ಹೈದರಾಬಾದ್ : ದಾಳಿಗೆ ಸಿದ್ಧವಾಗಿದ್ದ ಐಎಸ್ಐಎಸ್ ಉಗ್ರರ ಸೆರೆ
ಹೈದರಾಬಾದ್, ಜುಲೈ 12 : ಹೈದರಾಬಾದ್ನಲ್ಲಿ ಸ್ಫೋಟ ನಡೆಸಲು ಸಿದ್ಧರಾಗಿದ್ದ ಇಬ್ಬರು ಐಎಸ್ಐಎಸ್ ಉಗ್ರರನ್ನು ಎನ್ಐಎ ಬಂಧಿಸಿದೆ. ಕಳೆದ ತಿಂಗಳ ಅಂತ್ಯದಲ್ಲಿ 5 ಉಗ್ರರನ್ನು ನಗರದಲ್ಲಿ ಬಂಧಿಸಲಾಗಿತ್ತು. ಅವರ ವಿಚಾರಣೆ ನಡೆಸಿದ ಬಳಿಕ ಮಂಗಳವಾರ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಉಗ್ರರನ್ನು ಯಾಸೀರ್ ಮತ್ತು ಅತಾಹುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಆರೋಪಿಗಳು ಹೈದರಾಬಾದ್ನಲ್ಲಿ ಎರಡು ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು. ಇಬ್ಬರ ಬಳಿಯೂ ಸುಧಾರಿತ ಸ್ಫೋಟಕಗಳು ಪತ್ತೆಯಾಗಿವೆ ಎಂದು ಎನ್ಐಎ ಹೇಳಿದೆ. [ISIS ಗೆ ಹೈದರಾಬಾದ್ ನಲ್ಲಿ ಹೆಚ್ಚು ಬೆಂಬಲಿಗರು]

ಭಾರತದಲ್ಲಿ ಐಎಸ್ಐಎಸ್ಗೆ ಸಂಬಂಧಿಸಿದ ಪ್ರಕರಣದ ಬಗ್ಗೆ ನಡೆಯುತ್ತಿರುವ ತನಿಖೆ ಜೊತೆಗೆ ಈ ಇಬ್ಬರು ಉಗ್ರರ ತನಿಖೆ ನಡೆಸಲಾಗುತ್ತದೆ ಎಂದು ಎನ್ಐಎ ಹೇಳಿದೆ. ಹೈದರಾಬಾದ್ನ ಇನ್ನೂ ಕೆಲವು ಯುವಕರ ಮೇಲೆ ಎನ್ಐಎ ಕಣ್ಣಿಟ್ಟಿದೆ. [ಹೈದರಾಬಾದ್ : ISIS ಉಗ್ರರ ಸೆರೆ]
ಜೂನ್ 29ರಂದು ಹೈದರಾಬಾದ್ ನಗರದ ವಿವಿಧ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದ ಎನ್ಐಎ ತಂಡ 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿತ್ತು. ನಂತರ 5 ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿತ್ತು. ಐದು ಜನರ ವಿಚಾರಣೆ ನಂತರ ಇಂದು ಇಬ್ಬರನ್ನು ಬಂಧಿಸಲಾಗಿದೆ. [ಭಟ್ಕಳದ ಶಫಿ ಅರ್ಮರ್ ಮೃತಪಟ್ಟಿಲ್ಲ]
ಸಿರಿಯಾದ ಕೆಲವು ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಬಂಧಿತರಿಂದ 15 ಲಕ್ಷ ರೂ. ಹಣ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications