ನಟ ರವಿತೇಜ ಅವರ ಸೋದರ ಭೀಕರ ಅಪಘಾತದಲ್ಲಿ ಸಾವು
ಹೈದರಾಬಾದ್, ಜೂನ್ 25: ನಟ ರವಿತೇಜ ಅವರ ಕಿರಿಯ ಸೋದರ ಭರತ್ ಅವರು ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ.
ಹೈದರಾಬಾದಿನಲ್ಲಿ
ಕಳೆದ ರಾತ್ರಿಯಲ್ಲಿ ಹೈದರಾಬಾದಿನ ಷಂಶಾಬಾದ್ ಮಂಡಲದ ಕೊತ್ವಾಲಗುಡದ ಸಮೀಪ ಈ ಅಪಘಾತ ಸಂಭವಿಸಿದೆ. ಹೈದರಾಬಾದಿನಿಂದ 50 ಕಿ.ಮೀ ದೂರದಲ್ಲಿದೆ. ಹೊರ ವರ್ತುಲ ರಸ್ತೆಯಲ್ಲಿ ಅತಿ ವೇಗದಲ್ಲಿ ಬಂದ ಕಾರು, ನಿಂತಿದ್ದ ಲಾರಿಗೆ ಗುದ್ದಿದೆ.

ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರೂ ಭರತ್ ಅವರ ಪ್ರಾಣ ರಕ್ಷಣೆ ಸಾಧ್ಯವಾಗಲಿಲ್ಲ. ಭರತ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನಂತರ ಭರತ್ ಅವರ ಶವವನ್ನು ಉಸ್ಮಾನಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದರು ಎನ್ನಲಾಗಿದೆ. ಆದರೆ, ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.
46 ವರ್ಷ ವಯಸ್ಸಿನ ಭರತ್ ಅವರು ಕೆಲ ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಹಿಂದೆ ಕೂಡಾ ವೇಗವಾಗಿ ವಾಹನ ಚಾಲನೆ, ಮದ್ಯಪಾನ ಮಾಡಿ ಕಾರು ಚಾಲನೆ ಪ್ರಕರಣದಲ್ಲಿ ಸಿಲುಕಿದ್ದರು.
ಹಿಂದೊಮ್ಮೆ ಡ್ರಗ್ಸ್ ಸೇವನೆ ಆರೋಪದಲ್ಲಿ ಭರತ್ ಅವರನ್ನು ಮಾದಾಪುರ್ ಪೊಲೀಸರು ಬಂಧಿಸಲಾಗಿತ್ತು. ಸ್ಮಗ್ಲಿಂಗ್ ಆರೋಪಗಳಲ್ಲೂ ಅವರು ಭಾಗಿಯಾಗಿದ್ದರು ಎಂಬ ಆರೋಪಗಳೂ ಭರತ್ ಮೇಲಿತ್ತು.
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದ ಭರತ್ ನನ್ನು ಪೊಲೀಸರು ತಡೆದು ವಿಚಾರಿಸಿದಾಗ ಅವರ ಮೇಲೆ ಕೈ ಮಾಡಿದ ಆರೋಪದ ಮೇಲೆ ವಶಕ್ಕೆ ಪಡೆದಿದ್ದರು. ಈ ಹಿಂದೆ ತಿರುಮಲ ತಿರುಪತಿಯಲ್ಲಿ ಧೂಮಪಾನ ಮಾಡಿ ದಂಡತೆತ್ತಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications