ಚಿರಂಜೀವಿ ಪುತ್ರನ ಹೊಸ ಸಾಹಸ, ಗಗನದಲ್ಲಿ ಹಾರಾಟ
ಹೈದರಾಬಾದ್, ಜುಲೈ 13: ನಟ ಕಮ್ ರಾಜಕಾರಣಿ ಚಿರಂಜೀವಿ ಅವರ ಪುತ್ರ ನಟ ರಾಮ್ ಚರಣ್ ತೇಜ ಹೊಸ ಸಾಹಸಕ್ಕೆ ಕೈ ಹಾಕಿರುವುದು ಎಲ್ಲರಿಗೂ ಗೊತ್ತೇ ಇದೆ. ವಿಮಾನಯಾನ ಕ್ಷೇತ್ರಕ್ಕೆ ಜಿಗಿದಿರುವ ಈ 'ಮಗಧೀರ' ಕಡಿಮೆ ಬಜೆಟ್ ವಿಮಾನವನ್ನು ಪರಿಚಯಿಸಿದ್ದಾರೆ. ರಾಮ್ ಅವರ 'ಟ್ರೂಜೆಟ್' ಸೋಮವಾರ ಚೊಚ್ಚಲ ಪ್ರಯಾಣವನ್ನು ಯಶಸ್ವಿಯಾಗಿ ಪೂರೈಸಿದೆ.
ಟರ್ಬೋ ಮೆಗಾ ಏರ್ ವೇಸ್ ಪ್ರೈ ಲಿಮಿಟೆಡ್ ನ ಭಾಗವಾಗಿರುವ ಟ್ರೂಜೆಟ್ ಸೋಮವಾರ(ಜುಲೈ 13, 2015) ಹೈದರಾಬಾದಿನಿಂದ ತಿರುಪತಿಗೆ ಪ್ರಯಾಣಿಸಿದೆ.
ಈ ಹೊಸ ವಿಮಾನಯಾನ ಮಾರ್ಗವನ್ನು ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಣಪತಿ ರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಟ ರಾಮ್ ಚರಣ್ ತೇಜ, ಬಂಡವಾಳ ಹೂಡಿಕೆದಾರರಾದ ಪ್ರೇಮ್ ಕುಮಾರ್, ವಿ ಉಮೇಶ್ ಮುಂತಾದವರಿದ್ದರು.
ಕೇಂದ್ರದ ಕಾರ್ಮಿಕ ಖಾತೆ ರಾಜ್ಯ ಸಚಿವ ಬಂಡಾರು ದತ್ತಾತ್ರೇಯ, ತೆಲಂಗಾಣದ ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಪಂಚಾಯತ್ ರಾಜ್ ಸಚಿವ ಕೆಟಿ ರಾಮರಾವ್ ಅವರು ಷಂಶಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಉಪಸ್ಥಿತರಿದ್ದರು.

'ಟ್ರೂಜೆಟ್' ಸೋಮವಾರ ಚೊಚ್ಚಲ ಪ್ರಯಾಣ
ವಿಮಾನಯಾನ ಕ್ಷೇತ್ರಕ್ಕೆ ಜಿಗಿದಿರುವ ಈ 'ಮಗಧೀರ' ಕಡಿಮೆ ಬಜೆಟ್ ವಿಮಾನವನ್ನು ಪರಿಚಯಿಸಿದ್ದಾರೆ. ರಾಮ್ ಅವರ 'ಟ್ರೂಜೆಟ್' ಸೋಮವಾರ ಚೊಚ್ಚಲ ಪ್ರಯಾಣವನ್ನು ಯಶಸ್ವಿಯಾಗಿ ಪೂರೈಸಿದೆ.

ಹೈದರಾಬಾದಿನಿಂದ ತಿರುಪತಿಗೆ ಪ್ರಯಾಣ
ಟರ್ಬೋ ಮೆಗಾ ಏರ್ ವೇಸ್ ಪ್ರೈ ಲಿಮಿಟೆಡ್ ನ ಭಾಗವಾಗಿರುವ ಟ್ರೂಜೆಟ್ ಸೋಮವಾರ(ಜುಲೈ 13, 2015) ಹೈದರಾಬಾದಿನಿಂದ ತಿರುಪತಿಗೆ ಪ್ರಯಾಣಿಸಿದೆ. ಈ ಹೊಸ ವಿಮಾನಯಾನ ಮಾರ್ಗವನ್ನು ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಣಪತಿ ರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಟ ರಾಮ್ ಚರಣ್ ತೇಜ, ಬಂಡವಾಳ ಹೂಡಿಕೆದಾರರಾದ ಪ್ರೇಮ್ ಕುಮಾರ್, ವಿ ಉಮೇಶ್ ಮುಂತಾದವರಿದ್ದರು.

ಎಟಿಅರ್ 72-500 ಏರ್ ಕ್ರಾಫ್ಟ್
ಟ್ರೂಜೆಟ್ ವಿಮಾನ ಸದ್ಯಕ್ಕೆ ಎಟಿಅರ್ 72-500 ಏರ್ ಕ್ರಾಫ್ಟ್ ಗಳನ್ನು ಹೊಂದಿದೆ. ಐರಿಷ್ ಮೂಲದ ಕಂಪನಿಯಿಂದ ಭೋಗ್ಯಕ್ಕೆ ಎರಡು ವಿಮಾನಗಳನ್ನು ಪಡೆದುಕೊಳ್ಳಲಾಗಿದೆ. 2016ರ ಅಂತ್ಯಕ್ಕೆ ಇನ್ನೂ 3 ವಿಮಾನಗಳನ್ನು ಖರೀದಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

ಸಾರ್ವಜನಿಕರಿಗೆ ವಿಮಾನಯಾನ ಲಭ್ಯ
72 ಸೀಟುಗಳ ಈ ಲಘು ವಿಮಾನದ ಮುಖ್ಯ ಉದ್ದೇಶ ಕಡಿಮೆ ಬಜೆಟ್ ನಲ್ಲಿ ಉತ್ತಮ ಸೌಲಭ್ಯ ನೀಡಿ ಎಲ್ಲಾಸ್ತ ರದ ಸಾರ್ವಜನಿಕರಿಗೆ ವಿಮಾನಯಾನ ಲಭ್ಯವಾಗುವಂತೆ ಮಾಡುವುದಾಗಿದೆ.

ಟರ್ಬೋ ಮೆಗಾ ಏರ್ ವೇಸ್ ಸಂಸ್ಥೆ
ಕಳೆದ ವಾರ ಜುಲೈ 7ರಂದು ಈ ಹೊಸ ವಿಮಾನ ಸಂಸ್ಥೆ ಟರ್ಬೋ ಮೆಗಾ ಏರ್ ವೇಸ್ (ಟ್ರೂಜೆಟ್ ಏರ್ ವೇಸ್ )ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ದಿಂದ ಪರವಾನಗಿ ಸಿಕ್ಕಿತ್ತು.

ಷಂಶಾಬಾದ್ ವಿಮಾನ ನಿಲ್ದಾಣದಲ್ಲಿ
ಕೇಂದ್ರದ ಕಾರ್ಮಿಕ ಖಾತೆ ರಾಜ್ಯ ಸಚಿವ ಬಂಡಾರು ದತ್ತಾತ್ರೇಯ, ತೆಲಂಗಾಣದ ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಪಂಚಾಯತ್ ರಾಜ್ ಸಚಿವ ಕೆಟಿ ರಾಮರಾವ್ ಅವರು ಷಂಶಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರಿನಲ್ಲೂ ವಿಮಾನ ಸಂಸ್ಥೆ ಕಚೇರಿ
ಹೈದರಾಬಾದ್ ಮೂಲದ ಟ್ರೂಜೆಟ್ ಏರ್ ವೇಸ್ ರಾಜಮಂಡ್ರಿ, ಬೆಂಗಳೂರು, ಚೆನ್ನೈನಲ್ಲೂ ತನ್ನ ಕಚೇರಿಯನ್ನು ಹೊಂದಿದೆ. ಸುಮಾರು 20 ಮಿಲಿಯನ್ ಯುಎಸ್ ಡಾಲರ್ ಹೂಡಿಕೆಯೊಂದಿಗೆ ಹೊಸ ಸಾಹಸಕ್ಕೆ ರಾಮ್ ಚರಣ್ ಹಾಗೂ ಅವರ ತಂಡ ಕೈ ಹಾಕಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications