ಮೋದಿ ನಿಮ್ಮ ಡಿಗ್ರಿ ಸರ್ಟಿಫಿಕೇಟ್ ಮೊದಲು ತೋರ್ಸಿ: ಪ್ರಕಾಶ್ ರಾಜ್
Recommended Video
ಹೈದರಾಬಾದ್, ಜನವರಿ 21: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳಿದ್ದಾರೆ. #justasking ಎಂಬ ಹ್ಯಾಶ್ ಟ್ಯಾಗ್ ಮೂಲಕ ಮೋದಿ ಅವರಿಗೆ ಚುನಾವಣೆ ಸಂದರ್ಭದಲ್ಲಿ ಪ್ರಶ್ನೆಗಳನ್ನು ಕೇಳಿದ್ದ ಪ್ರಕಾಶ್ ರಾಜ್ ಗೆ ಮೋದಿ ಹಿಂಬಾಲಕರು ಪ್ರತ್ಯುತ್ತರ ನೀಡುತ್ತಾ ಬಂದಿದ್ದಾರೆ. ಈಗ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಸಿದ ಪ್ರಧಾನಿ ಮೋದಿ ಬಗ್ಗೆ ಪ್ರಕಾಶ್ ಅವರು ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರದಂದು ಪರೀಕ್ಷೆ ಕುರಿತಂತೆ ದೇಶದ ವಿವಿಧ ಭಾಗದ ವಿದ್ಯಾರ್ಥಿ/ನಿಯರ ಜೊತೆ ಚರ್ಚೆ ನಡೆಸಿದ್ದರು. ಪರೀಕ್ಷಾಒತ್ತಡದಿಂದ ಹೇಗೆ ಹೊರಬರಬಹುದು ಎಂಬುದಕ್ಕೆ ಸಲಹೆ, ಸೂಚನೆ ನೀಡಿದರು. ಮಕ್ಕಳ, ಪೋಷಕರ ಮೆಚ್ಚುಗೆ ಪಡೆದಿರ್ವ ಈ ಪರೀಕ್ಷೆ ಮೇಲಿನ ಚರ್ಚೆ ಯಾಕೋ ಪ್ರಕಾಶ್ ರಾಜ್ ಗೆ ಇಷ್ಟವಾಗಿಲ್ಲ.
#ParikshaPeCharcha2020 karne se pehle degree ka kagaz dikhao...#justasking
— Prakash Raj (@prakashraaj) January 20, 2020
ಮೋದಿ ನಡೆಸಿಕೊಟ್ಟ ಪರೀಕ್ಷೆ ಬಗ್ಗೆ ಚರ್ಚೆ ಬಗ್ಗೆಯೂ ತಮ್ಮ ಪ್ರತಿಕ್ರಿಯೆಯನ್ನು ಟ್ವೀಟ್ ಮಾಡಿ ತಿಳಿಸಿರುವ ಪ್ರಕಾಶ್ ರಾಜ್, ಪರೀಕ್ಷೆ ಬಗ್ಗೆ ಸಲಹೆ ನೀಡುವ ಮೊದಲು ನಿಮ್ಮ ಪದವಿ ಪ್ರಮಾಣ ಪತ್ರ ತೋರಿಸಿ ಎಂದಿದ್ದಾರೆ.

ಪದವಿ ಪಡೆಯದವರೆಲ್ಲ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ನಾನು ಪೊಲಿಟಿಕಲ್ ಸೈನ್ ವಿಷಯದಲ್ಲಿ ಪದವಿ ಪಡೆದಿದ್ದೇನೆ. ಭಾರತದ ಜನತೆ ಪೊಲಿಟಕಲ್ ಸೈನ್ಸ್ ಪಾಠವನ್ನು ಮಾಡಲಿದ್ದಾರೆ ಎಂದು ಪ್ರಕಾಶ್ ಹೇಳಿದ್ದಾರೆ.
ಹೈದರಾಬಾದಿನಲ್ಲಿ ಯಂಗ್ ಇಂಡಿಯಾ ರಾಷ್ಟ್ರೀಯ ಸಮನ್ವಯ ಸಮಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟ ಪ್ರಕಾಶ್ ಅವರು ಸಿಎಎ ಪ್ರತಿಭಟನೆ ಬಗ್ಗೆ ಕೂಡಾ ಪ್ರತಿಕ್ರಿಯಿಸಿದರು.
ಸಿಎಎ, ಎನ್ ಆರ್ ಸಿ ಹಾಗೂ ಎನ್ ಪಿಆರ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು ಸುಶಿಕ್ಷಿತರು ಹಾಗೂ ಸಂವಿಧಾನದ ತಿದ್ದುಪಡಿ ಆಗದಂತೆ ತಡೆಯಬಲ್ಲವರು ಎಂದಿದ್ದಾರೆ.
''ಪ್ರಧಾನಿಯವರೇ ನೀವೆ ಹೇಳಿದಂತೆ ನೀವು ಜನ ಸೇವಕರು, ನಿಮ್ಮ ಕರ್ತವ್ಯವನ್ನು ನಿಭಾಯಿಸಿ, ನೋಂದಣಿ ವಿಷಯಕ್ಕೆ ಬಂದರೆ, ನಿರುದ್ಯೋಗಿಗಳು, ಅನಕ್ಷರಸ್ಥರ ನೋಂದಣಿ ಮೊದಲು ಮಾಡಿ ಎಂದು ಪ್ರಕಾಶ್ ಆಗ್ರಹಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications