ಏಳು ದಿನ ಸಿಐಡಿ ಕಸ್ಟಡಿಗೆ ರಾಘವೇಂದ್ರ ತೀರ್ಥ
ಚಿತ್ತೂರು ಮಾರ್ಚ್ 11: ಕಾಶೀಮಠದ ಉಚ್ಛಾಟಿತ ಸ್ವಾಮಿ ರಾಘವೇಂದ್ರ ತೀರ್ಥ ಆಲಿಯಾಸ್ ಶಿವಾನಂದ ಪೈಗೆ ಆಂಧ್ರಪ್ರದೇಶದ ಚಿತ್ತೂರಿನ ನಾಲ್ಕನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 7 ದಿನಗಳ ಸಿಐಡಿ ಪೊಲೀಸ್ ಕಸ್ಟಡಿ ವಿಧಿಸಿದೆ. ಶಿವಾನಂದ ಪೈಯನ್ನು ಇದೇ ಮಾರ್ಚ್ 5 ರಂದು ಹೊಸೂರು ಚೆಕ್ ಪೋಸ್ಟಿನಲ್ಲಿ ಬಂಧಿಸಲಾಗಿತ್ತು.
ಕಾಶೀಮಠಕ್ಕೆ ಸಂಬಂಧಪಟ್ಟ ವಸ್ತುಗಳು ಮತ್ತು ಆಭರಣಗಳನ್ನು ಆರೋಪಿ ಇನ್ನೂ ಕೂಡ ತನ್ನ ಸ್ವಾಧೀನದಲ್ಲಿ ಇಟ್ಟುಕೊಂಡಿರುವುದರಿಂದ ಅದನ್ನು ಹಸ್ತಾಂತರಿಸುವಂತೆ ಪ್ರಾಸಿಕ್ಯೂಶನ್ ತನ್ನ ವಾದದಲ್ಲಿ ಹೇಳಿತ್ತು. ಸಿಐಡಿ ವಿಚಾರಣೆಯ ಸಂದರ್ಭದಲ್ಲಿ ಆರೋಪಿ ತನಗೆ ತಲೆಮರೆಸಿಕೊಳ್ಳಲು ನೆರವಾದವರ ಹೆಸರುಗಳನ್ನು ಹೇಳಿರುವುದರಿಂದ ಮತ್ತು ಆತ ಕಾಶೀಮಠದ ಹಣ ಮತ್ತು ಆಸ್ತಿಯನ್ನು ದುರ್ಬಳಕೆ ಮಾಡಿರುವುದನ್ನು ಆತನೇ ವಿಚಾರಣೆಯಲ್ಲಿ ಒಪ್ಪಿಕೊಂಡಿರುವುದರಿಂದ ಅದರ ಬಗ್ಗೆ ಇನ್ನೂ ಮಾಹಿತಿ ಕಲೆ ಹಾಕುವ ಅಗತ್ಯ ಇದೆ ಎಂದು ಸಿಐಡಿ ವಕೀಲರು ವಾದಿಸಿದ್ದರು.

ನಾಲ್ಕು ವರ್ಷಗಳ ಹಿಂದೆ ಆಂಧ್ರಪ್ರದೇಶದ ಕಡಪದ ಇಂದಿರಾನಗರದಲ್ಲಿ ರಾಘವೇಂದ್ರ ತೀರ್ಥ ಆಲಿಯಾಸ್ ಶಿವಾನಂದ ಪೈಯನ್ನು ಪೊಲೀಸರು ಬಂಧಿಸಿದ್ದರು. ಆ ಸಂದರ್ಭದಲ್ಲಿ ಈತನಿಂದ ಶ್ರೀ ಸಂಸ್ಥಾನಕ್ಕೆ ಸೇರಿದ ದೇವರ ವಿಗ್ರಹಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಜಾಮೀನು ಪಡೆದ ಆರೋಪಿ ಕಾಶೀಮಠಕ್ಕೆ ಒಳಪಟ್ಟ ಕೋಟ್ಯಂತರ ಬೆಲೆಬಾಳುವ ಚಿನ್ನಾಭರಣ, ವಜ್ರವೈಢೂರ್ಯ ಇನ್ನಿತರ ಅಮೂಲ್ಯ ವಸ್ತುಗಳೊಂದಿಗೆ ಪರಾರಿಯಾಗಿದ್ದ. ಈ ಬಗ್ಗೆ ಕೇರಳ ಮತ್ತು ಬೇರೆ ರಾಜ್ಯಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.
ಆತನಿಗೆ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ಅನೇಕ ಬಾರಿ ಸಮನ್ಸ್ ಕಳುಹಿಸಿದರೂ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಪೊಲೀಸರ ಬಂಧನದಿಂದಲೂ ತಪ್ಪಿಸಿಕೊಳ್ಳುತ್ತಾ ಅವರಿಗೂ ಚಳ್ಳೆಹಣ್ಣು ತಿನ್ನಿಸುತ್ತಿದ್ದ. ಮೊನ್ನೆ ಮಾರ್ಚ್ 5 ರಂದು ಟೊಮೆಟೊ ವ್ಯಾಪಾರಿ ಸೆಲ್ವಿ ಎನ್ನುವವರ ಮನೆಯಲ್ಲಿ ರಹಸ್ಯ ಭೇಟಿ ಮುಗಿಸಿ ಬರುವಾಗ ಹೊಸೂರು ಚೆಕ್ ಪೋಸ್ಟಿನ ಬಳಿ ಈತನನ್ನು ಹೈದ್ರಾಬಾದಿನ ಸಿಐಡಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈತನಿಂದ ಹಣ, 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications