ನಮ್ಮಪ್ಪನಿಗೆ ಗೊತ್ತಿರುವಂತೆ ಇನ್ಯಾರಿಗೂ ತೆಲಂಗಾಣ ಗೊತ್ತಿಲ್ಲ ಎಂದ ಕೆಸಿಆರ್ ಮಗಳು
Recommended Video

ಹೈದರಾಬಾದ್, ಡಿಸೆಂಬರ್ 11: "ನಾವು ಜನರ ಪ್ರತಿಸ್ಪಂದನೆ ನೋಡುತ್ತಿದ್ದೇವೆ. ನಾಲ್ಕೂವರೆ ವರ್ಷದ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿದೆ" ಎಂದು ತೆಲಂಗಾಣದ ಕೆ.ಚಂದ್ರಶೇಖರ್ ರಾವ್ ಅವರ ಮಗಳು ಕವಿತಾ ಹೇಳಿದ್ದಾರೆ. ರಾಜ್ಯದಲ್ಲಿ ಕೆಸಿಆರ್ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕೆಸಿಆರ್ ಅವರ ರೀತಿ ತೆಲಂಗಾಣದ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಕೂಡ ಅವರು ಮಂಗಳವಾರ ಹೇಳಿದ್ದಾರೆ. ಹೇಗಾದರೂ ಮಾಡಿ ಆಡಳಿತಾರೂಢ ಟಿಆರ್ ಎಸ್ ಪಕ್ಷವನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಬಹುಕಾಲದ ವೈಷಮ್ಯ ಮರೆತು, ಕಾಂಗ್ರೆಸ್ ಜತೆಗೆ ಟಿಡಿಪಿ ಕೈ ಜೋಡಿಸಿತ್ತು. ಆ ಮೈತ್ರಿ ಪಕ್ಷದಿಂದ ಯಾವುದೇ ಸವಾಲು ಎದುರಾಗಲಿಲ್ಲ ಎಂದು ಕವಿತಾ ಹೇಳಿದ್ದಾರೆ.
ಈ ಕದನ ಏನಿದ್ದರೂ ಪತ್ರಿಕೆಗಳಲ್ಲಿ ತೋರಿಸಿದ್ದರು. ಆದರೆ ನಾವು ತಳಮಟ್ಟದಲ್ಲಿ ಜನರ ಜತೆಗೆ ಸಂಪರ್ಕದಲ್ಲಿದ್ದೆವು. ಮತ್ತು ಜನರ ಕೆಸಿಆರ್ ಜತೆಗಿದ್ದರು. ಚಂದ್ರಬಾಬು ನಾಯ್ಡು ಆಂದ್ರದಲ್ಲಿನ ತಮ್ಮ ವೈಫಲ್ಯವನ್ನು ಮರೆಮಾಚಲು ಯತ್ನಿಸಿದರು. ಮಹಾಘಟ್ ಬಂಧನ್ ಅನ್ನು ಹೈಜಾಕ್ ಮಾಡಿ, ತೆಲಂಗಾಣದಲ್ಲಿ ಪ್ರಚಾರಕ್ಕೆ ಇಳಿದರು ಎಂದು ಆಕೆ ಹೇಳಿದ್ದಾರೆ.

ನಾವು ಇನ್ನಷ್ಟು ವಿಸ್ತಾರ ಆಗುತ್ತೇವೆ, ನಾವು ರಾಷ್ಟ್ರಮಟ್ಟದ ರಾಜಕಾರಣಕ್ಕೆ ತೆರಳುತ್ತೇವೆ. ನಾಳೆ ಖಂಡಿತವಾಗಿಯೂ ರಾಷ್ಟ್ರಮಟ್ಟದ ಕಾರ್ಯಸೂಚಿ (ಅಜೆಂಡಾ) ಘೋಷಣೆ ಮಾಡುತ್ತೇವೆ. ರಾಷ್ಟ್ರ ಮಟ್ಟದಲ್ಲಿ ಪರ್ಯಾಯದ ಅಗತ್ಯವಿದೆ. ಕೆಸಿಆರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಆದರೆ ರಾಷ್ಟ್ರ ರಾಜಕಾರಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದಿದ್ದಾರೆ ಕವಿತಾ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications