ಖಾಸಗಿ ಲ್ಯಾಬ್ ಗಳಲ್ಲಿ ಕೊವಿಡ್-19 ಪರೀಕ್ಷಿಸುವಂತಿಲ್ಲ: ಆರೋಗ್ಯ ಸಚಿವ
ಹೈದ್ರಾಬಾದ್, ಜೂನ್.24: ದೇಶವನ್ನು ಕೊರೊನಾವೈರಸ್ ಎಂಬ ಮಹಾಮಾರಿ ಆತಂಕದ ಕೂಪಕ್ಕೆ ತಳ್ಳಿದೆ. ಇಂಥ ಸಂದರ್ಭದಲ್ಲಿ ಖಾಸಗಿ ವೈದ್ಯಕೀಯ ಪ್ರಯೋಗಾಲಯಗಳು ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಕ್ಕಾಗಿ ಕೊವಿಡ್-19 ತಪಾಸಣೆ ನಡೆಸುವಂತಿಲ್ಲ ಎಂದು ತೆಲಂಗಾಣ ಆರೋಗ್ಯ ಸಚಿವ ಇಟೇಲಾ ರಾಜೇಂದರ್ ತಿಳಿಸಿದ್ದಾರೆ.
ಆರೋಗ್ಯ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ಇಟೇಲಾ ರಾಜೇಂದ್ರರ್ ರಾಜ್ಯವು ಎದುರಿಸುತ್ತಿರುವ ಸಂದಿಗ್ಘ ಸ್ಥಿತಿಯಲ್ಲಿ ಲಾಭವನ್ನು ಪಡೆಯುವ ಬಗ್ಗೆ ಆಲೋಚಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕಾಗಿ ಕೊರೊನಾವೈರಸ್ ಸೋಂಕು ತಪಾಸಣೆ ನಡೆಸುವ ಹಾಗಿಲ್ಲ ಎಂದರು.
ಸಾಮಾನ್ಯ ವೈದ್ಯಕೀಯ ತಪಾಸಣೆಗೂ, ಕೊರೊನಾವೈರಸ್ ವೈದ್ಯಕೀಯ ತಪಾಸಣೆಗೂ ಅಜಗಜಾಂತರ ವ್ಯತ್ಯಾಸವಿದೆ. ಯಾವುದೇ ವ್ಯಕ್ತಿಯು ಕೊರೊನಾವೈರಸ್ ತಪಾಸಣೆಗೆ ಎಂದು ನಿಮ್ಮಲ್ಲಿ ಬಂದರೆ ಅಧಿಕೃತ ವರದಿ ಬರುವವರೆಗೂ ಅಂಥವರನ್ನು ಐಸೋಲೇಷನ್ ನಲ್ಲಿ ಇರಿಸಬೇಕು ಎಂದು ಸಚಿವ ರಾಜೇಂದರ್ ಸೂಚನೆ ನೀಡಿದ್ದಾರೆ.

ಪ್ರಯೋಗಾಲಯದ ಸಿಬ್ಬಂದಿ ಪಿಪಿಇ ಕಿಟ್ ಬಳಸಿ:
ರಾಜ್ಯದಲ್ಲಿ ಕೊರೊನಾವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಂದು ಕೊವಿಡ್-19 ಪ್ರಯೋಗಾಲಯಗಳಲ್ಲೂ ಸಿಬ್ಬಂದಿಯು ಕಡ್ಡಾಯವಾಗಿ ಸ್ವಯಂ ಸುರಕ್ಷತಾ ಕಿಟ್ ಗಳನ್ನು ಧರಿಸುವುದು ಉತ್ತಮವಾಗಿದೆ. ಇಲ್ಲದೇ ಹೋದಲ್ಲಿ ಸೋಂಕಿತರಿಂದ ಲ್ಯಾಬ್ ಸಿಬ್ಬಂದಿಗೆ ಮಹಾಮಾರಿ ಅಂಟಿಕೊಳ್ಳುವ ಅಪಾಯವಿರುತ್ತದೆ ಎಂದು ಆರೋಗ್ಯ ಸಚಿವ ಇಟೇಲಾ ರಾಜೇಂದರ್ ಎಚ್ಚರಿಕೆ ನೀಡಿದ್ದಾರೆ.
ತೆಲಂಗಾಣದಲ್ಲಿ ಮಂಗಳವಾರದ ಅಂಕಿ-ಅಂಶಗಳ ಪ್ರಕಾರ ಒಂದೇ ದಿನ 879 ಮಂದಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 9553ಕ್ಕೆ ಏರಿಕೆಯಾಗಿದೆ. ಈ ಪೈಕಿ 4224 ಸೋಂಕಿತರು ಗುಣಮುಖರಾಗಿದ್ದರೆ, ಬಾಕಿ 5109 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ ಮಹಾಮಾರಿಗೆ 220 ಮಂದಿ ಪ್ರಾಣ ಬಿಟ್ಟಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications