ಪಾಲೆಂ ಬಸ್ ದುರಂತಕ್ಕೆ ಟ್ರಾವೆಲ್ಸ್ ಸಂಸ್ಥೆ ಯೇ ಕಾರಣ
ಹೈದರಾಬಾದ್, ಜೂ.1: ಆಂಧ್ರ ಪ್ರದೇಶದ ಮೆಹಬೂಬ್ನಗರ ಜಿಲ್ಲೆಯ ಪಾಲೆಂ ಬಳಿ ಅ.30ರಂದು ಸಂಭವಿಸಿದ ವೋಲ್ವೋ ಬಸ್ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಅಲ್ಲಿನ ಸಿಐಡಿ ಪೊಲೀಸರು ವಿಚಾರಣೆ ಮುಗಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ವೋಲ್ವೊ ಸಂಸ್ಥೆ, ದಿವಾಕರ್ ರೋಡ್ ಲೈನ್ಸ್, ಜಬ್ಬಾರ್ ಟ್ರಾವೆಲ್ಸ್ ಒಂದಲ್ಲ ಒಂದು ರೀತಿ ಈ ದುರಂತಕ್ಕೆ ಕಾರಣರಾಗಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.
ಜಬ್ಬಾರ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಈ ಬಸ್(AP02-TA-0963) ಬೆಂಗಳೂರಿನಿಂದ ಹೈದರಾಬಾದ್ಗೆ ಪ್ರಯಾಣ ಮಾಡುವಾಗ ರಸ್ತೆ ಪಕ್ಕದಲ್ಲಿರುವ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿ 45 ಪ್ರಯಾಣಿಕರು ಸುಟ್ಟು ಕರಕಲಾಗಿದ್ದರು. ಮೃತಪಟ್ಟವರಲ್ಲಿ 19 ಜನ ಸಾಫ್ಟ್ ವೇರ್ ಉದ್ಯೋಗಿಗಳು, 2 ವರ್ಷದ ಮಗು, ಓರ್ವ ಗರ್ಭಿಣಿ ಪ್ರಯಾಣಿಕರು ಇದ್ದರು.

ಈಗ ವಿಚಾರಣೆ ಪೂರ್ಣ ಮಾಡಿ ಆರೋಪ ಪಟ್ಟಿ ಸಲ್ಲಿಸಿರುವ ಪೊಲೀಸರು ಕಂಡುಹಿಡಿದಿರುವ ಲೋಪದೋಷವೆಂದರೆ ಬಸ್ ಅನ್ನು ಸರಿಯಾಗಿ ವಿನ್ಯಾಸಗೊಳಿಸದೆ ಇರುವುದು ಹಾಗೂ ಚಾಲಕನ ಅಜಾಗರೂಕತೆಯಿದ ಅವಘಡ ಸಂಭವಿಸಿದೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ. [ಬಸ್ ದುರಂತದ ಚಿತ್ರಗಳು]
ಘಟನೆಗೆ ಸಂಬಂಧಿಸಿದಂತೆ ಆಂಧ್ರ ಪೊಲೀಸರು 400 ಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಮಾಜಿ ಸಚಿವ ಜೆಸಿ ದಿವಾಕರ್ ರೆಡ್ಡಿ ಅವರ ಪತ್ನಿ ಹೆಸರು ಚಾರ್ಜ್ ಶೀಟ್ ನಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಮಂದಿಯನ್ನು ಬಂಧಿಸಲಾಗಿದೆ. ಕಳೆದ ಮೇ 7 ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಹೆಚ್ಚುವತಿ ಡಿಜಿಪಿ(ಸಿಐಡಿ) ಟಿ ಕೃಷ್ಣ ಪ್ರಸಾದ್ ಹೇಳಿದ್ದಾರೆ.
ಡೀಸೆಲ್ ಟ್ಯಾಂಕ್ ಪಕ್ಕದಲ್ಲೇ ಬ್ಯಾಟರಿಯನ್ನು ಇಟ್ಟಿರುವುದರಿಂದ ಬಸ್ ಕಲ್ಲಿಗೆ ಅಪ್ಪಳಿಸಿದಾಗ ಬ್ಯಾಟರಿಯಿಂದ ಬೆಂಕಿ ಸಂಭವಿಸಿ ಆನಂತರ ಅದು ಡೀಸೆಲ್ ಟ್ಯಾಂಕಿಗೂ ಆವರಿಸಿಕೊಂಡು ಆಮೇಲೆ ಇಡೀ ಬಸ್ಅನ್ನೇ ಸುಟ್ಟು ಹಾಕಿದೆ ಎಂದು ಪೊಲೀಸರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
150 ಲೀಟರ್ ಹೆಚ್ಚುವರಿ ಇಂಧನವನ್ನು ಶೇಖರಿಸಿಡಲಾಗಿತ್ತು ಇದು ಬೆಂಕಿ ಪರಿಣಾಮ ಉಲ್ಬಣಗೊಳ್ಳಲು ಕಾರಣವಾಯಿತು. ವೋಲ್ವೋ ಬಸ್ ವಿನ್ಯಾಸದಲ್ಲಿ ಪಿವಿಸಿ ಹಾಗೂ ಇನ್ನಿತರ ವಸ್ತು ಬಳಸಿದ್ದ್ದು ಇದು ಕೂಡಾ ಬೆಂಕಿ ಆಕಸ್ಮಿಕ ತೀವ್ರತೆ ಹೆಚ್ಚಿಸಿದೆ.[ಪ್ರಾಥಮಿಕ ತನಿಖಾ ವರದಿ]
ಈ ಘಟನೆಗೆ ಸಂಬಂಧಿಸಿದಂತೆ ಜಬ್ಬಾರ್ ಟ್ರಾವೆಲ್ಸ್ ಮಾಲೀಕ ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ಅನ್ನು ಪಿವಿಸಿ ಪದಾರ್ಥಗಳಿಂದ ತಯಾರು ಮಾಡಿರುವುದರಿಂದ ಇದು ಬಲುಬೇಗ ಬೆಂಕಿ ಹೊತ್ತಿಕೊಳ್ಳಲಿದೆ. ಆದ್ದರಿಂದ ಬಸ್ನ ವಿನ್ಯಾಸದಲ್ಲಿ ಬದಲಾವಣೆ ಮಾಡಬೇಕು. ಅಲ್ಲದೆ, ತುರ್ತು ಪ್ರವೇಶದ್ವಾರವನ್ನು ಅಳವಡಿಸಿಕೊಳ್ಳದೆ ಇರುವುದು ಕೂಡ ಸಂಚಾರ ನಿಯಮದ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications