ಮಾರುತಿರಾವ್ ಡೆತ್ ನೋಟ್; ಅಮೃತಾಗೆ ಭಾವನಾತ್ಮಕ ಸಂದೇಶ!
ಹೈದರಾಬಾದ್, ಮಾರ್ಚ್ 09 : ಪ್ರಣಯ್ ಪೆರುಮಲ್ಲಾ ಮರ್ಯಾದಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾರುತಿರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ದಲಿತ ಯುವಕನನ್ನು ಪ್ರೀತಿಸಿ ವಿವಾಹವಾದ ಕಾರಣ ಅಳಿಯನ್ನು ಕೊಲ್ಲಿಸಿದ್ದ ಅವರು, ಕೊನೆಯಲ್ಲಿ ಮಗಳಿಗೆ ಭಾವನಾತ್ಮಕ ಸಂದೇಶ ಬರೆದಿಟ್ಟು ಹೋಗಿದ್ದಾರೆ.
ಹೈದರಾಬಾದ್ನ ಖೈರತಾಬಾದ್ ಆರ್ಯವೈಶ್ಯ ಭವನದಲ್ಲಿ ವಿಷ ಸೇವಿಸಿ ಶನಿವಾರ ಅಮೃತಾ ತಂದೆ ಮಾರುತಿರಾವ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾನುವಾರ ಬೆಳಗ್ಗೆ ಶವ ಪತ್ತೆಯಾಗಿತ್ತು. ಮಾರುತಿರಾವ್ ಶವ ಸಿಕ್ಕ ಕೊಠಡಿಯಲ್ಲಿ ಪೊಲೀಸರಿಗೆ ಡೆತ್ ನೋಟ್ ಸಹ ಸಿಕ್ಕಿದೆ.
ಮಾರುತಿರಾವ್ ಆತ್ಮಹತ್ಯೆ ಪ್ರಕರಣದ ಬಳಿಕ ಪ್ರತಿಕ್ರಿಯೆ ನೀಡಿದ್ದ ಪುತ್ರಿ ಅಮೃತಾ, "ಅವರೊಂದಿಗೆ ನಾನು ಯಾವುದೇ ಸಂಪರ್ಕ ಹೊಂದಿಲ್ಲ. ಆತ್ಮಹತ್ಯೆ ಮಾಡಿಕೊಂಡಿದ್ದರೂ ಮಾಡಿಕೊಂಡಿರಬಹುದು" ಎಂದು ಹೇಳಿಕೆ ನೀಡಿದ್ದರು.
ಆಂಧ್ರಪ್ರದೇಶದ ನಲ್ಗೋಂಡ ಜಿಲ್ಲೆಯ ಮಿರ್ಯಾಲಗೂಡು ನಿವಾಸಿ ಮಾರುತಿರಾವ್ ರಿಯಲ್ ಎಸ್ಟೇಟ್ ಉದ್ಯಮಿ. 2018ರ ಸೆಪ್ಟೆಂಬರ್ 15ರಂದು ಪುತ್ರಿ ಅಮೃತಾ ಪತಿ ಪ್ರಣಯ್ ಪೆರುಮಲ್ಲಾರನ್ನು ಸುಪಾರಿ ನೀಡಿ ಹತ್ಯೆ ಮಾಡಿಸಿದ್ದರು. ಈ ಪ್ರಕರಣದಲ್ಲಿ ಜೈಲು ಸೇರಿದ್ದ ಅವರು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದ್ದರು.

ಕೊಠಡಿಯಲ್ಲಿ ಡೆತ್ ನೋಟ್ ಪತ್ತೆ
ಮಾರುತಿರಾವ್ ಇದ್ದ ಕೊಠಡಿಯಲ್ಲಿ ಪೊಲೀಸರಿಗೆ ಚಿಕ್ಕ ಡೆತ್ ನೋಟ್ ಸಿಕ್ಕಿದೆ. "ಗಿರಿಜಾ ನನ್ನನ್ನು ಕ್ಷಮಿಸು, ಅಮೃತಾ ಅಮ್ಮನ ಬಳಿ ಹೋಗು" ಎಂದು ಬರೆಯಲಾಗಿದೆ. ಪೊಲೀಸರು ಇದು ಮಾರುತಿರಾವ್ ಅವರ ಕೈ ಬರಹವೇ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

ಅಮೃತಾ ತಾಯಿ ಜೊತೆಗಿಲ್ಲ
ಪ್ರಣಯ್ ಪೆರುಮಲ್ಲಾ ಹತ್ಯೆಯ ಬಳಿಕ ಪ್ರಣಯ್ ತಾಯಿ ಅಮೃತಾ ಮತ್ತು ಮೊಮ್ಮಗನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ತಾಯಿ ಮನೆ ಜೊತೆ ಯಾವುದೇ ಸಂಬಂಧವನ್ನು ಆಕೆ ಹೊಂದಿಲ್ಲ. ಆದ್ದರಿಂದ, ಡೆತ್ ನೋಟ್ನಲ್ಲಿ ಮಾರುತಿರಾವ್ ತಾಯಿ ಜೊತೆ ಇರುವಂತೆ ಮಗಳಿಗೆ ಸಂದೇಶ ನೀಡಿದ್ದಾರೆ.

ಹೈದರಾಬಾದ್ನಲ್ಲಿ ಕೆಲಸವಿದೆ
ಶನಿವಾರ ಪತ್ನಿ ಗಿರಿಜಾ ಬಳಿ ಹೈದರಾಬಾದ್ನಲ್ಲಿ ಸ್ವಲ್ಪ ಕೆಲಸವಿದೆ ಎಂದು ಹೇಳಿ ಮಾರುತಿರಾವ್ ನಲ್ಗೋಂಡ ಜಿಲ್ಲೆಯ ತಮ್ಮ ಮನೆಯಿಂದ ಕಾರಿನಲ್ಲಿ ಹೊರಟಿದ್ದರು. ಡ್ರೈವರ್ ರಾಜೇಶ್ ಮಾತ್ರ ಮಾರುತಿರಾವ್ ಜೊತೆಗಿದ್ದರು. ಏನು ಕೆಲಸವಿದೆ ಎಂದು ಪತ್ನಿಗಾಗಲಿ, ರಾಜೇಶ್ಗಾಗಲಿ ಮಾರುತಿರಾವ್ ಸ್ಪಷ್ಟವಾಗಿ ಹೇಳಿರಲಿಲ್ಲ.

ಹೈದರಾಬಾದ್ಗೆ ಬಂದರು
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಖೈರತಾಬಾದ್ನಲ್ಲಿರುವ ಆರ್ಯವೈಶ್ಯ ಭವನಕ್ಕೆ ಮಾರುತಿರಾವ್ ಆಗಮಿಸಿ ಕೊಠಡಿ ಪಡೆದರು. ಡ್ರೈವರ್ ರಾಜೇಶ್ ಕಾರಿನಲ್ಲಿಯೇ ಮಲಗಿದ್ದರು. ರಾತ್ರಿ ಇಡ್ಲಿ, ಉದ್ದಿನ ವಡೆಯನ್ನು ತರಿಸಿಕೊಂಡು ತಿಂದಿದ್ದರು. ಬಳಿಕ ಡ್ರೈವರ್ ಅವರ ಜೊತೆ ಮಾತುಕತೆ ನಡೆಸಿಲ್ಲ.

ಸಿಬ್ಬಂದಿಯಿಂದ ಕರೆ
ಆರ್ಯವೈಶ್ಯ ಭವನದ ಸಿಬ್ಬಂದಿ ಭಾನುವಾರ ಕೊಠಡಿ ಸ್ವಚ್ಛ ಮಾಡಲು ಬೆಲ್ ಮಾಡಿದ್ದರು. ಆದರೆ, ಎಷ್ಟು ಕರೆದರೂ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಕಾರಿನಲ್ಲಿದ್ದ ಡ್ರೈವರ್ ರಾಜೇಶ್ಗೆ ಮಾಹಿತಿ ನೀಡಿದ್ದರು. ಆಗ ಎಲ್ಲರೂ ಆಗಮಿಸಿ ಕೊಠಡಿ ಬಾಗಿಲು ಒಡೆದಾಗ ಹಾಸಿಗೆ ಮೇಲೆ ಮಾರುತಿರಾವ್ ಶವ ಪತ್ತೆಯಾಗಿತ್ತು. ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications