ಗಾಂಧಿಗಳು ಕ್ಷಮೆ ಕೋರಬೇಕು: ಕಾಂಗ್ರೆಸ್ನ ಮಾಜಿ ಪ್ರಧಾನಿ ಮೊಮ್ಮಗ ಆಗ್ರಹ
ಹೈದರಾಬಾದ್, ಜೂನ್ 28: ನೆಹರೂ-ಗಾಂಧಿ ಕುಟುಂಬವು ಮಾಜಿ ಪ್ರಧಾನಿ ದಿವಂಗತ ಪಿವಿ ನರಸಿಂಹ ರಾವ್ ಅವರನ್ನು ಮೂಲೆಗುಂಪು ಮಾಡಿತ್ತು ಎಂದು ಅವರ ಮೊಮ್ಮಗ ಎನ್ವಿ ಸುಭಾಷ್ ಆರೋಪಿಸಿದ್ದಾರೆ.
ನರಸಿಂಹರಾವ್ ಅವರ ಜನ್ಮದಿನವಾದ ಶುಕ್ರವಾರ ಮಾತನಾಡಿದ ಅವರು, ಮಾಜಿ ಪ್ರಧಾನಿಯನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಸ್ತುತ ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಸುಭಾಷ್, ಶುಕ್ರವಾರದ ಮಾಜಿ ಪ್ರಧಾನಿಯ ಜನ್ಮದಿನಾಚರಣೆಯಂದು ಅವರಿಗೆ ಯಾವುದೇ ಗೌರವ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

1996ರಲ್ಲಿ ಕಾಂಗ್ರೆಸ್ ಮುಗ್ಗರಿಸಿದ ಬಳಿಕ ನರಸಿಂಹ ರಾವ್ ಅವರನ್ನು ಅನೇಕ ಕಾರಣಗಳಿಂದ ಕಡೆಗಣಿಸಲಾಯಿತು. ಇವು ಅವರ ಸರ್ಕಾರದ ನೀತಿಗಳಿಗೆ ಸಂಬಂಧಿಸಿದ್ದವಾಗಿರಲಿಲ್ಲ. ಪ್ರಧಾನಿ ಹುದ್ದೆಯಲ್ಲಿ ಗಾಂಧಿ-ನೆಹರೂ ಕುಟುಂಬದ ಹೊರತಾಗಿ ಬೇರೆ ಯಾರಾದರೂ ಮುಂದುವರಿದರೆ ತಾವು ಹಿನ್ನೆಲೆ ಸರಿದುಬಿಡುತ್ತೇವೆ ಎಂದು ಭಾವಿಸಿದರು. ಅದಕ್ಕಾಗಿ ಅವರನ್ನು ಮೂಲೆಗುಂಪು ಮಾಡಿದರು ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲ ವೈಫಲ್ಯಗಳನ್ನು ನರಸಿಂಹರಾವ್ ಅವರ ತಲೆಗೆ ಕಟ್ಟಲಾಯಿತು. ಅವರ ಕೊಡುಗೆಗಳ ಶ್ರೇಯಸ್ಸನ್ನು ಅವರಿಗೆ ನೀಡಲಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕ್ಷಮೆ ಕೋರಬೇಕೆಂದು ಹಾಗೂ ಅವರಿಗೆ ಗೌರವ ಸಲ್ಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಮತ್ತು ದೇಶಕ್ಕೆ ಅವರ ಕೊಡುಗೆಯನ್ನು ಜಗತ್ತಿನ ಎಲ್ಲರೂ ಶ್ಲಾಘಿಸುತ್ತಾರೆ. ರಾಜೀವ್ ಗಾಂಧಿ ಅವರ ಹತ್ಯೆಯ ಬಳಿಕ 1991ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಹಣಕಾಸು ಸಚಿವ ಮನಮೋಹನ್ ಸಿಂಗ್ಅವರ ನೆರವಿನೊಂದಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದರು ಎಂದು ಹೇಳಿದ್ದಾರೆ.
ತಮ್ಮ ತಾತನ 98ನೇ ಜನ್ಮದಿನಾಚರಣೆಯಂದು ಕೂಡ ತೆಲಂಗಾಣ ಕಾಂಗ್ರೆಸ್ ಮುಖಂಡರು ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸುಭಾಷ್ ಅವರು 2014ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಅವರು ತೆಲಂಗಾಣ ಬಿಜೆಪಿ ಘಟಕದ ವಕ್ತಾರರಾಗಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications