ಮಗಳಿಗೆ ಪೊಲೀಸ್ ಅಪ್ಪನ ಹೆಮ್ಮೆಯ ಸೆಲ್ಯೂಟ್
ಹೈದರಾಬಾದ್, ಸೆಪ್ಟೆಂಬರ್ 3: ಪೊಲೀಸ್ ಇಲಾಖೆಯಲ್ಲಿ ಅಪ್ಪನಿಗೆ ಮೂರು ದಶಕಕ್ಕೂ ಹೆಚ್ಚಿನ ಸೇವೆ ಸಲ್ಲಿಸಿದ ಅನುಭವ. ಅಪ್ಪನ ಹಾದಿಯನ್ನೇ ತುಳಿದ ಮಗಳು ಪೊಲೀಸ್ ಇಲಾಖೆಗೆ ಸೇರಿ ನಾಲ್ಕು ವರ್ಷಗಳಾಗಿವೆಯಷ್ಟೇ. ಭಾನುವಾರ ಕರ್ತವ್ಯದಲ್ಲಿದ್ದ ಅಪ್ಪ-ಮಗಳು ಮುಖಾಮುಖಿಯಾದರು. ಅರೆ ಕ್ಷಣವೂ ಯೋಚಿಸದೆ ಅಪ್ಪ ತನ್ನೆದುರಿಗೆ ನಿಂತ ಮಗಳಿಗೆ ಗೌರವದಿಂದ ಸೆಲ್ಯೂಟ್ ಹೊಡೆದರು.
ತೆಲಂಗಾಣದ ಪೊಲೀಸ್ ಉಪ ಆಯುಕ್ತ ಎ.ಆರ್. ಉಮಾಮಹೇಶ್ವರ ಶರ್ಮಾ ಅವರಿಗೆ ತಮ್ಮ ಮೇಲಧಿಕಾರಿಯಾಗಿರುವ ಜಗ್ತಿಯಲ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿಂಧು ಶರ್ಮಾ ಅವರಿಗೆ ಸೆಲ್ಯೂಟ್ ಹೊಡೆಯುವುದು ಹೆಮ್ಮೆಯ ಸಂಗತಿ.
ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಹೈದರಾಬಾದ್ನ ಹೊರವಲಯದ ಕೊಂಗರ ಕಾಲನ್ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆ ವೇಳೆ ಪೊಲೀಸ್ ಅಧಿಕಾರಿಗಳಾಗಿರುವ ಅಪ್ಪ-ಮಗಳು ಮುಖಾಮುಖಿಯಾದಾಗ ನಡೆದ ಘಟನೆಯಿದು.

ಮುಂದಿನ ವರ್ಷ ನಿವೃತ್ತರಾಗಲಿರುವ ಉಮಾಮಹೇಶ್ವರ ಶರ್ಮಾ, ರಾಚಕೊಂಡ ಪೊಲೀಸ್ ವ್ಯಾಪ್ತಿಯಲ್ಲಿನ ಮಲ್ಕಾಜ್ಗಿರಿ ಪ್ರದೇಶದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಬ್ ಇನ್ಸ್ಪೆಕ್ಟರ್ ಆಗಿ ವೃತ್ತಿ ಬದುಕು ಆರಂಭಿಸಿದ್ದ ಅವರು, ಇತ್ತೀಚೆಗಷ್ಟೇ ಐಪಿಎಸ್ ಶ್ರೇಣಿ ಪಡೆದುಕೊಂಡಿದ್ದರು. ಅವರ ಮಗಳು ಸಿಂಧು ಶರ್ಮಾ, 2014ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ನಮ್ಮ ಕರ್ತವ್ಯದ ನಡುವೆ ಮೊದಲ ಬಾರಿಗೆ ಪರಸ್ಪರ ಎದುರಾಗಿದ್ದೇವೆ. ಆಕೆಯೊಂದಿಗೆ ಕೆಲಸ ಮಾಡುತ್ತಿರುವುದು ನನ್ನ ಅದೃಷ್ಟ ಎಂದು ಶರ್ಮಾ ಹೇಳಿದ್ದಾರೆ.
'ಆಕೆ ನನ್ನ ಹಿರಿಯ ಅಧಿಕಾರಿ. ಆಕೆಯನ್ನು ನೋಡಿದಾಗ ಸೆಲ್ಯೂಟ್ ಹೊಡೆಯುತ್ತೇನೆ. ನಾವು ನಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತೇವೆ ಮತ್ತು ಅದರ ಬಗ್ಗೆ ಚರ್ಚಿಸುವುದಿಲ್ಲ. ಆದರೆ, ಮನೆಯಲ್ಲಿ ಅಪ್ಪ-ಮಗಳಂತೆ ಇರುತ್ತೇವೆ' ಎಂದಿದ್ದಾರೆ.
ಸಭೆಯಲ್ಲಿ ಮಹಿಳೆಯರ ಭದ್ರತೆಯ ಜವಾಬ್ದಾರಿ ನಿರ್ವಹಿಸುತ್ತಿದ್ದ ಸಿಂಧು, ಒಟ್ಟಿಗೆ ಕೆಲಸ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ನನಗೆ ತುಂಬಾ ಖುಷಿಯಾಗುತ್ತಿದೆ ಎಂದು ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications