ಈಗ ತೆಲಂಗಾಣದಲ್ಲೂ ರಾಜಕೀಯ ಬಿಕ್ಕಟ್ಟನ ಆತಂಕ
ಹೈದರಾಬಾದ್, ಜು. 1: ಬಿಜೆಪಿ ಸಂಸದ ಕೆ. ಲಕ್ಷ್ಮಣ್ ಶುಕ್ರವಾರ ತೆಲಂಗಾಣದಲ್ಲಿ ಮಹಾರಾಷ್ಟ್ರದಂತಹ ರಾಜಕೀಯ ಬೆಳವಣಿಗೆಗಳ ಬಗ್ಗೆ ಭವಿಷ್ಯ ನುಡಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರ ಬಂಡಾಯದಂತಹ ಪರಿಸ್ಥಿತಿಯನ್ನು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಎದುರಿಸಲಿದೆ ಎಂದು ಸಂಸದರು ಹೇಳಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ಹೈದರಾಬಾದ್ನಲ್ಲಿ ಸಾರ್ವಜನಿಕ ಸಭೆಯ ನಂತರ ತೆಲಂಗಾಣದ ರಾಜಕೀಯ ಸನ್ನಿವೇಶವು ಸಂಪೂರ್ಣವಾಗಿ ಬದಲಾಗಲಿದೆ ಎಂದು ಲಕ್ಷ್ಮಣ್ ಭವಿಷ್ಯ ನುಡಿದಿದ್ದಾರೆ.
ಹೈದರಾಬಾದ್ಗೆ ಇಂದು ನಡ್ಡಾ ಭೇಟಿ: ನಾಳೆಯಿಂದ ಬಿಜೆಪಿ ಬೃಹತ್ ರೋಡ್ ಶೋ ಯೋಜನೆ
ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಶನಿವಾರ ಆರಂಭವಾಗಲಿದ್ದು, ಭಾನುವಾರ ಸಿಕಂದರಾಬಾದ್ನ ಪರೇಡ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ನಿಗದಿಪಡಿಸಲಾಗಿದೆ. ಇದನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ನಾಯಕರು ಮಾತನಾಡಲಿದ್ದಾರೆ.
ರಾಜ್ಯಸಭಾ ಸದಸ್ಯರಾಗಿರುವ ಲಕ್ಷ್ಮಣ್, ಟಿಆರ್ಎಸ್ ಶಿವಸೇನೆಯಂತೆ ಕುಟುಂಬದ ಪಕ್ಷವಾಗಿರುವುದರಿಂದ ಅದೇ ಮಾದರಿಯ ಪರೀಕ್ಷೆಯನ್ನು ಎದುರಿಸಲಿದೆ. ಟಿಆರ್ಎಸ್ ಮತ್ತು ಕೆಸಿಆರ್ ಪತನ ಆರಂಭವಾಗಿದೆ ಎಂದರು. ಮೋದಿ, ಅಮಿತ್ ಶಾ ಮತ್ತು ನಡ್ಡಾ ಅವರು ವಿಶೇಷವಾಗಿ ತೆಲಂಗಾಣವನ್ನು ಕೇಂದ್ರೀಕರಿಸಿದ್ದಾರೆ ಎಂದು ಹೇಳಿದ ಸಂಸದರು, ಒಂದು ವರ್ಷದಲ್ಲಿ ತೆಲಂಗಾಣದಲ್ಲಿ ರಾಮ ರಾಜ್ಯ ಅಸ್ತಿತ್ವಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ಹೈದರಾಬಾದ್: ಭೇಟಿಗೂ ಮೊದಲೇ ಪ್ರಧಾನಿ ಮೋದಿಗೆ ಬೈ ಬೈ ಹೋರ್ಡಿಂಗ್
ರಾಜ್ಯದಲ್ಲಿ ಮುಂದಿನ ಚುನಾವಣೆಗೆ ಟಿಆರ್ಎಸ್ ಮತ್ತು ಕಾಂಗ್ರೆಸ್ ಕೈಜೋಡಿಸಲಿವೆ ಎಂದು ಭವಿಷ್ಯ ನುಡಿದ ಅವರು. ಅವರು ಕಾಂಗ್ರೆಸ್ ಮತ್ತು ಎಐಎಂಐಎಂ ಅನ್ನು ಟಿಆರ್ಎಸ್ನ 'ಬಿ' ಪಕ್ಷಗಳು ಎಂದು ಕರೆದರು. ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಟಿಆರ್ಎಸ್ ಬೆಂಬಲ ನೀಡಿಲ್ಲ ಎಂದು ಲಕ್ಷ್ಮಣ್ ಟೀಕಿಸಿದರು.
ಸಂಸದ ಲಕ್ಷ್ಮಣ್ ಮತ್ತು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಪರೇಡ್ ಮೈದಾನಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಟಿಆರ್ಎಸ್ ಬಿಜೆಪಿ ಸಭೆಗೆ ಅಡ್ಡಿಪಡಿಸುತ್ತಿದೆ ಎಂದು ಕಿಶನ್ ರೆಡ್ಡಿ ಆರೋಪಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಬಡವರ ಸುಭದ್ರ ಭವಿಷ್ಯದ ಬಗ್ಗೆ ಸಾರ್ವಜನಿಕ ಸಭೆ ಭರವಸೆ ನೀಡಲಿದೆ. ಬಿಜೆಪಿ ಸಭೆಯು ಜನರ ಆಶೀರ್ವಾದವನ್ನು ಪಡೆಯುತ್ತಿದ್ದರೆ, ಟಿಆರ್ಎಸ್ ಸರ್ಕಾರ ಜನರನ್ನು ದಾರಿ ತಪ್ಪಿಸುವ ಹೋರ್ಡಿಂಗ್ಗಳನ್ನು ಹಾಕುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಸಚಿವ ಜಿ. ಕಿಶನ್ ರೆಡ್ಡಿ ಹೇಳಿದರು.