ಆಂಧ್ರ: ರೈಲು ನಿಲ್ದಾಣದಲ್ಲಿ ಕುಟುಂಬದ ಎದುರೇ ಗರ್ಭಿಣಿ ಮಹಿಳೆಯ ಸಾಮೂಹಿಕ ಅತ್ಯಾಚಾರ
ಹೈದರಾಬಾದ್ ಮೇ 2: ಪತಿ ಮತ್ತು ಮೂವರು ಮಕ್ಕಳೊಂದಿಗೆ ರಾತ್ರಿ ರೈಲು ಹತ್ತಲು ಕಾಯುತ್ತಿದ್ದ ಗರ್ಭಿಣಿ ಮಹಿಳೆಯನ್ನು ಮೂವರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಮಹಿಳೆಯ ಪತಿ ತೀವ್ರವಾಗಿ ಥಳಿತಕ್ಕೊಳಗಾಗಿದ್ದಾರೆ. ಈ ವೇಳೆ ಅವರು ರೈಲ್ವೇ ಪೊಲೀಸರ ಸಹಾಯ ಪಡೆಯಲು ಪ್ರಯತ್ನಿಸಿದರು. ಆದರೆ ಒಬ್ಬರು ಅವರಿಗೆ ಕಾಣಸಿಗಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದವರೂ ಸೇರಿ ಮೂವರೂ ಆರೋಪಿಗಳನ್ನು ಬಂಧಿಸಲಾಗಿದೆ.

ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಕುಟುಂಬವು ಕೆಲಸ ಹುಡುಕಿಕೊಂಡು ಗುಂಟೂರಿನಿಂದ ಕೃಷ್ಣಾ ಜಿಲ್ಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಇವರು ಪ್ರಕಾಶಂ ಜಿಲ್ಲೆಯವರು. ಶನಿವಾರ ರಾತ್ರಿ ಸಂತ್ರಸ್ತೆ ಹಾಗೂ ಆಕೆಯ ಪತಿ ಜೊತೆಗೆ ಮೂವರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಬೆಂಚ್ ಮೇಲೆ ಮಲಗಿದ್ದರು. ಮಧ್ಯರಾತ್ರಿ ಅವರನ್ನು ಮೂವರು ಪುರುಷರು ಎಚ್ಚರಗೊಳಿಸಿದ್ದಾರೆ. ಕುಡಿದ ಅಮಲಿನಲ್ಲಿದ್ದ ಕಾಮುಕರು ವಿನಾಕಾರಣ ಪತಿ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಪತ್ನಿ ಮಧ್ಯಪ್ರವೇಶಿಸಿದಾಗ ಅವರು ಅವಳನ್ನು ಎಳೆದೊಯ್ದಿದ್ದಾರೆ. ಪತಿ ತಪ್ಪಿಸಿಕೊಂಡು ರೈಲ್ವೇ ಪೊಲೀಸರ ಸಹಾಯ ಪಡೆಯಲು ಪ್ರಯತ್ನಿಸಿದರೂ ನಿಲ್ದಾಣದಲ್ಲಿ ಯಾವುದೇ ಅಧಿಕಾರಿ ಸಿಗಲಿಲ್ಲ. ಬಳಿಕ ಮಹಿಳೆ ಸಮೀಪದ ಪೊದೆಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಮರಾವತಿಯಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿರುವ ರೆಪಲ್ಲೆಯಲ್ಲಿನ ಸ್ಟೇಷನ್ನಿಂದ ಮದ್ಯಪಾನ ಮಾಡಿದ ಪುರುಷರು ಗರ್ಭಿಣಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ದಿಶಾ ಯೋಜನೆಯಡಿ ಸರ್ಕಾರವು ತ್ವರಿತ ತನಿಖೆ, ವಿಚಾರಣೆ ಮತ್ತು ಶಿಕ್ಷೆಯನ್ನು ಪ್ರದರ್ಶಿಸುತ್ತಿರುವ ಸಮಯದಲ್ಲಿ ಈ ಆಘಾತಕಾರಿ ಘಟನೆ ಬಂದಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications