ಮತದಾನದ ನಡುವೆ ಬಿಜೆಪಿ ಅಧ್ಯಕ್ಷರ ಹತ್ಯೆ ಯತ್ನದ ಗಾಳಿಸುದ್ದಿ!
ಹೈದರಾಬಾದ್, ಡಿ.1: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಾಗಿ ಮತದಾನ ನಡೆಯುವ ವೇಳೆಯಲ್ಲೇ ಗಾಳಿ ಸುದ್ದಿಯೊಂದು ಭಾರಿ ಸಂಚಲನ ಮೂಡಿಸಿತ್ತು. ತೆಲಂಗಾಣದ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಅವರ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಭಾರಿ ಗೊಂದಲ, ಗಾಬರಿ, ಆತಂಕಕ್ಕೆ ಕಾರಣವಾಗಿತ್ತು.
ಆದರೆ, ಕೆಲ ಮಾಧ್ಯಮಗಳಲ್ಲಿ ಬಂದಿದ್ದ ಈ ವರದಿಗಳನ್ನು ಸಂಪೂರ್ಣವಾಗಿ ಸುಳ್ಳು ಸುದ್ದಿ ಎಂದು ಹೈದರಾಬಾದ್ ಕೇಂದ್ರ ವಲಯದ ಜಂಟಿ ಪೊಲೀಸ್ ಆಯುಕ್ತ ಪಿ ವಿಶ್ವಪ್ರಸಾದ್ ಅವರು ಸ್ಪಷ್ಟಪಡಿಸಿದ್ದಾರೆ.
'' ಬಂಡಿ ಸಂಜಯ್ ಅವರ ಮೇಲೆ ಹತ್ಯೆ ನಡೆದಿದೆ ಎಂದು ಕೆಲವು ಖಾಸಗಿ ಸುದ್ದಿ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದು ಸಂಪೂರ್ಣ ತಪ್ಪು ಮಾಹಿತಿ ಹಾಗೂ ಇಂಥ ಗಾಳಿಸುದ್ದಿಯನ್ನು ನಂಬಬೇಡಿ'' ಎಂದು ವಿಶ್ವಪ್ರಸಾದ್ ಅವರು ಹೇಳಿದರು.

ಮಾದಾಪುರದಲ್ಲಿ ಎರಡು ರಾಜಕೀಯ ಗುಂಪುಗಳ ಜೊತೆ ಮಾತಿನ ಚಕಮಕಿ, ಸಂಘರ್ಷಗಳು ದಾಖಲಾಗಿವೆ. ಈ ಸಂದರ್ಭದಲ್ಲಿ ಕಾರಿನ ಗಾಜೊಂದನ್ನು ಪುಡಿ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ವಲಯದಲ್ಲಿ ದೂರು ದಾಖಲಾಗಿದೆ ಎಂದರು.
ಗಾಳಿಸುದ್ದಿ ನಂತರ ಭದ್ರತೆ
ಗಾಳಿ ಸುದ್ದಿ ಹಬ್ಬುತ್ತಿದ್ದಂತೆ ನೆಕ್ಲೆಸ್ ರಸ್ತೆಯ ಬಳಿ ಇದ್ದ ಬಂಡಿ ಸಂಜಯ್ ಬಳಿ ರಾಮ್ ಗೋಪಾಲ್ ಪೇಟ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ತೆರಳಿ ಮನೆಗೆ ತೆರಳಲು ಮನವಿ ಮಾಡಿಕೊಂಡಿದ್ದಾರೆ. ಮನೆಗೆ ಭದ್ರತೆ ಒದಗಿಸಲಾಗಿದೆ. ಆದರೆ ಬಂಡಿ ಸಂಜಯ್ ಬೆಂಬಲಿಗರ ಕಾರಿನ ಮೇಲೆ ಎಐಎಂಐಎಂ ಗೂಂಡಾಗಳು ದಾಳಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಇದು ಬಂಡಿ ಸಂಜಯ್ ಮಾಡಿರುವ ಡ್ರಾಮಾ ಎಂದು ಅಲ್ಲಗೆಳೆದಿದೆ.
2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷ 150ರಲ್ಲಿ 99 ಸ್ಥಾನಗಳಿಸಿ ಆಡಳಿತ ವಹಿಸಿಕೊಂಡಿತ್ತು. ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. 150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಬೆಳಗ್ಗೆ 7 ರಿಂದ ಸಂಜೆ 6 ತನಕ ಮತದಾನದ ನಡೆಸಲಾಗಿದೆ. ಸುಮಾರು 74.67 ಲಕ್ಷ ಮತದಾರರಿದ್ದು, ಸಂಜೆ 4 ಗಂಟೆ ವೇಳೆ ಶೇ 30ರಷ್ಟು ಮತದಾನ ದಾಖಲಾಗಿತ್ತು. ಡಿಸೆಂಬರ್ 4ರಂದು ಮತ ಎಣಿಕೆ ನಡೆಯಲಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications