಂಬನಿ ಮಿಡಿದ ಗಣ್ಯರು

ಹರಿಕೃಷ್ಣ ಅವರಿಗೆ ಮೊದಲ ಪತ್ನಿಯಿಂದ ಜಾನಕಿ ರಾಮ್, ಕಲ್ಯಾಣ ರಾಮ್ ಮತ್ತು ಸುಹಾಸಿನಿ ಎಂಬ ಮಕ್ಕಳಿದ್ದಾರೆ. ಬಳಿಕ ಮತ್ತೊಂದು ಮದುವೆಯಾಗಿದ್ದ ಅವರಿಗೆ ಜೂನಿಯರ್ ಎನ್‌ಟಿಆರ್ ಎಂದೇ ಖ್ಯಾತರಾದ ತಾರಕ ರಾಮರಾವ್ ಜನಿಸಿದ್ದರು.

Nandamuri Harikrishna died in an accident near Nalgonda

ಹರಿಕೃಷ್ಣ ಅವರ ಮೊದಲ ಮಗ ನಂದಮೂರಿ ಜಾನಕಿರಾಮ್ 2014ರಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಜೂನಿಯರ್ ಎನ್‌ಟಿಆರ್ ಕೂಡ 2009ರಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು.

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ಅಪಘಾತ: ಮೂವರ ದುರ್ಮರಣ ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ಅಪಘಾತ: ಮೂವರ ದುರ್ಮರಣ

1956ರ ಸೆಪ್ಟೆಂಬರ್ 2ರಂದು ಆಂಧ್ರಪ್ರದೇಶದ ನಿಮ್ಮಕರುದಲ್ಲಿ ಜನಿಸಿದ್ದ ಹರಿಕೃಷ್ಣ ಬಾಲನಟನಾಗಿ ಕಾಣಿಸಿಕೊಂಡಿದ್ದರು.

ತೆಲುಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಂದಮೂರಿ ತಾರಕ ರಾಮರಾವ್ (ಎನ್‌ಟಿಆರ್) ಅವರ ನಾಲ್ಕನೆಯ ಮಗನಾಗಿದ್ದ ಹರಿಕೃಷ್ಣ, ತೆಲುಗು ದೇಶಂ ಪಾರ್ಟಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

Nandamuri Harikrishna died in an accident near Nalgonda

ಶ್ರೀ ಕೃಷ್ಣಾವತಾರಂ ಚಿತ್ರದ ಮೂಲಕ 1964ರಲ್ಲಿ ಬಾಲ ಕೃಷ್ಣನ ಪಾತ್ರದಲ್ಲಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿದ್ದಕೊಂಡಿದ್ದ ಹರಿಕೃಷ್ಣ, ತಲ್ಲ ಪೆಲ್ಲಮಾ, ತಾತಮ್ಮ ಕಾಲ, ರಾಮ್ ರಹೀಮ್, ದಾನ ವೀರ ಶೂರ ಕರ್ಣ ಸಿನಿಮಾಗಳಲ್ಲಿ ನಟಿಸಿದ್ದರು.

1977ರಿಂದ 1998ರವರೆಗೂ ಅವರು ಮತ್ತೆ ಬಣ್ಣಹಚ್ಚಿರಲಿಲ್ಲ. ಶ್ರೀ ರಾಮುಲಯ್ಯಾ ಸಿನಿಮಾದ ಮೂಲಕ ಮತ್ತೆ ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಸೀತಾರಾಮ ರಾಜು, ಲಹಿರಿ ಲಹಿರಿ ಲಹಿರಿಲೊ, ಶಿವರಾಮ ರಾಜು, ಸೀತಯ್ಯಾ, ಟೈಗರ್ ಹರಿಶ್ಚಂದ್ರ ಪ್ರಸಾದ್, ಸ್ವಾಮಿ ಚಿತ್ರಗಳಲ್ಲಿ ನಟಿಸಿದ್ದರು. 2005ರಲ್ಲಿ ನಟಿಸಿದ್ದ ಶ್ರಾವಣಮಾಸಂ ಅವರ ಕೊನೆಯ ಚಿತ್ರ.

English summary
Son of famous actor and politician NT Ramarao's son Nandamuri Harikrishna died in an accident on Wednesday near Nalginda, Telangana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X