ಪಿ.ವಿ.ಸಿಂಧುಗೆ ಹೈದರಾಬಾದ್ ನಲ್ಲಿ ಅದ್ದೂರಿ ಸ್ವಾಗತ
ಹೈದರಾಬಾದ್, ಆಗಸ್ಟ್ 22: ರಿಯೋ ಒಲಿಂಪಿಕ್ಸ್ ನಿಂದ ಹೈದರಾಬಾದ್ ಗೆ ಹಿಂತಿರುಗಿದ ಬೆಳ್ಳಿ ಪದಕ ವಿಜೇತೆ, ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧುಗೆ ಸೋಮವಾರ ಅದ್ದೂರಿ ಸ್ವಾಗತ ಕೋರಲಾಯಿತು. ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಸಿಂಧು ಹೊಸ ಇತಿಹಾಸ ಬರೆದಿದ್ದಾರೆ. ಆಂಧ್ರ, ತೆಲಂಗಣಾದ ಪ್ರಮುಖರು ಸಿಂಧುವನ್ನು ಬರಮಾಡಿಕೊಂಡರು.

ತೆರೆದ ಬಸ್ ನಲ್ಲಿ ಮೆರವಣಿಗೆ ಮೂಲಕ ಸಿಂಧು ಹಾಗೂ ತರಬೇತುದಾರ ಪುಲ್ಲೇಲ ಗೋಪಿಚಂದ್ ಅವರನ್ನು ಕರೆತರಲಾಯಿತು. ಭಾರಿ ಭದ್ರತೆಯಿದ್ದ ತೆರೆದ ಬಸ್ ನಲ್ಲಿ ಆಗಮಿಸಿದ ಸಿಂಧು, ಅಭಿಮಾನಿಗಳ ಕಡೆಗೆ ಕೈ ಬೀಸಿ ಸಂತಸ ವ್ಯಕ್ತಪಡಿಸಿದರು. ಹೈದರಾಬಾದ್ ನಲ್ಲಿರುವ ಗಚ್ಚಿಬೋಳಿ ಮೈದಾನದಲ್ಲಿ ಸಿಂಧು ಹಾಗೂ ಗೋಪಿಚಂದ್ ಗೆ ಸರ್ಕಾರದ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.[ಭಾರತದ ಬೆಳ್ಳಿ ಸಿಂಧುಗೆ ಕಡೆಗೆ ಹರಿದು ಬಂದ ಗಿಫ್ಟ್ ಗಳ ರಾಶಿ]
ಆಂಧ್ರದ ಉಪಮುಖ್ಯಮಂತ್ರಿ ಚಿನ್ನರಾಜಪ್ಪ, ಸಚಿವ ದೇವಿನೇನಿ ಉಮಾಮಹೇಶ್ವರ ರಾವ್ ಮತ್ತಿತರ ಸಚಿವರು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ಒಲಿಂಪಿಕ್ಸ್ ನಲ್ಲಿ ದೇಶಕ್ಕೆ ಬೆಳ್ಳಿ ಹಾಗೂ ಕಂಚಿನ ಪದಕ ತಂದ ಹೆಣ್ಣುಮಕ್ಕಳ ಬಗ್ಗೆ ಹೆಮ್ಮೆ ವ್ಯಕ್ತವಾಗುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications