ಎವರೆಸ್ಟ್ ಏರಲು ಹೋಗಿದ್ದ ಹೈದರಾಬಾದ್ ಟೆಕ್ಕಿ ನಾಪತ್ತೆ
ಹೈದರಾಬಾದ್, ಏ. 27 : ಮೌಂಟ್ ಎವರೆಸ್ಟ್ ಏರಲು ಹೋಗಿದ್ದ ಹೈದರಾಬಾದ್ ಮೂಲದ ಸಾಫ್ಟ್ವೇರ್ ಇಂಜಿನಿಯರ್ ನೀಲಿಮಾ ಕಣ್ಮರೆಯಾಗಿದ್ದಾರೆ. ಶನಿವಾರ ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದ ಬಳಿಕ ನೀಲಿಮಾ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ.
ನೀಲಿಮಾ ಪುಟೋಟಾ (28) ಸೇರಿದಂತೆ 21 ಜನರ ತಂಡ ಮೌಂಟ್ ಎವರೆಸ್ಟ್ ಏರಲು ತೆರಳಿತ್ತು. ತೆಲಂಗಾಣದಿಂದ ಆಯ್ಕೆಯಾಗಿದ್ದ ಏಕೈಕ ಯುವತಿ ನೀಲಿಮಾ ಆಗಿದ್ದರು, ಶನಿವಾರದ ನಂತರ ನೀಲಿಮಾ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಇದರಿಂದ ಕುಟುಂಬದವರು ಗಾಬರಿಯಾಗಿದ್ದಾರೆ.

ಶನಿವಾರ ಬೆಳಗ್ಗೆ ತನ್ನ ಪೋಷಕರಿಗೆ ಕರೆ ಮಾಡಿದ್ದ ನೀಲಿಮಾ ಅವರು, ತಾವು ಸುಮಾರು 4,600 ಮೀಟರ್ ಎತ್ತರ ತಲುಪಿದ್ದು, ಎವರೆಸ್ಟ್ ಬೇಸ್ ಕ್ಯಾಂಪ್ ತಲುಪಲು ಇನ್ನು 4 ದಿನ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದ್ದರು. ಆದರೆ, ನಂತರ ಭೂಕಂಪ ಸಂಭವಿಸಿದೆ. ಆನಂತರ ಅವರ ಸಂಪರ್ಕ ಸಿಕ್ಕಿಲ್ಲ.[ನೇಪಾಳಕ್ಕೆ ತೆರಳಿದ ಕರ್ನಾಟಕದ 10 ವೈದ್ಯರ ತಂಡ]
ಸಂಪರ್ಕ ಕೊರತೆಯಿಂದಾಗಿ ನೀಲಿಮಾ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಅವರಿಗೆ ಏನೂ ಅನಾಹುತವಾಗಿಲ್ಲ ಎಂದು ಪ್ರವಾಸವನ್ನು ಆಯೋಜಿಸಿರುವ ಸಂಘಟಕರು ಹೇಳಿದ್ದಾರೆ. ಏ.18ರಂದು ನೀಲಿಮಾ ಅವರು ಹೈದರಾಬಾದ್ನಿಂದ ತೆರಳಿದ್ದರು. [ಭೂಕಂಪ: ಗೂಗಲ್ ಗುರು ಬಳಸಿ ನಿಮ್ಮವರ ಹುಡುಕಾಟ ನಡೆಸಿ]

ಸಾಫ್ಟ್ವೇರ್ ಇಂಜಿನಿಯರ್ ನೀಲಿಮಾ ಉತ್ತಮ ಭರತನಾಟ್ಯ ಪಟುವೂ ಹೌದು. ಕಳೆದ ಎರಡು ದಿನಗಳಿಂದ ಆಕೆಯ ಸಂಪರ್ಕ ಸಿಗದಿರುವುದಕ್ಕೆ ಕುಟುಂಬದವರು ಆತಂಕಗೊಂಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications