ಉಪವಾಸ ನಿರತ ಜಗನ್, ಬಲವಂತವಾಗಿ ಆಸ್ಪತ್ರೆಗೆ ಶಿಫ್ಟ್
ಹೈದರಾಬಾದ್, ಅ. 13: ತೆಲಂಗಾಣ ಮಾದರಿಯಲ್ಲೇ ಆಂಧ್ರಪ್ರದೇಶಕ್ಕೂ ಹೆಚ್ಚಿನ ಅನುದಾನ ನೀಡಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಬಲವಂತವಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.['ತೆಲಂಗಾಣದ ಬಗ್ಗೆ ಸೊಲ್ಲೆತ್ತಿದರೆ ಹೂತುಬಿಡ್ತೀನಿ']
ಸತತ ಆರು ದಿನಗಳಿಂದ ಉಪವಾಸ ನಿರತರಾಗಿದ್ದ ಜಗನ್ ಅವರು ಮಂಗಳವಾರ ಬೆಳ್ಳಂಬೆಳ್ಳಗೆ ಅಸ್ವಸ್ಥಗೊಂಡರು. ತಕ್ಷಣ ಅವರನ್ನು ಸಮೀಪದ ಸರ್ಕಾರಿ ಅಸ್ಪತ್ರೆಗೆ ಕರೆದೊಯ್ಯಲಾಯಿತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ವೈದ್ಯರ ಬಲವಂತದ ನಂತರ ದ್ರವಾಹಾರವನ್ನು ನೀಡಲಾಗುತ್ತಿದೆ.[ಜಗನ್ ರೆಡ್ಡಿ ವಿರುದ್ಧ 11ನೇ ಚಾರ್ಜ್ ಶೀಟ್ ಸಲ್ಲಿಕೆ]

ಜಗನ್ ಅವರ ತಾಯಿ ವಿಜಯಮ್ಮ, ಪತ್ನಿ ಭಾರತಿ ಹಾಗೂ ಕುಟುಂಬ ಸದಸ್ಯರು ಆಸ್ಪತ್ರೆಗೆ ಬಂದಿದ್ದು, ಮತ್ತೊಮ್ಮೆ ಆಸ್ಪತ್ರೆ ಬಳಿ ಜನರ ಕೋಲಾಹಲ ಶುರುವಾಗಿದೆ. ಹಿಂದೊಮ್ಮೆ ಇದೇ ರೀತಿ ಆಸ್ಪತ್ರೆ ಸೇರಿದ್ದ ಜಗನ್ ಅವರನ್ನು ಕಾಣಲು ಬಂದಿದ್ದ ನೂರಾರು ಮಂದಿ ಅಭಿಮಾನಿಗಳು ಭಾರಿ ಗದ್ದಲ ಉಂಟು ಮಾಡಿದ್ದರು. ['ರಾಜ್ಯ ಪಕ್ಷಿ' ಹಂಚಿಕೊಂಡ ಕರ್ನಾಟಕ, ತೆಲಂಗಾಣ]

ಕೇಂದ್ರ ಸರ್ಕಾರದಿಂದ ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಸಿಗುವ ತನಕ ನನ್ನ ಹೋರಾಟ ನಿಲ್ಲಿಸುವುದಿಲ್ಲ ಎಂದುವಿಪಕ್ಷ ನಾಯಕ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. ಅದರೆ, ಮತ್ತೊಮ್ಮೆ ಜಗನ್ ಅವರು ಉಪವಾಸ ನಿರತರಾದರೆ ಅವರ ಮೂತ್ರದಲ್ಲಿ ಕೆಟೋನೆಸ್ ಪ್ರಮಾಣ ಆಧಿಕವಾಗಲಿದೆ, ಕಿಡ್ನಿ ವೈಫಲ್ಯ ಎದುರಿಸಬೇಕಾಗುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. (ಐಎಎನ್ಎಸ್)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications