ಹೈದರಾಬಾದ್ ಅಪೋಲೋ ಆಸ್ಪತ್ರೆಯಿಂದ ರಜನಿಕಾಂತ್ ಡಿಸ್ಚಾರ್ಜ್
ಹೈದರಾಬಾದ್, ಡಿ.27: ಜ್ಯುಬಿಲಿ ಹಿಲ್ಸ್ ಅಪೊಲೊ ಆಸ್ಪತ್ರೆಯಿಂದ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಭಾನುವಾರ ಸಂಜೆ ಡಿಸ್ಚಾರ್ಜ್ ಮಾಡಲಾಗಿದೆ. ಆದರೆ, ಒಂದು ವಾರಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ರಜನಿಕಾಂತ್ ಆರೋಗ್ಯ ಸ್ಥಿತಿಯ ಬಗ್ಗೆ ಗಾಬರಿಗೊಂಡಿದ್ದ ಅಭಿಮಾನಿಗಳಿಗೆ ಅಪೊಲೊ ಆಸ್ಪತ್ರೆಯಿಂದ ಶುಭ ಸುದ್ದಿಯನ್ನು ಬೆಳಗ್ಗೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳು ನೀಡಿದ್ದರು. ರಜನಿಕಾಂತ್ ಅವರಿಗೆ ಉಂಟಾಗಿದ್ದ ಅಧಿಕ ರಕ್ತದೊತ್ತಡ ಪರಿಸ್ಥಿತಿ ತಿಳಿಗೊಂಡಿದ್ದು, ಮಧ್ಯಾಹ್ನ ವೇಳೆ ಡಿಸ್ಚಾರ್ಜ್ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಕಟಣೆ ನೀಡಲಾಗಿತ್ತು. ಅದರಂತೆ, ಮಧ್ಯಾಹ್ನ ರಜನಿ ಅವರ ಆರೋಗ್ಯ ಪರಿಶೀಲಿಸಿದ ವೈದ್ಯರು, ಆಸ್ಪತ್ರೆಯಿಂದ ಮನೆಗೆ ತೆರಳಲು ಅನುಮತಿ ನೀಡಿದ್ದಾರೆ.
ಕೊವಿಡ್ 19 ನೆಗಟಿವ್ ವರದಿ ಇದ್ದರೂ ರಜನಿಕಾಂತ್ ಅವರು ಚಿತ್ರೀಕರಣಕ್ಕೆ ತೆರಳದಂತೆ ವೈದ್ಯರು ಸೂಚಿಸಿದ್ದಾರೆ. ಔಷಧಿ, ಆಹಾರ ಸೇವನೆ ಬಗ್ಗೆ ಸೂಕ್ತ ಸಲಹೆ ನೀಡಲಾಗಿದೆ. 70 ವರ್ಷ ವಯಸ್ಸಿನ ರಜನಿ ಅವರಿಗೆ ಈಗ ಸಂಪೂರ್ಣ ವಿಶ್ರಾಂತಿಯ ಅಗತ್ಯವಿದೆ. ಒಂದು ವಾರದ ಬಳಿಕ ಅವರ ರಕ್ತದೊತ್ತಡ ಪರೀಕ್ಷೆ ನಡೆಸಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದು ಅಪೊಲೊ ಆಸ್ಪತ್ರೆ ಅಧಿಕೃತ ಹೇಳಿಕೆ ನೀಡಿದೆ.

ಹೈದರಾಬಾದ್ ನಲ್ಲಿ ಡಿ.15ರಿಂದ ಅಣ್ಣಾತೆ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಅಣ್ಣಾತೆ ಚಿತ್ರ ತಂಡದ ಏಳು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್ ಅವರಲ್ಲಿ ರಕ್ತದೊತ್ತಡದ ಏರಿಳಿತ ಮತ್ತು ಬಳಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರದಂದು ಜ್ಯುಬಿಲಿಹಿಲ್ಸ್ ನಲ್ಲಿರಿವ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆಯಲ್ಲೂ ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಲಾಗಿತ್ತು. ಹೀಗಾಗಿ ಅವರ ಭೇಟಿಗೆ ಯಾರಿಗೂ ಅವಕಾಶ ನೀಡಿರಲಿಲ್ಲ.
ಜನವರಿ 21,2021ರಂದು ಹೊಸ ರಾಜಕೀಯ ಬದುಕು ಆರಂಭ, ಡಿಸೆಂಬರ್ 31ರಂದು ಹೊಸ ಪಕ್ಷದ ಬಗ್ಗೆ ಘೋಷಣೆ ಮಾಡುವುದಾಗಿ ರಜನಿಕಾಂತ್ ಘೋಷಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications