ತಿರುಪತಿಗೆ 16 ಕೋಟಿ ದಾನ ಮಾಡಿದ ಎನ್ಆರ್ ಐ ಉದ್ಯಮಿ
ತಿರುಪತಿ, ಫೆ.4 : ಜಗತ್ತಿನ ಅತ್ಯಂತ ಶ್ರೀಮಂತ ದೇವರು ಎಂಬ ಹೆಗ್ಗಳಿಕೆ ಗಳಿಸಿರುವ ತಿರುಪತಿ ತಿಮ್ಮಪ್ಪನಿಗೆ ಶೀಘ್ರವೇ 33 ಕೆಜಿ ಚಿನ್ನದ ಹಾರವನ್ನು ಭಕ್ತರೊಬ್ಬರು ಸಮರ್ಪಿಸಲಿದ್ದಾರೆ. ಹೌದು, ಅನಿವಾಸಿ ಭಾರತೀಯ ಉದ್ಯಮಿ ಎಂ.ರಾಮಲಿಂಗ ರಾಜು ಇದಕ್ಕಾಗಿ 16 ಕೋಟಿ ರೂ.ಗಳನ್ನು ದೇವಾಲಯಕ್ಕೆ ನೀಡಿದ್ದಾರೆ.
ಅಮೆರಿಕ ನಿವಾಸಿಯಾಗಿರುವ ಉದ್ಯಮಿ ಎಂ.ರಾಮಲಿಂಗ ರಾಜು ತಿಮ್ಮಪ್ಪನಿಗೆ ಭಾರೀ ಗಾತ್ರದ ಚಿನ್ನದ ಹಾರವನ್ನು ನೀಡುವ ಆಶಯ ಹೊಂದಿದ್ದರು. ಈ ಕುರಿತು ತಿರುಪತಿ ತಿರುಮಲ ದೇವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು, ಕೆಲವು ದಿನಗಳ ಹಿಂದೆ ಇದಕ್ಕಾಗಿ 16 ಕೋಟಿ ರೂಪಾಯಿಗಳನ್ನು ದೇವಾಲಯದ ಆಡಳಿತ ಮಂಡಳಿಗೆ ನೀಡಿದ್ದರು.

ತಿರುಪತಿ ತಿರುಮಲ ಆಡಳಿತ ಮಂಡಳಿ ಈ ದಾನದ ಹಣದಲ್ಲಿ ಚಿನ್ನದ ಹಾರ ಮಾಡಿಸಲು ತೀರ್ಮಾನ ಕೈಗೊಂಡಿದೆ. ಈ ಹಾರಕ್ಕೆ 'ಸಹಸ್ರ ನಾಮ ಕಾಸುಲಾ ಮಾಲಾ' ಎಂದು ಹೆಸರಿಡಲಾಗಿದೆ. 33 ಕೆಜಿ ಚಿನ್ನ ಬಳಸಿ ಬಹು ಪದರ ಇರುವ ಹಾರವನ್ನು ತಯಾರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 11 ಕೋಟಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. [ತಿಮ್ಮಪ್ಪನ ಸನ್ನಿಧಿಯಲ್ಲಿ ವೈಕುಂಠ ಏಕಾದಶಿ]
ಎಂ.ರಾಮಲಿಂಗ ರಾಜು ಅವರು ಈಗಾಗಲೇ 16 ಕೋಟಿ ರೂ.ಗಳನ್ನು ದೇವಾಲಯಕ್ಕೆ ನೀಡಿದ್ದಾರೆ. ಇದರಲ್ಲಿ 11 ಕೋಟಿ ಚಿನ್ನದ ಹಾರಕ್ಕೆ ಖರ್ಚಾಗಲಿದೆ ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ. ಉಳಿದ ಹಣವನ್ನು ತಿರುಚನೂರಿನಲ್ಲಿ ಭಕ್ತಾದಿಗಳಿಗೆ ಅನುಕೂಲವಾಗಲು ಉಚಿತ ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಕೇವಲ ಇಷ್ಟು ಮಾತ್ರವಲ್ಲದೇ ರಾಮಲಿಂಗ ರಾಜು ಅವರು ವೈಕುಂಠದಿಂದ ಭೂಮಿಗೆ ಇಳಿದ ವೆಂಕಟೇಶ್ವರ ಸ್ವಾಮಿ ಮೊದಲು ತನ್ನ ಪಾದವನ್ನು ಇಟ್ಟ ಸ್ಥಳವಿದು ಎಂಬ ನಂಬಿಕೆ ಇರುವ ಶ್ರೀವರಿ ಪಾದಲು ಬಳಿ ಧ್ಯಾನ ಮಂದಿನ ನಿರ್ಮಾಣ ಮಾಡಲು 65 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ.
50 ಕೋಟಿ ರೂ.ವೆಚ್ಚದ ಪಾರ್ಕಿಂಗ್ ಸೌಲಭ್ಯ : ತಿರುಪತಿ ತಿರುಮಲ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗಲು ಸುಮಾರು 50 ಕೋಟಿ ವೆಚ್ಚದಲ್ಲಿ ಬಹು ಅಂತಸ್ತಿನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕೆ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ ಅನುಮೋದನೆ ಸಹ ನೀಡಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications